Advertisement
MIRROR FOCUS

ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ

Share

ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಂಡು, ಅರಣ್ಯ ಭೂಮಿ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಶಿರಾ ತಾಲೂಕಿನ ಶೀಬಿ ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ಬೆಂಗಳೂರು-ಪುಣೆ ಹೆದ್ದಾರಿಯ ಪಕ್ಕದಲ್ಲೇ ಇರುವ ಈ ಅರಣ್ಯ ಭೂಮಿಗೆ ಭಾರೀ ಮೌಲ್ಯವಿದ್ದು, ಕೆಲವರು ಇದನ್ನು ಕಬಳಿಸಲು ಮತ್ತು ಒತ್ತುವರಿ ಮಾಡಲು ಯತ್ನಿಸುತ್ತಿದ್ದಾರೆ. ಹೀಗಾಗಿ ಅರಣ್ಯ ಸಿಬ್ಬಂದಿ ಕಟ್ಟೆಚ್ಚರದಿಂದ ಇರಬೇಕು ಎಂದು ನಿರ್ದೇಶನ ನೀಡಿದರು. ಕೆಲವರು ನ್ಯಾಯಾಲಯದಲ್ಲಿ ಭೂಮಿಯ ಮಾಲೀಕತ್ವದ ಹೋರಾಟ ನಡೆಸುತ್ತಿದ್ದಾರೆ. ಸುಪ್ರೀಂಕೋರ್ಟ್ ಡಿನೋಟಿಫಿಕೇಷನ್ ಆಗದ ಹೊರತು, ಅರಣ್ಯ ಭೂಮಿ ಅರಣ್ಯವಾಗಿಯೇ ಉಳಿಯುತ್ತದೆ. ಡಿನೋಟಿಫಿಕೇಷನ್ ಆಗದ ಈ ಅರಣ್ಯದಲ್ಲಿನ ಅಕ್ರಮ ಮಂಜೂರಾತಿ ರದ್ದುಪಡಿಸುವಂತೆ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ದಾವೆ ಹೂಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಶಿರಾ ಶಾಸಕ ಟಿ.ಬಿ.ಜಯಚಂದ್ರ ಅವರೂ ಸಹ ಈ ಅರಣ್ಯ ಪ್ರದೇಶವನ್ನು ಸಂರಕ್ಷಿಸಲು ಬೇಲಿ ಹಾಕುವ ಬಗ್ಗೆ ಪ್ರಸ್ತಾವನೆ ನೀಡಿದ್ದು, ಈ ಅರಣ್ಯ ಪ್ರದೇಶವು ಭೂಮಾಫಿಯಾದ ಪಾಲಾಗದಂತೆ ಉಳಿಸಲು ಎಲ್ಲ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

4 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

9 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

14 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

1 day ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

2 days ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

2 days ago