Advertisement
ಸುದ್ದಿಗಳು

ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ | ಕಾನೂನು ಕ್ರಮಕ್ಕೆ ಒಳಪಡಿಸಲು ಸರ್ಕಾರ ಸೂಚನೆ |

Share

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಮಿತಿ ಮೀರಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಫೇಕ್‌ನ್ಯೂಸ್‌ಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಫೇಕ್ ನ್ಯೂಸ್‌ಗಳ ಹಾವಳಿ ಹೆಚ್ಚಾಗಿತ್ತು. ಈ ಬಾರಿ ಕೂಡ ಅದೇ ತಂತ್ರವನ್ನು ರಾಜಕೀಯ ವಿರೋಧಿಗಳು ಅನುಸರಿಸುತ್ತಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಮಾಮೂಲಿಯಂತೆ ಫೇಕ್ ನ್ಯೂಸ್‌ಗಳನ್ನು ಹೆಚ್ಚೆಚ್ಚು ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಹೀಗಾಗಿ ಆರಂಭದಲ್ಲೇ ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಬೇರು ಸಮೇತ ಕತ್ತರಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ.

ಮಕ್ಕಳ ಕಳ್ಳರು, ಗೋಮಾಂಸ ಸಾಗಿಸುವವರು… ಇತ್ಯಾದಿ ಸುಳ್ಳು ಸುದ್ದಿಗಳನ್ನು ಹರಡಿಸಿ ಕಳೆದ ಬಾರಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ಮಾಡಿದ್ದರು. ಈ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿ ಮತ್ತು ಸಂಘ ಪರಿವಾರವನ್ನು ಸ್ಪಷ್ಟವಾಗಿ ಮತ್ತು ಅಷ್ಟೆ ನಿಷ್ಠುರವಾಗಿ ತಿರಸ್ಕರಿಸಿದ್ದಾರೆ. ಆದರೆ ದೇಶದ ಪ್ರಜಾಪ್ರಭುತ್ವದ ಉಳಿವಿಗೆ ಅತ್ಯಂತ ಮಹತ್ವದ್ದಾಗಿರುವ 2024ರ ಲೋಕಸಭಾ ಚುನಾವಣೆಗೆ ನಾವು ಸಜ್ಜಗುತ್ತಿರುವ ಹೊತ್ತಿನಲ್ಲಿ ಸುಳ್ಳು ಸುದ್ದಿ, ವದಂತಿಗಳ ಮೂಲಕ ಗುಂಪುಹಲ್ಲೆ, ಗಲಭೆಗಳನ್ನು ಸೃಷ್ಟಿಸುವ ಪ್ರಯತ್ನಗಳು ನಡೆಯಬಹುದು ಎನ್ನುವ ಸೂಚನೆಗಳೂ ಕಾಣಿಸುತ್ತಿವೆ. ಹೀಗಾಗಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಪೊಲೀಸ್ ಪ್ರಧಾನ ಕಚೇರಿಯಲ್ಲೇ ಒಂದು ತಾಂತ್ರಿಕ ತಂಡ ಫೇಕ್ ನ್ಯೂಸ್‌ಗಳನ್ನು ಪತ್ತೆ ಹಚ್ಚಿ, ಫ್ಯಾಕ್ಟ್ ಚೆಕ್ ಮಾಡಿ ಜನರನ್ನು ಎಚ್ಚರಿಸುವ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಸುತ್ತಿತ್ತು. ಆದರೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಫ್ಯಾಕ್ಟ್ ಚೆಕ್ ಮಾಡುವುದನ್ನು ಬಂದ್ ಮಾಡಿಸಿದೆ. ಇದನ್ನು ಮತ್ತೆ ಆರಂಭಿಸಬೇಕು. ಸೈಬರ್ ಪೊಲೀಸರು ಫೇಕ್ ನ್ಯೂಸ್‌ಗಳ ಮೂಲಗಳನ್ನು ಪತ್ತೆಹಚ್ಚಲು ಸರ್ವಸನ್ನದ್ದವಾಗಿ ಕೆಲಸ ಮಾಡಬೇಕು. ಪ್ರತೀ ತಿಂಗಳು ಈ ಬಗ್ಗೆ ವರದಿಯನ್ನು ನೀಡಬೇಕು. ಸುಳ್ಳು ಸುದ್ದಿಗಳ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನವನ್ನು ಯಾರೇ ಮಾಡಿದರೂ ಅದನ್ನು ಸರ್ಕಾರ ಸಹಿಸುವುದಿಲ್ಲ. ಸಾಮರಸ್ಯ ಕಾಪಾಡುವ ಜೊತೆಗೆ ಪ್ರತಿಯೊಬ್ಬರಿಗೂ ಶಾಂತಿ, ನೆಮ್ಮದಿಯ ವಾತಾವರಣವನ್ನು ನೀಡಲು ನಾವು ಬದ್ಧರಿದ್ದೇವೆ ಮುಖ್ಯಮಂತ್ರಿ  ಸಿದ್ಧರಾಮಯ್ಯ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

20 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago