Advertisement
ಸುದ್ದಿಗಳು

ಬನ್ನೇರುಘಟ್ಟದಲ್ಲಿ ಚಿರತೆಗಳಿಗಾಗಿ ತಾಣ ನಿರ್ಮಾಣ

Share

ಮೊದಲ ಚಿರತೆ ಸಫಾರಿ ಶೀಘ್ರದಲ್ಲೇ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 50 ಎಕರೆ ಪ್ರದೇಶದಲ್ಲಿ ಬರಲಿದೆ. ಬನ್ನೇರುಘಟ್ಟವು ಯಾವುದೇ ಮೃಗಾಲಯದಲ್ಲಿ ಅತಿ ಹೆಚ್ಚು ಚಿರತೆಗಳನ್ನು ಹೊಂದಿದೆ ಮತ್ತು ಸಫಾರಿಗೆ ಲಭ್ಯವಿರುವ ಸ್ಥಳವನ್ನು ಬಳಸಿಕೊಳ್ಳಲು ಆಡಳಿತವು ವ್ಯಾಪಾಕವಾಗಿ ಕಾರ್ಯನಿರ್ವಹಿಸುತ್ತಿದೆ.

ಚಿರತೆ ಸಫಾರಿಗಾಗಿ ಮೀಸಲಿಟ್ಟ ಪ್ರದೇಶವು ಸ್ಲಾತ್ ಬೇರ್ ಸಫಾರಿ ಮತ್ತು ಪಾರುಗಾಣಿಕಾ ಕೇಂದ್ರಕ್ಕಿಂತ ಬಿನ್ನವಾಗಿದೆ. ಮಹಾರಾಷ್ಟ್ರದ ಬಾಳಾಸಾಹೇಬ್ ಠಾಕ್ರೆ ಗೊರೆವಾಡ ಅಂತರಾಷ್ಟ್ರೀಯ ಝೂಲಾಜಿಕಲ್ ಪಾರ್ಕ್ ನಲ್ಲಿ ಚಿರತೆಗಳು ಹೇಗೆ ನೆಲೆಸಿವೆ ಎಂಬುದನ್ನು ಅಧ್ಯಯನ ಮಾಡಲು ಬನ್ನೇರುಘಟ್ಟದಿಂದ ಒಂದು ತಂಡವನ್ನು ಮಹಾರಾಷ್ಟ್ರಕ್ಕೆ ಕಳುಹಿಸಲಾಗಿದೆ.

ನಾವು ಕೇವಲ ಬೇಲಿ ಮತ್ತು ಗೋಡೆಗಳ ಎತ್ತರವನ್ನು ಹೆಚ್ಚಿಸಿ ಆಳವಾದ ಕಂಕಗಳನ್ನು ರಚಿಸುತ್ತಿಲ್ಲ, ನಾವು ಚಿರತೆಗಳಿಗೆ ರೇಡಿಯೋ ಕಾಲರ್ ಮಾಡುವ ಕೆಲಸವನ್ನೂ ಮಾಡುತ್ತಿದ್ದೇವೆ.ಇದರಿಂದ ಒಂದು ಚಿರತೆಯಾದರೂ ತಪ್ಪಿಸಿಕೊಂಡರೂ, ಟ್ರ‍್ಯಾಕ್ ಮಾಡುವುದು ಸುಲಭ. 15 ದಿನಗಳ ಪ್ರಯೋಗ ಅವಧಿಯನ್ನು ಸಹ ಅಧ್ಯಯನ ಮಾಡಲು ಯೋಜಿಸಲಾಗಿದೆ. ಪ್ರಾಣಿಗಳ ವರ್ತನೆ, ಜೀಪು ಮತ್ತು ಬಸ್ ಸಂಚಾರಕ್ಕೆ ಅವು ಹೇಗೆ ಪ್ರತಿಕ್ರಿಯಿಸುತ್ತದೆ, ಸುತ್ತಮುತ್ತಲಿನ ಜನರ ಉಪಸ್ಥಿತಿಯನ್ನು ನೋಡಿ, ಸಿಂಹ ಮತ್ತು ಹುಲಿ ಸಫಾರಿ ಇರುವಾಗ, ಚಿರತೆಗಳ ವೈಶಿಷ್ಟ್ಯವು ವಿಭಿನ್ನವಾಗಿರುತ್ತದೆ. ಆದ್ದರಿಂದ ಎಚ್ಚರಿಕೆ ವಹಿಸಬೇಕು ಎಂದು ಬಿಬಿಪಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸದ್ಯ ಬನ್ನೇರುಘಟ್ಟದಲ್ಲಿ 39 ಚಿರತೆಗಳು ಇವೆ. ಚಿರತೆಗಳು ಚಾಣಾಕ್ಷ ಮತ್ತು ನಿರ್ವಹಿಸಲು ತುಂಬಾ ಕಷ್ಟ. ಚಿರತೆಗಳು ಸಫಾರಿಗೆ ಹೋಗುವಾಗ ನಾಗರಿಕರು ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಿರುವ ಮಾರ್ಗಗಳು, ಚಿರತೆಗಳು ದೂರಸರಿಯುವ ಮತ್ತು ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಬೇಕು ಎಂದು ಕರ್ನಾಟಕದ ಮೃಗಾಲಯ ಪ್ರಾಧಿಕಾರದ ಅಧಿಕಾರಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

2 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

7 hours ago

ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು

ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…

7 hours ago

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…

7 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…

7 hours ago

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

24 hours ago