Advertisement
ಸುದ್ದಿಗಳು

ಬನ್ನೇರುಘಟ್ಟದಲ್ಲಿ ಚಿರತೆಗಳಿಗಾಗಿ ತಾಣ ನಿರ್ಮಾಣ

Share

ಮೊದಲ ಚಿರತೆ ಸಫಾರಿ ಶೀಘ್ರದಲ್ಲೇ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 50 ಎಕರೆ ಪ್ರದೇಶದಲ್ಲಿ ಬರಲಿದೆ. ಬನ್ನೇರುಘಟ್ಟವು ಯಾವುದೇ ಮೃಗಾಲಯದಲ್ಲಿ ಅತಿ ಹೆಚ್ಚು ಚಿರತೆಗಳನ್ನು ಹೊಂದಿದೆ ಮತ್ತು ಸಫಾರಿಗೆ ಲಭ್ಯವಿರುವ ಸ್ಥಳವನ್ನು ಬಳಸಿಕೊಳ್ಳಲು ಆಡಳಿತವು ವ್ಯಾಪಾಕವಾಗಿ ಕಾರ್ಯನಿರ್ವಹಿಸುತ್ತಿದೆ.

ಚಿರತೆ ಸಫಾರಿಗಾಗಿ ಮೀಸಲಿಟ್ಟ ಪ್ರದೇಶವು ಸ್ಲಾತ್ ಬೇರ್ ಸಫಾರಿ ಮತ್ತು ಪಾರುಗಾಣಿಕಾ ಕೇಂದ್ರಕ್ಕಿಂತ ಬಿನ್ನವಾಗಿದೆ. ಮಹಾರಾಷ್ಟ್ರದ ಬಾಳಾಸಾಹೇಬ್ ಠಾಕ್ರೆ ಗೊರೆವಾಡ ಅಂತರಾಷ್ಟ್ರೀಯ ಝೂಲಾಜಿಕಲ್ ಪಾರ್ಕ್ ನಲ್ಲಿ ಚಿರತೆಗಳು ಹೇಗೆ ನೆಲೆಸಿವೆ ಎಂಬುದನ್ನು ಅಧ್ಯಯನ ಮಾಡಲು ಬನ್ನೇರುಘಟ್ಟದಿಂದ ಒಂದು ತಂಡವನ್ನು ಮಹಾರಾಷ್ಟ್ರಕ್ಕೆ ಕಳುಹಿಸಲಾಗಿದೆ.

ನಾವು ಕೇವಲ ಬೇಲಿ ಮತ್ತು ಗೋಡೆಗಳ ಎತ್ತರವನ್ನು ಹೆಚ್ಚಿಸಿ ಆಳವಾದ ಕಂಕಗಳನ್ನು ರಚಿಸುತ್ತಿಲ್ಲ, ನಾವು ಚಿರತೆಗಳಿಗೆ ರೇಡಿಯೋ ಕಾಲರ್ ಮಾಡುವ ಕೆಲಸವನ್ನೂ ಮಾಡುತ್ತಿದ್ದೇವೆ.ಇದರಿಂದ ಒಂದು ಚಿರತೆಯಾದರೂ ತಪ್ಪಿಸಿಕೊಂಡರೂ, ಟ್ರ‍್ಯಾಕ್ ಮಾಡುವುದು ಸುಲಭ. 15 ದಿನಗಳ ಪ್ರಯೋಗ ಅವಧಿಯನ್ನು ಸಹ ಅಧ್ಯಯನ ಮಾಡಲು ಯೋಜಿಸಲಾಗಿದೆ. ಪ್ರಾಣಿಗಳ ವರ್ತನೆ, ಜೀಪು ಮತ್ತು ಬಸ್ ಸಂಚಾರಕ್ಕೆ ಅವು ಹೇಗೆ ಪ್ರತಿಕ್ರಿಯಿಸುತ್ತದೆ, ಸುತ್ತಮುತ್ತಲಿನ ಜನರ ಉಪಸ್ಥಿತಿಯನ್ನು ನೋಡಿ, ಸಿಂಹ ಮತ್ತು ಹುಲಿ ಸಫಾರಿ ಇರುವಾಗ, ಚಿರತೆಗಳ ವೈಶಿಷ್ಟ್ಯವು ವಿಭಿನ್ನವಾಗಿರುತ್ತದೆ. ಆದ್ದರಿಂದ ಎಚ್ಚರಿಕೆ ವಹಿಸಬೇಕು ಎಂದು ಬಿಬಿಪಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸದ್ಯ ಬನ್ನೇರುಘಟ್ಟದಲ್ಲಿ 39 ಚಿರತೆಗಳು ಇವೆ. ಚಿರತೆಗಳು ಚಾಣಾಕ್ಷ ಮತ್ತು ನಿರ್ವಹಿಸಲು ತುಂಬಾ ಕಷ್ಟ. ಚಿರತೆಗಳು ಸಫಾರಿಗೆ ಹೋಗುವಾಗ ನಾಗರಿಕರು ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಿರುವ ಮಾರ್ಗಗಳು, ಚಿರತೆಗಳು ದೂರಸರಿಯುವ ಮತ್ತು ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಬೇಕು ಎಂದು ಕರ್ನಾಟಕದ ಮೃಗಾಲಯ ಪ್ರಾಧಿಕಾರದ ಅಧಿಕಾರಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

16 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

17 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago