Advertisement
MIRROR FOCUS

ಮಳೆ ನೀರನ್ನು ಹಿಡಿದಿಡುವ ಕಾರ್ಯ ಆಗಲಿ | ಬರಗಾಲ ಬಂದರು ನೀರಿನ ಬವಣೆ ತಪ್ಪಿಸಬಹುದು |

Share

ಈ ಬಾರಿಯ ಬೇಸಗೆ ಹಾಗೂ ಬರಗಾಲ ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಬೇಕು. ಉತ್ತಮ ಮಳೆಯ ನಿರೀಕ್ಷೆ ಇದೆ ಈ ಬಾರಿ. ಅದಕ್ಕಾಗಿ ನೀರು ಸಂರಕ್ಷಣೆ ಮಾಡೋಣ, ನೀರು ಇಂಗಿಸುವ ಕಡೆಗೂ ಆದ್ಯತೆ ನೀಡಬೇಕು. ಇದಕ್ಕಾಗಿ ರೈತರು ಏನು ಮಾಡಬಹುದು..?

ರೈತರು ತಮ್ಮ ಜಮೀನುಗಳಲ್ಲಿ ಎಕರೆಗೆ ಈ ರೀತಿ 20 ಕಂದಕ ತೆಗೆದು(5ಮೀ ಉದ್ದ, 1 ಮೀ ಆಗಲ, 2 ಅಡಿ ಆಳ) ಬಂದ ಮಣ್ಣಿನಿಂದ ಬದು ಹಾಕಿಕೊಂಡರೆ ಮಣ್ಣು ಸವಕಳಿ ತಡೆಯುವುದರ ಜೊತೆಗೆ 20 ಕಂದಕಗಳಲ್ಲಿ ಒಂದು ಮಳೆಗೆ 60,000 ಲೀ ನೀರು ನಿಲ್ಲಿಸಿ ಹಿಂಗಿಸಬಹುದು. ವರ್ಷದಲ್ಲಿ 8-10 ಮಳೆಯಾದರೆ 5ಲಕ್ಷ ಲೀ ಮಳೆನೀರನ್ನು ಭೂಮಿಗೆ ಹಿಂಗಿಸಬಹುದು. ಜೆಸಿಬಿ ಕರೆದರೆ 5-6ಗಂಟೆ ಕೆಲಸ, 6-7 ಸಾವಿರ ಖರ್ಚಾಗಬಹುದು.

ಯಾವುದೇ ಕಾರಣಕ್ಕೂ ಕಂದಕಗಳನ್ನು ಮುಚ್ಚಬಾರದು, ಉಳುಮೆ ಮಾಡುವಾಗ ಮುಚ್ಚದಂತೆ ಟ್ರಾಕ್ಟರ್ ಚಾಲಕನಿಗೆ ತಿಳಿಸಬೇಕು, ಪ್ರತಿ ವರ್ಷ ಮಳೆಗಾಲಕ್ಕೂ ಮುನ್ನ 2-3 ಜನ ಆಳು ಬಿಟ್ಟು ಕಂದಕಲ್ಲಿ ಬಿದ್ದಿರುವ ಮಣ್ಣನ್ನು ಎತ್ತಿಕೊಂಡು ಜಮೀನಿನಲ್ಲಿ ಹರಡಿಕೊಳ್ಳಬೇಕು. ಹೆಚ್ಚಾದ ನೀರು ಸುರಕ್ಷತವಾಗಿ ಹೊರಹೋಗಲು ಕಲ್ಲುಗಳಿಂದ / ಪೈಪ್ ಹಾಕಿ ದಾರಿ (ಕೋಡಿ) ಮಾಡಿಕೊಡಬೇಕು. ಈ ರೀತಿ ಎಲ್ಲರೂ ಮಾಡಿದರೆ, ಊರಿನಲ್ಲಿರುವ ಎಲ್ಲಾ ಬೋರುಗಳು ಮುಂದಿನ ವರ್ಷ ಚೆನ್ನಾಗಿ ನಡೆಯುತ್ತವೆ, ಇಲ್ಲದಿದ್ದರೆ ಮಳೆಗಾಲ ಮುಗಿದ 3-4 ತಿಂಗಳಿಗೆ ಟ್ಯಾಂಕರ್ ಅವಲಂಬನೆ ತಪ್ಪಿದ್ದಲ್ಲ, ಹಲವು ತೋಟಗಳು ಕಾಣೆಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ.

ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

26 minutes ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

6 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

15 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

16 hours ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

16 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

1 day ago