Advertisement
MIRROR FOCUS

ಮಳೆ ನೀರನ್ನು ಹಿಡಿದಿಡುವ ಕಾರ್ಯ ಆಗಲಿ | ಬರಗಾಲ ಬಂದರು ನೀರಿನ ಬವಣೆ ತಪ್ಪಿಸಬಹುದು |

Share

ಈ ಬಾರಿಯ ಬೇಸಗೆ ಹಾಗೂ ಬರಗಾಲ ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಬೇಕು. ಉತ್ತಮ ಮಳೆಯ ನಿರೀಕ್ಷೆ ಇದೆ ಈ ಬಾರಿ. ಅದಕ್ಕಾಗಿ ನೀರು ಸಂರಕ್ಷಣೆ ಮಾಡೋಣ, ನೀರು ಇಂಗಿಸುವ ಕಡೆಗೂ ಆದ್ಯತೆ ನೀಡಬೇಕು. ಇದಕ್ಕಾಗಿ ರೈತರು ಏನು ಮಾಡಬಹುದು..?

ರೈತರು ತಮ್ಮ ಜಮೀನುಗಳಲ್ಲಿ ಎಕರೆಗೆ ಈ ರೀತಿ 20 ಕಂದಕ ತೆಗೆದು(5ಮೀ ಉದ್ದ, 1 ಮೀ ಆಗಲ, 2 ಅಡಿ ಆಳ) ಬಂದ ಮಣ್ಣಿನಿಂದ ಬದು ಹಾಕಿಕೊಂಡರೆ ಮಣ್ಣು ಸವಕಳಿ ತಡೆಯುವುದರ ಜೊತೆಗೆ 20 ಕಂದಕಗಳಲ್ಲಿ ಒಂದು ಮಳೆಗೆ 60,000 ಲೀ ನೀರು ನಿಲ್ಲಿಸಿ ಹಿಂಗಿಸಬಹುದು. ವರ್ಷದಲ್ಲಿ 8-10 ಮಳೆಯಾದರೆ 5ಲಕ್ಷ ಲೀ ಮಳೆನೀರನ್ನು ಭೂಮಿಗೆ ಹಿಂಗಿಸಬಹುದು. ಜೆಸಿಬಿ ಕರೆದರೆ 5-6ಗಂಟೆ ಕೆಲಸ, 6-7 ಸಾವಿರ ಖರ್ಚಾಗಬಹುದು.

ಯಾವುದೇ ಕಾರಣಕ್ಕೂ ಕಂದಕಗಳನ್ನು ಮುಚ್ಚಬಾರದು, ಉಳುಮೆ ಮಾಡುವಾಗ ಮುಚ್ಚದಂತೆ ಟ್ರಾಕ್ಟರ್ ಚಾಲಕನಿಗೆ ತಿಳಿಸಬೇಕು, ಪ್ರತಿ ವರ್ಷ ಮಳೆಗಾಲಕ್ಕೂ ಮುನ್ನ 2-3 ಜನ ಆಳು ಬಿಟ್ಟು ಕಂದಕಲ್ಲಿ ಬಿದ್ದಿರುವ ಮಣ್ಣನ್ನು ಎತ್ತಿಕೊಂಡು ಜಮೀನಿನಲ್ಲಿ ಹರಡಿಕೊಳ್ಳಬೇಕು. ಹೆಚ್ಚಾದ ನೀರು ಸುರಕ್ಷತವಾಗಿ ಹೊರಹೋಗಲು ಕಲ್ಲುಗಳಿಂದ / ಪೈಪ್ ಹಾಕಿ ದಾರಿ (ಕೋಡಿ) ಮಾಡಿಕೊಡಬೇಕು. ಈ ರೀತಿ ಎಲ್ಲರೂ ಮಾಡಿದರೆ, ಊರಿನಲ್ಲಿರುವ ಎಲ್ಲಾ ಬೋರುಗಳು ಮುಂದಿನ ವರ್ಷ ಚೆನ್ನಾಗಿ ನಡೆಯುತ್ತವೆ, ಇಲ್ಲದಿದ್ದರೆ ಮಳೆಗಾಲ ಮುಗಿದ 3-4 ತಿಂಗಳಿಗೆ ಟ್ಯಾಂಕರ್ ಅವಲಂಬನೆ ತಪ್ಪಿದ್ದಲ್ಲ, ಹಲವು ತೋಟಗಳು ಕಾಣೆಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ.

ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

5 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

5 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

6 hours ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

13 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

17 hours ago

ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…

18 hours ago