ಈ ಬಾರಿಯ ಬೇಸಗೆ ಹಾಗೂ ಬರಗಾಲ ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಬೇಕು. ಉತ್ತಮ ಮಳೆಯ ನಿರೀಕ್ಷೆ ಇದೆ ಈ ಬಾರಿ. ಅದಕ್ಕಾಗಿ ನೀರು ಸಂರಕ್ಷಣೆ ಮಾಡೋಣ, ನೀರು ಇಂಗಿಸುವ ಕಡೆಗೂ ಆದ್ಯತೆ ನೀಡಬೇಕು. ಇದಕ್ಕಾಗಿ ರೈತರು ಏನು ಮಾಡಬಹುದು..?
ರೈತರು ತಮ್ಮ ಜಮೀನುಗಳಲ್ಲಿ ಎಕರೆಗೆ ಈ ರೀತಿ 20 ಕಂದಕ ತೆಗೆದು(5ಮೀ ಉದ್ದ, 1 ಮೀ ಆಗಲ, 2 ಅಡಿ ಆಳ) ಬಂದ ಮಣ್ಣಿನಿಂದ ಬದು ಹಾಕಿಕೊಂಡರೆ ಮಣ್ಣು ಸವಕಳಿ ತಡೆಯುವುದರ ಜೊತೆಗೆ 20 ಕಂದಕಗಳಲ್ಲಿ ಒಂದು ಮಳೆಗೆ 60,000 ಲೀ ನೀರು ನಿಲ್ಲಿಸಿ ಹಿಂಗಿಸಬಹುದು. ವರ್ಷದಲ್ಲಿ 8-10 ಮಳೆಯಾದರೆ 5ಲಕ್ಷ ಲೀ ಮಳೆನೀರನ್ನು ಭೂಮಿಗೆ ಹಿಂಗಿಸಬಹುದು. ಜೆಸಿಬಿ ಕರೆದರೆ 5-6ಗಂಟೆ ಕೆಲಸ, 6-7 ಸಾವಿರ ಖರ್ಚಾಗಬಹುದು.
ಯಾವುದೇ ಕಾರಣಕ್ಕೂ ಕಂದಕಗಳನ್ನು ಮುಚ್ಚಬಾರದು, ಉಳುಮೆ ಮಾಡುವಾಗ ಮುಚ್ಚದಂತೆ ಟ್ರಾಕ್ಟರ್ ಚಾಲಕನಿಗೆ ತಿಳಿಸಬೇಕು, ಪ್ರತಿ ವರ್ಷ ಮಳೆಗಾಲಕ್ಕೂ ಮುನ್ನ 2-3 ಜನ ಆಳು ಬಿಟ್ಟು ಕಂದಕಲ್ಲಿ ಬಿದ್ದಿರುವ ಮಣ್ಣನ್ನು ಎತ್ತಿಕೊಂಡು ಜಮೀನಿನಲ್ಲಿ ಹರಡಿಕೊಳ್ಳಬೇಕು. ಹೆಚ್ಚಾದ ನೀರು ಸುರಕ್ಷತವಾಗಿ ಹೊರಹೋಗಲು ಕಲ್ಲುಗಳಿಂದ / ಪೈಪ್ ಹಾಕಿ ದಾರಿ (ಕೋಡಿ) ಮಾಡಿಕೊಡಬೇಕು. ಈ ರೀತಿ ಎಲ್ಲರೂ ಮಾಡಿದರೆ, ಊರಿನಲ್ಲಿರುವ ಎಲ್ಲಾ ಬೋರುಗಳು ಮುಂದಿನ ವರ್ಷ ಚೆನ್ನಾಗಿ ನಡೆಯುತ್ತವೆ, ಇಲ್ಲದಿದ್ದರೆ ಮಳೆಗಾಲ ಮುಗಿದ 3-4 ತಿಂಗಳಿಗೆ ಟ್ಯಾಂಕರ್ ಅವಲಂಬನೆ ತಪ್ಪಿದ್ದಲ್ಲ, ಹಲವು ತೋಟಗಳು ಕಾಣೆಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ.
ಜುಲೈ 5ರ ನಂತರ ದುರ್ಬಲಗೊಂಡು ಸಾಂಪ್ರದಾಯಿಕ ಮುಂಗಾರು ಮಾರುತಗಳು ಬಲಗೊಳ್ಳುವ ಲಕ್ಷಣಗಳಿವೆ. ಜುಲೈ…
ಭತ್ತ ಬೆಳೆಯುವವರ(Paddy crop) ಸಂಖ್ಯೆ ಕಡಿಮೆಯಾಗಿದೆ. ಅಕ್ಕಿ ರೇಟ್(Rice rate) ಗಗನಕ್ಕೇರಿದೆ. ಹೀಗೆ…
ಮಂಗಳೂರು(Mangaluru) ತನ್ನ ಹಲವಾರು ಧಾರ್ಮಿಕ ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ(Kukke subrahmanya), ಶ್ರೀ ಕ್ಷೇತ್ರ…
ಸಿಮೆಂಟ್ - ಕಬ್ಬಿಣ(cement- Iron) ಬಂದ ಮೇಲೆ ಮೂಲೆ ಗುಂಪಾಗಿದ್ದ ಬಿದಿರಿಗೆ(Bamboo) ಇತ್ತೀಚೆಗೆ…
ಹಿಂದೂ ಧರ್ಮದ ನಾಲ್ಕನೇಯ ಮಾಸವನ್ನು ಆಷಾಢ ಮಾಸ(Ashada Masa) ಎಂದು ಕರೆಯಲಾಗುತ್ತದೆ. ಈ…
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೆಲವು ತಾಲೂಕುಗಳಲ್ಲಿ ಶಾಲೆಗೆ ರಜೆ ನೀಡಲಾಗಿದೆ.