Advertisement
MIRROR FOCUS

ಮಳೆ ನೀರನ್ನು ಹಿಡಿದಿಡುವ ಕಾರ್ಯ ಆಗಲಿ | ಬರಗಾಲ ಬಂದರು ನೀರಿನ ಬವಣೆ ತಪ್ಪಿಸಬಹುದು |

Share

ಈ ಬಾರಿಯ ಬೇಸಗೆ ಹಾಗೂ ಬರಗಾಲ ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಬೇಕು. ಉತ್ತಮ ಮಳೆಯ ನಿರೀಕ್ಷೆ ಇದೆ ಈ ಬಾರಿ. ಅದಕ್ಕಾಗಿ ನೀರು ಸಂರಕ್ಷಣೆ ಮಾಡೋಣ, ನೀರು ಇಂಗಿಸುವ ಕಡೆಗೂ ಆದ್ಯತೆ ನೀಡಬೇಕು. ಇದಕ್ಕಾಗಿ ರೈತರು ಏನು ಮಾಡಬಹುದು..?

ರೈತರು ತಮ್ಮ ಜಮೀನುಗಳಲ್ಲಿ ಎಕರೆಗೆ ಈ ರೀತಿ 20 ಕಂದಕ ತೆಗೆದು(5ಮೀ ಉದ್ದ, 1 ಮೀ ಆಗಲ, 2 ಅಡಿ ಆಳ) ಬಂದ ಮಣ್ಣಿನಿಂದ ಬದು ಹಾಕಿಕೊಂಡರೆ ಮಣ್ಣು ಸವಕಳಿ ತಡೆಯುವುದರ ಜೊತೆಗೆ 20 ಕಂದಕಗಳಲ್ಲಿ ಒಂದು ಮಳೆಗೆ 60,000 ಲೀ ನೀರು ನಿಲ್ಲಿಸಿ ಹಿಂಗಿಸಬಹುದು. ವರ್ಷದಲ್ಲಿ 8-10 ಮಳೆಯಾದರೆ 5ಲಕ್ಷ ಲೀ ಮಳೆನೀರನ್ನು ಭೂಮಿಗೆ ಹಿಂಗಿಸಬಹುದು. ಜೆಸಿಬಿ ಕರೆದರೆ 5-6ಗಂಟೆ ಕೆಲಸ, 6-7 ಸಾವಿರ ಖರ್ಚಾಗಬಹುದು.

ಯಾವುದೇ ಕಾರಣಕ್ಕೂ ಕಂದಕಗಳನ್ನು ಮುಚ್ಚಬಾರದು, ಉಳುಮೆ ಮಾಡುವಾಗ ಮುಚ್ಚದಂತೆ ಟ್ರಾಕ್ಟರ್ ಚಾಲಕನಿಗೆ ತಿಳಿಸಬೇಕು, ಪ್ರತಿ ವರ್ಷ ಮಳೆಗಾಲಕ್ಕೂ ಮುನ್ನ 2-3 ಜನ ಆಳು ಬಿಟ್ಟು ಕಂದಕಲ್ಲಿ ಬಿದ್ದಿರುವ ಮಣ್ಣನ್ನು ಎತ್ತಿಕೊಂಡು ಜಮೀನಿನಲ್ಲಿ ಹರಡಿಕೊಳ್ಳಬೇಕು. ಹೆಚ್ಚಾದ ನೀರು ಸುರಕ್ಷತವಾಗಿ ಹೊರಹೋಗಲು ಕಲ್ಲುಗಳಿಂದ / ಪೈಪ್ ಹಾಕಿ ದಾರಿ (ಕೋಡಿ) ಮಾಡಿಕೊಡಬೇಕು. ಈ ರೀತಿ ಎಲ್ಲರೂ ಮಾಡಿದರೆ, ಊರಿನಲ್ಲಿರುವ ಎಲ್ಲಾ ಬೋರುಗಳು ಮುಂದಿನ ವರ್ಷ ಚೆನ್ನಾಗಿ ನಡೆಯುತ್ತವೆ, ಇಲ್ಲದಿದ್ದರೆ ಮಳೆಗಾಲ ಮುಗಿದ 3-4 ತಿಂಗಳಿಗೆ ಟ್ಯಾಂಕರ್ ಅವಲಂಬನೆ ತಪ್ಪಿದ್ದಲ್ಲ, ಹಲವು ತೋಟಗಳು ಕಾಣೆಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ.

ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

7 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

8 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

8 hours ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

8 hours ago

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

24 hours ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

1 day ago