ಈ ಬಾರಿಯ ಬೇಸಗೆ ಹಾಗೂ ಬರಗಾಲ ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಬೇಕು. ಉತ್ತಮ ಮಳೆಯ ನಿರೀಕ್ಷೆ ಇದೆ ಈ ಬಾರಿ. ಅದಕ್ಕಾಗಿ ನೀರು ಸಂರಕ್ಷಣೆ ಮಾಡೋಣ, ನೀರು ಇಂಗಿಸುವ ಕಡೆಗೂ ಆದ್ಯತೆ ನೀಡಬೇಕು. ಇದಕ್ಕಾಗಿ ರೈತರು ಏನು ಮಾಡಬಹುದು..?
ರೈತರು ತಮ್ಮ ಜಮೀನುಗಳಲ್ಲಿ ಎಕರೆಗೆ ಈ ರೀತಿ 20 ಕಂದಕ ತೆಗೆದು(5ಮೀ ಉದ್ದ, 1 ಮೀ ಆಗಲ, 2 ಅಡಿ ಆಳ) ಬಂದ ಮಣ್ಣಿನಿಂದ ಬದು ಹಾಕಿಕೊಂಡರೆ ಮಣ್ಣು ಸವಕಳಿ ತಡೆಯುವುದರ ಜೊತೆಗೆ 20 ಕಂದಕಗಳಲ್ಲಿ ಒಂದು ಮಳೆಗೆ 60,000 ಲೀ ನೀರು ನಿಲ್ಲಿಸಿ ಹಿಂಗಿಸಬಹುದು. ವರ್ಷದಲ್ಲಿ 8-10 ಮಳೆಯಾದರೆ 5ಲಕ್ಷ ಲೀ ಮಳೆನೀರನ್ನು ಭೂಮಿಗೆ ಹಿಂಗಿಸಬಹುದು. ಜೆಸಿಬಿ ಕರೆದರೆ 5-6ಗಂಟೆ ಕೆಲಸ, 6-7 ಸಾವಿರ ಖರ್ಚಾಗಬಹುದು.
ಯಾವುದೇ ಕಾರಣಕ್ಕೂ ಕಂದಕಗಳನ್ನು ಮುಚ್ಚಬಾರದು, ಉಳುಮೆ ಮಾಡುವಾಗ ಮುಚ್ಚದಂತೆ ಟ್ರಾಕ್ಟರ್ ಚಾಲಕನಿಗೆ ತಿಳಿಸಬೇಕು, ಪ್ರತಿ ವರ್ಷ ಮಳೆಗಾಲಕ್ಕೂ ಮುನ್ನ 2-3 ಜನ ಆಳು ಬಿಟ್ಟು ಕಂದಕಲ್ಲಿ ಬಿದ್ದಿರುವ ಮಣ್ಣನ್ನು ಎತ್ತಿಕೊಂಡು ಜಮೀನಿನಲ್ಲಿ ಹರಡಿಕೊಳ್ಳಬೇಕು. ಹೆಚ್ಚಾದ ನೀರು ಸುರಕ್ಷತವಾಗಿ ಹೊರಹೋಗಲು ಕಲ್ಲುಗಳಿಂದ / ಪೈಪ್ ಹಾಕಿ ದಾರಿ (ಕೋಡಿ) ಮಾಡಿಕೊಡಬೇಕು. ಈ ರೀತಿ ಎಲ್ಲರೂ ಮಾಡಿದರೆ, ಊರಿನಲ್ಲಿರುವ ಎಲ್ಲಾ ಬೋರುಗಳು ಮುಂದಿನ ವರ್ಷ ಚೆನ್ನಾಗಿ ನಡೆಯುತ್ತವೆ, ಇಲ್ಲದಿದ್ದರೆ ಮಳೆಗಾಲ ಮುಗಿದ 3-4 ತಿಂಗಳಿಗೆ ಟ್ಯಾಂಕರ್ ಅವಲಂಬನೆ ತಪ್ಪಿದ್ದಲ್ಲ, ಹಲವು ತೋಟಗಳು ಕಾಣೆಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ.
2026 ರ ಮುಂಗಾರು ಉತ್ತಮ ಆರಂಭ ಕಂಡಿದ್ದರೂ ಎಲ್ನಿನೊ, ಋಣಾತ್ಮಕ IOD ಹಾಗೂ…
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…
ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…
ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…