Advertisement
MIRROR FOCUS

ಮಳೆ ನೀರನ್ನು ಹಿಡಿದಿಡುವ ಕಾರ್ಯ ಆಗಲಿ | ಬರಗಾಲ ಬಂದರು ನೀರಿನ ಬವಣೆ ತಪ್ಪಿಸಬಹುದು |

Share

ಈ ಬಾರಿಯ ಬೇಸಗೆ ಹಾಗೂ ಬರಗಾಲ ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಬೇಕು. ಉತ್ತಮ ಮಳೆಯ ನಿರೀಕ್ಷೆ ಇದೆ ಈ ಬಾರಿ. ಅದಕ್ಕಾಗಿ ನೀರು ಸಂರಕ್ಷಣೆ ಮಾಡೋಣ, ನೀರು ಇಂಗಿಸುವ ಕಡೆಗೂ ಆದ್ಯತೆ ನೀಡಬೇಕು. ಇದಕ್ಕಾಗಿ ರೈತರು ಏನು ಮಾಡಬಹುದು..?

ರೈತರು ತಮ್ಮ ಜಮೀನುಗಳಲ್ಲಿ ಎಕರೆಗೆ ಈ ರೀತಿ 20 ಕಂದಕ ತೆಗೆದು(5ಮೀ ಉದ್ದ, 1 ಮೀ ಆಗಲ, 2 ಅಡಿ ಆಳ) ಬಂದ ಮಣ್ಣಿನಿಂದ ಬದು ಹಾಕಿಕೊಂಡರೆ ಮಣ್ಣು ಸವಕಳಿ ತಡೆಯುವುದರ ಜೊತೆಗೆ 20 ಕಂದಕಗಳಲ್ಲಿ ಒಂದು ಮಳೆಗೆ 60,000 ಲೀ ನೀರು ನಿಲ್ಲಿಸಿ ಹಿಂಗಿಸಬಹುದು. ವರ್ಷದಲ್ಲಿ 8-10 ಮಳೆಯಾದರೆ 5ಲಕ್ಷ ಲೀ ಮಳೆನೀರನ್ನು ಭೂಮಿಗೆ ಹಿಂಗಿಸಬಹುದು. ಜೆಸಿಬಿ ಕರೆದರೆ 5-6ಗಂಟೆ ಕೆಲಸ, 6-7 ಸಾವಿರ ಖರ್ಚಾಗಬಹುದು.

ಯಾವುದೇ ಕಾರಣಕ್ಕೂ ಕಂದಕಗಳನ್ನು ಮುಚ್ಚಬಾರದು, ಉಳುಮೆ ಮಾಡುವಾಗ ಮುಚ್ಚದಂತೆ ಟ್ರಾಕ್ಟರ್ ಚಾಲಕನಿಗೆ ತಿಳಿಸಬೇಕು, ಪ್ರತಿ ವರ್ಷ ಮಳೆಗಾಲಕ್ಕೂ ಮುನ್ನ 2-3 ಜನ ಆಳು ಬಿಟ್ಟು ಕಂದಕಲ್ಲಿ ಬಿದ್ದಿರುವ ಮಣ್ಣನ್ನು ಎತ್ತಿಕೊಂಡು ಜಮೀನಿನಲ್ಲಿ ಹರಡಿಕೊಳ್ಳಬೇಕು. ಹೆಚ್ಚಾದ ನೀರು ಸುರಕ್ಷತವಾಗಿ ಹೊರಹೋಗಲು ಕಲ್ಲುಗಳಿಂದ / ಪೈಪ್ ಹಾಕಿ ದಾರಿ (ಕೋಡಿ) ಮಾಡಿಕೊಡಬೇಕು. ಈ ರೀತಿ ಎಲ್ಲರೂ ಮಾಡಿದರೆ, ಊರಿನಲ್ಲಿರುವ ಎಲ್ಲಾ ಬೋರುಗಳು ಮುಂದಿನ ವರ್ಷ ಚೆನ್ನಾಗಿ ನಡೆಯುತ್ತವೆ, ಇಲ್ಲದಿದ್ದರೆ ಮಳೆಗಾಲ ಮುಗಿದ 3-4 ತಿಂಗಳಿಗೆ ಟ್ಯಾಂಕರ್ ಅವಲಂಬನೆ ತಪ್ಪಿದ್ದಲ್ಲ, ಹಲವು ತೋಟಗಳು ಕಾಣೆಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ.

ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

12 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

1 day ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

2 days ago