Advertisement
MIRROR FOCUS

ಕೃಷಿಗೆ ಮಂಗಗಳ ಕಾಟ, ಹಂದಿ ಕಾಟ ಇದೆ ಎಂದು ಆಡಳಿತಕ್ಕೆ, ಜನಪ್ರತಿನಿಧಿಗಳಿಗೆ ತಿಳಿಯಿತಲ್ವೇ…?

Share

ಚುನಾವಣೆ ಬಂದಾಗ ಆಡಳಿತವೇ ಸರ್ವ ಶ್ರೇಷ್ಟ…!. ಪರಿ ಪರಿಯಾಗಿ ರೈತರೇ ಮನವಿ ಮಾಡಿದರೂ ದರ್ಪ..!. ಕೃಷಿ ಉಳಿಸಲು ಕೋವಿ ಬೇಕು ಎಂದರೂ  ಕ್ಯಾರೇ ಇಲ್ಲ…ಜನರೇ ಓಟು ಹಾಕಿ ಗೆಲ್ಲಿಸುವ, ರೈತರೇ ಕ್ಯೂನಲ್ಲಿ ನಿಂತು ಮತದಾನ ಮಾಡಿ ಆಯ್ಕೆ ಮಾಡುವ ಜನಪ್ರತಿನಿಧಿಗಳು ಮಾತನಾಡುವುದಿಲ್ಲ, ಕೃಷಿ ಉಳಿಸಬೇಕು, ಬೆಳೆಸಬೇಕು ಎನ್ನುವ ಐಡಿಯಾ ನೀಡುವ ಅಧಿಕಾರಿಗಳು ಮಾತನಾಡುವುವಿಲ್ಲ… ಯಾವ ಬೇಡಿಕೆಗಳಿಗೂ ಗೌರವವೂ ಇಲ್ಲ, ಮಾನ್ಯವೂ ಇಲ್ಲ..!. ಈ ಸಮಸ್ಯೆ ಇಂದಲ್ಲ, ಹಲವು ವರ್ಷಗಳಿಂದ ಇದೆ. ಈ ಬಾರಿ ರೈತರೇ ಸರಿಯಾಗಿ ಆಡಳಿತಕ್ಕೆ ಅರಿವು ಮೂಡಿಸಿದ್ದಾರೆ. ಇನ್ನು ಮುಂದೆ ಯಾವ ರೈತರಿಗೂ ಇಂತಹ ಕಾಟ ಇರದೇ ಇರಲಿ. ಜನಪ್ರತಿನಿಧಿಗಳು ಇನ್ನಾದರೂ ಮಾತನಾಡಲಿ. 

ಕಳೆದ ಹಲವು ಸಮಯಗಳಿಂದ ಚುನಾವಣೆ ಬಂದಾಗ , ಕೃಷಿಕರು ಕೃಷಿ ರಕ್ಷಣೆಗೆ ಬೆಳೆ ರಕ್ಷಣೆಗೆಂದು ಲೈಸನ್ಸ್‌ ಹೊಂದಿ ಇರಿಸಿಕೊಂಡಿರುವ ಕೋವಿಯನ್ನು ಡೆಪಾಸಿಟ್‌ ಇಡಬೇಕು ಎಂದು ಆದೇಶವಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಇತರ ಕೆಲವು ಜಿಲ್ಲೆಗಳಲ್ಲಿ ಈ ಆದೇಶವಾಗುತ್ತದೆ. ಆದೇಶವಾದ ತಕ್ಷಣವೇ ಅಧಿಕಾರಿಗಳು ಕೃಷಿಕರನ್ನು ಪೀಡಿಸಲು ಆರಂಭ ಮಾಡುತ್ತಾರೆ. ಆದೇಶ ಪಾಲನೆ ಆಗಬೇಕು, ಇಂದೇ ಕೋವಿ ಡಿಪಾಸಿಟ್‌ ಇಡಿ ಎನ್ನುವುದು ಮಾಮೂಲಾಗಿದೆ. ಕೃಷಿಕರು ಈ ಆದೇಶವನ್ನು ಶಿರಸಾವಹಿಸಿ ಡಿಪಾಸಿಟ್‌ ಇರಿಸಿ ಬರುತ್ತಾರೆ. ಸೌಜನ್ಯದಿಂದ, ಇಲ್ಲ ಸಮಸ್ಯೆಯಾಗುತ್ತದೆ ಎಂದು ಹೇಳಿದರೂ 250- 300 ರೂಪಾಯಿ ನೀಡಿ ಡಿಪಾಸಿಟ್‌ ಇರಿಸಿ ಕಾನೂನು ಪಾಲನೆ ಮಾಡುತ್ತಾರೆ. ಇಂದು ಸೌಜನ್ಯಕ್ಕೆ ಬೆಲೆಯೂ ಇಲ್ಲ ಎಂದು ಅಧಿಕಾರ ವರ್ಗವೇ ಹೇಳಿದ ಹಾಗಿದೆ. ಅದೇ ಇತರ ಯಾವ ಕಾನೂನು, ನೀತಿ-ನಿಯಮಗಳು ಯಾವ ಪಕ್ಷಗಳೂ ಆಚರಿಸದೇ ಇದ್ದರೂ ಮೌನವಾಗಿರುತ್ತದೆ ಆಡಳಿತ. ಕಳೆದ ಬಾರಿ ಚುನಾವಣೆಯ ವೇಳೆ ಹಣ ಹಂಚುತ್ತಿರುವ ಬಗ್ಗೆ ಬಂದಿರುವ ದೂರಿನ ಆಧಾರದಲ್ಲಿ ಸ್ಥಳಕ್ಕೆ ತೆರಳಿದ ಅಧಿಕಾರಿಗಳು, “ಹಾಗೆ ನಡೆದೇ ಇಲ್ಲ” ಎಂದು ವರದಿ ಮಾಡಿರುವುದೂ ಕೃಷಿಕರಿಗೆ ಅರಿವು ಇದೆ. ಆದರೆ , ಕೃಷಿಕರ ನಿಜವಾದ ಬೇಡಿಕೆಗಳು ಮಾನ್ಯವೇ ಆಗಿಲ್ಲ. ಹೀಗಾಗಿ ಕಳೆದ ಎರಡು ಚುನಾವಣೆಯಲ್ಲಿ ಕೃಷಿಕರು ನ್ಯಾಯಾಲಯದ ಮೆಟ್ಟಿಲನ್ನು ಏರಬೇಕಾಯಿತು. ಎರಡೂ ಬಾರಿಯೂ ನ್ಯಾಯಾಲಯ ಕೃಷಿಕರ ಪರವಾಗಿ ಮಾತನಾಡಿದ್ದು ಗೌರವಪೂರ್ಣವಾಗಿದೆ. ಆದರೂ ಆಡಳಿತ ಮಾತ್ರಾ ಎಡವಿದೆ.

ನ್ಯಾಯಾಲಯದ ತೀರ್ಪಿನ ಮೇರೆಗೆ ಕೃಷಿಕನ ಮನೆಗೆ ಕೋವಿ ತಂದುಕೊಟ್ಟ ಪೊಲೀಸರು.

ನ್ಯಾಯಾಲಯದ ಮೊರೆ ಹೋಗಿದ್ದ ಕೃಷಿಕರ ಪೈಕಿ ಅಳಿಕೆ ಗ್ರಾಮದ ಕೃಷಿಕ  ನಿಶಾಂತ್ ನಾರಾಯಣ ಅವರೂ ಇದ್ದರು. ನ್ಯಾಯಾಲಯದ ತೀರ್ಪಿನ ಬಳಿಕವೂ ಕೋವಿ ಹಸ್ತಾಂತರ ನಡೆದಿಲ್ಲ. ಹೀಗಾಗಿ ವಿಟ್ಲ ಬಳಿಯ ಅಳಿಕೆ ಗ್ರಾಮದ ಕೃಷಿಕರು ಕಾಡುಹಂದಿ, ಕೋತಿಗಳ ಉಪಟಳದಿಂದ ಕಂಗಾಲಾಗಿದ್ದು, ಅಳಿಕೆ ಗ್ರಾಮದ ಕೃಷಿಕ  ನಿಶಾಂತ್ ನಾರಾಯಣ ಬಿಲ್ಲಂಪದವು ಎಂಬವರು ಜಿಲ್ಲಾಧಿಕಾರಿಗೆ ಕರೆ ಮಾಡಿ ಸಮಸ್ಯೆ ವಿವರಿಸಿದರು, 112 ತುರ್ತು ಸಂಖ್ಯೆಗೆ ಕರೆಮಾಡುವಂತೆ ಜಿಲ್ಲಾಧಿಕಾರಿ ಸಲಹೆಯನ್ನು ನೀಡಿದ ಮೇರೆಗೆ ಬಳಿಕ 112 ತುರ್ತು ಸಂಖ್ಯೆಗೆ ಕರೆ ಮಾಡಿದರು. ಕಂಟ್ರೋಲ್ ರೂಂ ಅಧಿಕಾರಿಗಳ ಸೂಚನೆಯಂತೆ ನಿಶಾಂತ್ ಅವರ ಮನೆ ಅಂಗಳಕ್ಕೆ 112 ಸಿಬ್ಬಂದಿಗಳು ಬಂದಿದ್ದಾರೆ.ಕೋವಿ ಹಸ್ತಾಂತರ ಮಾಡಿದ್ದಾರೆ.

ಇದೇ ವೇಳೆ ಕಡಬ ತಾಲೂಕಿನ ಸವಣೂರು ಗ್ರಾಮದ ಅಗರಿ ಎಂಬಲ್ಲಿ ಕೃಷಿಕ ರತ್ನಾಕರ ಪೂಜಾರಿ ಎಂಬವರ ಮೇಲೆ ಕಾಡು ಹಂದಿ ದಾಳಿ ಮಾಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಇಲ್ಲಿ ಹಗಲು ವೇಳೆಯೇ ದಾಳಿ ಮಾಡಿದೆ. ಈಗ ವಿದ್ಯುತ್‌ ಸಮಸ್ಯೆ ಹಲವು ಕಡೆ, ವಿಪರೀತ ಬಿಸಿಲಿನ ಕಾರಣದಿಂದ ಬಹುತೇಕ ಕೃಷಿಕರು ತೋಟಕ್ಕೆ ರಾತ್ರಿ ವೇಳೆಯೇ ನೀರುಣಿಸುತ್ತಾರೆ.  ಹೀಗಿರುವಾಗ ಹಂದಿಗಳು ಕೂಡಾ ಈಗ ನೀರು ಕುಡಿಯುವುದಕ್ಕೆ ತೋಟದ ಆಸುಪಾಸು ಬರುತ್ತದೆ, ದಾಳಿಯಾಗುವುದೂ ಕಂಡುಬರುತ್ತದೆ.

ಕಳೆದ ವರ್ಷ ಕಡಬ ತಾಲೂಕಿನ ಕಾಡಂಚಿನ ಪ್ರದೇಶದಲ್ಲಿ ಕಾಡಾನೆ ದಾಳಿಯಾಗಿ ಕೃಷಿಕ ಗಂಭೀರ ಗಾಯಗೊಂಡಿದ್ದರು. ಕೊಲ್ಲಮೊಗ್ರ ಪ್ರದೇಶದಲ್ಲಿ ಬೆಳಗ್ಗೆ ಹಾಲು ಡೈರಿಗೆ ಹಾಕಲು ತೆರಳುವ ವೇಳೆ ಕಾಡಾನೆ ದಾಳಿ ಮಾಡಿದೆ, ಈ ವರ್ಷ ಕಲ್ಮಕಾರು ಪ್ರದೇಶದಲ್ಲಿ ಕಾಡಾನೆ ಕೃಷಿಗೆ ಹಾನಿ ಮಾಡಿದೆ. ಅಷ್ಟೇ ಅಲ್ಲ, ಹಲವು ಕಡೆ ಮಂಗಗಳು ಈ ಬಾರಿ ವಿಪರೀತ ಕಾಟ ನೀಡುತ್ತಿವೆ.ಇಷ್ಟೆಲ್ಲಾ ಇದ್ದರೂ ಆಡಳಿತಕ್ಕೂ ಕೃಷಿಕನ ಮೇಲೆಯೇ ಏಕೆ ದ್ವೇಷ..?. ಇಷ್ಟೂ ವರ್ಷದ ಇತಿಹಾಸ ನೋಡಿದರೂ ಕೃಷಿಕನ ಕೋವಿಯಿಂದ ಚುನಾವಣೆಯ ವೇಳೆ ಎಲ್ಲೂ ದಾಳಿಯಾದ ಉದಾಹರಣೆ ಎಷ್ಟಿದೆ..? ಅಚ್ಚರಿ ಎಂದರೆ ಚುನಾವಣೆಯ ವೇಳೆ ಕೋವಿಗಳಿಗಿಂತಲೂ ಮಚ್ಚು-ಲಾಂಗುಗಳಿಂದ ದಾಳಿಯಾದ ಘಟನೆಗಳು ಇವೆ. ಅವುಗಳನ್ನು ಡಿಪಾಸಿಟ್‌ ಇಡುವ ವ್ಯವಸ್ಥೆ ಇಲ್ಲ…!.ಚುನಾವಣೆಯ ಹೆಸರಿನಲ್ಲಿ ಕೃಷಿಕನ ಮೇಲೆ ಏಕೆ ದ್ವೇಷ..? ವಿಪರ್ಯಾಸ ಎಂದರೆ ಯಾವ ಜನಪ್ರತಿನಿಧಿಗಳೂ, ಪಕ್ಷಗಳು ಕೃಷಿಕರ ಈ ಸಮಸ್ಯೆ ಬಗ್ಗೆ ಮಾತನಾಡಿಲ್ಲ…! ಆದರೂ ಓಟು ಕೇಳಲು ಮುಲಾಜಿಲ್ಲದೆ ಕೃಷಿಕನ ಮನೆ ಮುಂದೆ ಹಾಜರು…!

ಈಗಾಗಲೇ ನ್ಯಾಯಾಲಯದ ಮೊರೆ ಹೋಗಿ  ಕೃಷಿಕನ ಮನೆ ಬಾಗಿಲಿಗೆ ಕೋವಿ ತಲಪುವ ಹಾಗೆ ಆಗಿದೆ. ಇದನ್ನೇ ಫಾರ್ವಡ್‌ ಮಾಡುತ್ತಾ ಖುಷಿ ಪಡುವ ಬದಲಾಗಿ ಪ್ರತೀ ಕೃಷಿಕರೂ ಈ ಬಗ್ಗೆ ಧ್ವನಿ ಎತ್ತಬೇಕು. ಯಾವ ಪಕ್ಷಗಳೂ, ಜನಪ್ರತಿನಿಧಿಗಳೂ ಕೃಷಿಕರ ಪರವಾಗಿ ಮಾತನಾಡದೇ ಇರುವಾಗ ಕೃಷಿಕರೇ ಒಂದಾಗಿ ಮಾತನಾಡಬೇಕಿದೆ, ಧ್ವನಿ ಎತ್ತಬೇಕು ಎನ್ನುವುದೇ ಇಲ್ಲಿನ ಸಂದೇಶ. ಮುಂದಿನ ಚುನಾವಣೆಯ ವೇಳೆಗಾದರೂ ಕೃಷಿಕರ ಕೋವಿ ಠೇವಣಾತಿಗೆ ಇತಿಶ್ರೀ ಹಾಕುವಂತಾಗಲು ಆಡಳಿತ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

3 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

3 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

4 hours ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

11 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

15 hours ago

ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…

16 hours ago