Advertisement
ಸುದ್ದಿಗಳು

ಅಡಿಕೆ ಎಲೆಚುಕ್ಕಿ ರೋಗದ ದುಷ್ಪರಿಣಾಮ | ಅಡಿಕೆ ಹಾಳೆ ತಟ್ಟೆ ಉದ್ಯಮದ ಮೇಲೆ ಬೀರದಿರಲಿ ನಕಾರಾತ್ಮಕ ಪರಿಣಾಮ |

Share

ನಿಜ…, ಅಡಿಕೆ ಹಾಳೆ ತಟ್ಟೆಗೂ ಈ ಎಲೆಚುಕ್ಕಿಶಿಲೀಂದ್ರಕ್ಕೆ ಸಿಂಪಡಣೆ ಮಾಡುವ ಔಷಧಕ್ಕೂ ಯಾವುದೇ ಸಂಬಂಧವಿಲ್ಲ.
ಏಕೆಂದರೆ ಅಡಿಕೆ ಹಾಳೆ ತಟ್ಟೆ ತಯಾರಕರು ಅಡಿಕೆ ಹಾಳೆಯನ್ನು ಬಯಲು ಸೀಮೆಯ ಅಡಿಕೆ ತೋಟದಿಂದ ಆಮದು ಮಾಡಿ ಕೊಳ್ಳುತ್ತಾರೆ. ಅಲ್ಲಿನ ಹಾಳೆ ಸ್ವಚ್ಛ, ಶುಭ್ರ, ಫಂಗಸ್ ರಹಿತ (ಮಳೆ ಕಡಿಮೆ ಕಾರಣಕ್ಕೆ ಅಲ್ಲಿನ ಹಾಳೆಯಲ್ಲಿ ಫಂಗಸ್ ಇರೋಲ್ಲ) , ತೆಳು ಗಾತ್ರ ಮತ್ತು ಬಯಲು ಸೀಮೆಯ ಅಡಿಕೆ ಬೆಳೆ ಪ್ರದೇಶದಲ್ಲಿ ಅಡಿಕೆ ಹಾಳೆ ಯನ್ನು ಸಂಗ್ರಹಿಸಿ ಕ್ಯಾಂಟರ್ ನಲ್ಲಿ ತುಂಬಿ ಹಾಳೆ ತಟ್ಟೆ ತಯಾರಿಕಾ ಸಂಸ್ಥೆಗಳಿಗೆ ಒದಗಿಸುವ ವ್ಯವಸ್ಥೆ ಇದೆ.

ಇದೆಲ್ಲಾ ಕಾರಣಕ್ಕೆ ಮಲೆನಾಡು ಕರಾವಳಿಯ ಅಡಿಕೆ ಹಾಳೆ ತಟ್ಟೆ ಅಡಿಕೆ ಹಾಳೆ ಕಚ್ಚಾ ವಸ್ತುಗಳಿಗಾಗಿ ತಯಾರಕರು ಸ್ಥಳೀಯ ಅಡಿಕೆ ತೋಟಕ್ಕೆ ನೆಚ್ಚಿಕೊಂಡಿಲ್ಲ. ಅಡಿಕೆ ಹಾಳೆ ತಟ್ಟೆ ತಯಾರಿಸುವಾಗ ಅಡಿಕೆ ಹಾಳೆಯನ್ನು ಹೈ ಕಂಪ್ರೆಷರ್ ವಾಟರ್ ವಾಷ್ ಯಂತ್ರ ದಲ್ಲಿ ಚೆನ್ನಾಗಿ ತೊಳೆಯುತ್ತಾರೆ‌.

ಈ ಹಾಳೆ ತಟ್ಟೆ ತಯಾರಾಗಲು ಅತ್ಯಂತ ಹೆಚ್ಚಿನ ಉಷ್ಣತೆ ಯ ಡೈ ನಲ್ಲಿ ಕಾದು ಹಾಳೆ ತಟ್ಟೆ ಆಕಾರಕ್ಕೆ  ಆಗುತ್ತದೆ.
ಒಂದು ವೇಳೆ ಈ ಹಾಳೆಯಲ್ಲಿ ಈ ಯಾವುದೇ ಶಿಲೀಂದ್ರ ವೂ ಅದಕ್ಕೆ ಔಷಧ ಸಿಂಪಡಣೆ ಮಾಡಿದ್ದರೂ ಸುಟ್ಟು ಹೋಗಿರುತ್ತದೆ…ಈ ಬಗ್ಗೆ ಗ್ರಾಹಕರು ಭಯ ಪಡುವುದು ಬೇಡ ಮತ್ತು ಅಡಿಕೆ ತೋಟಕ್ಕೆ ಎಲೆಚುಕ್ಕಿ ಬಾಧಿತವಾಗಿದ್ದರೆ ಅಂತಹ ತೋಟದಲ್ಲಿ ಉತ್ತಮ ಹಾಳೆಯೂ ದೊರೆಯದು.

ಅಡಿಕೆ ಹಾಳೆತಟ್ಟೆ ತಯಾರಿಸುವಾಗ ಉಳಿದ ಅಡಿಕೆ ಹಾಳೆ ಚೂರನ್ನು ಪುಡಿ ಮಾಡಿ ಜಾನುವಾರುಗಳಿಗೆ ಮೇವಾಗಿಯೂ ಬಳಸಲಡ್ಡಿಯಿಲ್ಲ ಮತ್ತು ಅಡಿಕೆ ಹಾಳೆ ತಟ್ಟೆ ಉದ್ಯಮದ ಮಾಲಿಕರು ಕಡ್ಡಾಯವಾಗಿ ತಮ್ಮ ಉದ್ಯಮಕ್ಕೆ ಬರುವ ಕಚ್ಚಾ ವಸ್ತುಗಳ ಗುಣಮಟ್ಟದ ಬಗ್ಗೆ ಗಮನಹರಿಸಬೇಕಿದೆ.

ಅಡಿಕೆ ಹಾಳೆ ತಟ್ಟೆ ಉದ್ಯಮ ಕ್ಕೆ ಈಗಿರುವ ಮತ್ತು ಭವಿಷ್ಯದ ಮಾರುಕಟ್ಟೆ ಮತ್ತಷ್ಟು ಉಜ್ವಲವಾಗಲಿ. ಪರಿಸರಕ್ಕೆ ಈ ಹಾಳೆ ತಟ್ಟೆ ಯಿಂದ ಬಹಳ ದೊಡ್ಡ ಕೊಡುಗೆ ಇದೆ. ಈ ಉದ್ಯಮ ಚೆನ್ನಾಗಿ ಮುಂದುವರೆಯಲಿ…

ವಿದೇಶಕ್ಕೆ ರಫ್ತು ಮಾಡುವ ಹಾಳೆ ಉತ್ಪನ್ನ ಗಳ ತಯಾರಕರೂ ಈ ಗುಣಮಟ್ಟದ ಬಗ್ಗೆ ಗಮನ ಹರಿಸುವುದು ಭವಿಷ್ಯದ ದೃಷ್ಟಿಯಿಂದ ಆರೋಗ್ಯಕರ. ಯಾವುದೇ ಕಾರಣಕ್ಕೂ ಅಡಿಕೆ ಎಲೆಚುಕ್ಕಿ ರೋಗದ ಕರಿನೆರಳು ಅಡಿಕೆ ಹಾಳೆ ತಟ್ಟೆ ಉದ್ಯಮದ ಮೇಲೆ ಬೀಳದಿರಲಿ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

Published by
ಪ್ರಬಂಧ ಅಂಬುತೀರ್ಥ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 hour ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

2 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

17 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago