Opinion

ನಮ್ಮ ನಮ್ಮಲ್ಲಿ ಹೊಂದಾಣಿಕೆ ಇರಲಿ | ನಾವು ಶಾಂತಿಯಿಂದ ಇರಬೇಕಾದರೆ ನಮ್ಮ ಸುತ್ತಮುತ್ತ ಶಾಂತಿ ಇರಬೇಕು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಒಂದು ಗ್ರಾಮದಲ್ಲಿ ಒಬ್ಬ ರೈತನಿದ್ದ(Farmer). ಅವನೊಬ್ಬ ಪ್ರಗತಿಪರ ರೈತ. ಆತ ಯಾವ ಕೆಲಸ ಮಾಡಿದರೂ ತುಂಬಾ ಅಲೋಚನೆ ಮಾಡಿ, ಹತ್ತಾರು ಜನರನ್ನು ಕೇಳಿ, ಅಭಿಪ್ರಾಯ ಪಡೆದು ಮಾಡುತ್ತಿದ್ದ. ಅವನ ಬೆಳೆ(Crop) ಯಾವಾಗಲೂ ಅತ್ಯುತ್ತಮ ಮಟ್ಟದ್ದಾಗಿರುತ್ತಿತ್ತು. ಪ್ರತಿವರ್ಷ ಅವನಿಗೆ ವಾರ್ಷಿಕ ಪ್ರಶಸ್ತಿ(Award) ಬರುತ್ತಿತ್ತು.

Advertisement

ಒಂದು ಬಾರಿ ಅವನಿಗೆ ಅವನ ಪರಿಶ್ರಮಕ್ಕಾಗಿ ರಾಷ್ಟೀಯ ಪ್ರಶಸ್ತಿ ಬಂದಿತು. ಪ್ರಶಸ್ತಿ ಪ್ರಧಾನವಾದ ಮೇಲೆ ಪತ್ರಿಕಾ ವರದಿಗಾರರು(Journalist) ಅವನ ಸಂದರ್ಶನ(Interview) ನಡೆಸುತ್ತಿದ್ದರು. ಒಬ್ಬ ಪತ್ರಕರ್ತೆ ರೈತನನ್ನು ಕೇಳಿದರು, ಪ್ರತಿವರ್ಷವೂ ನೀವು ವಿಶೇಷವಾದ ಪ್ರಶಸ್ತಿ ಪಡೆದು ಕೊಳ್ಳುತ್ತೀರಿ. ಇದರ ಗುಟ್ಟೇನು ಆತ ಮುಗುಳ್ನಕ್ಕು ಹೇಳಿದ, ಕೃಷಿಯಲ್ಲಿ(Agriculture) ಪ್ರಶಸ್ತಿ ಬರಬೇಕೆಂದರೆ ಒಂದೇ ಕಾರಣ- ಅದು ಸತತ ಪರಿಶ್ರಮ. ಆದರಲ್ಲಿ ನನಗೆ ಸದಾ ನಂಬಿಕೆ ಇದೆ. ಅದೇ ನನ್ನನ್ನು ರಕ್ಷಿಸುತ್ತದೆ. ಆಕೆ ಮತ್ತೆ ಕೇಳಿದಳು. ಪರಿಶ್ರಮವನ್ನೇನೋ ಎಲ್ಲ ರೈತರು ಮಾಡುತ್ತಾರೆ. ಆದರೆ ಅವರಿಗೆ ತಕ್ಕ ಪ್ರತಿಫಲ ದೊರಕುವುದಿಲ್ಲ.ನೀವು ಬೀಜಗಳನ್ನು ಎಲ್ಲಿಂದಲೋ ತರಿಸುತ್ತೀರಂತೆ ಹೌದೇ. ಹೌದು ನಾನು ನಾಲ್ಕಾರು ಕಡೆಗೆ ಹೋಗಿ ವಿಚಾರಮಾಡಿ., ನಮ್ಮ ತರಹದೇ ಭೂಮಿಯಲ್ಲಿ ಅತ್ಯಂತ ಹೆಚ್ಚು ಬೆಳೆ ಯನ್ನು ಬೆಳೆದವರಲ್ಲಿ ಮಾತಾಡಿ ಬೀಜ ತರುತ್ತೇನೆ. ಅಲ್ಲದೇ ನನ್ನ ಹೊಲದ ಸುತ್ತಮುತ್ತ ಇರುವ ಎಲ್ಲ ಹೊಲಗಳ ಯಜಮಾನರಿಗೆ ಈ ಬೀಜಗಳನ್ನು ಪುಕ್ಕಟೆಯಾಗಿ ಕೊಡುತ್ತೇನೆ.

ಆಕೆಗೆ ಭಾರಿ ಆಶ್ಚರ್ಯವಾಯಿತು. ಇದು ವಿಚಿತ್ರ ವಲ್ಲವೇ?ನೀವು ಕಷ್ಟಪಟ್ಟು ಮುತುವರ್ಜಿವಹಿಸಿ ತಂದ ಬೀಜಗಳನ್ನು ಯಾಕೆ ಹಂಚುತ್ತೀರಿ? ಬರಿ ನಿಮ್ಮದೇ ಬೇಳೆ ಮಾತ್ರ ಚೆನ್ನಾಗಿದ್ದರೆ ಅದಕ್ಕೆ ಹೆಚ್ಚಿನ ಬೆಲೆ ಬಂದು ಲಾಭವಾಗುವುದಿಲ್ಲವೇ? ಯಾವ ಪ್ರಯತ್ನವನ್ನೂ ಮಾಡದ ಸುತ್ತಮುತ್ತಲಿನ ರೈತರಿಗೆ, ಅದೂ ಅವರು ಕೆೇಳದೇ, ಯಾಕೆ ಕೊಡುತ್ತೀರಿ? ಆತ ನಿಧಾನವಾಗಿ ಉತ್ತರಿಸಿದರು. ನೋಡಿ ಎರಡು ಕಾರಣಕ್ಕಾಗಿ ನಾನು ಬೀಜಗಳನ್ನು ಹಂಚುತ್ತೇನೆ. ಮೊದಲನೆಯದಾಗಿ ನನ್ನ ಬೆಳೆ ಮಾತ್ರ ಚೆನ್ನಾಗಿದ್ದು ಅವರ ಬೆಳೆ ಚೆನ್ನಾಗಿಲ್ಲದೇ ಹೋದರೆ ಅವರಿಗೆ ಅಸೂಯೆಯಾಗುವುದಿಲ್ಲವೇ? ಅಸೂಯೆ ಹೆಚ್ಚಾದರೆ ಅವರು ನನ್ನ ಹೊಲದಲ್ಲಿ ದನಗಳನ್ನು ನುಗ್ಗಿಸಬಹುದು, ಬೆಂಕಿ ಹಾಕಬಹುದು.

ಎರಡನೆಯ ಕಾರಣ, ಬಹುಮುಖ್ಯವಾದದ್ದು. ನನ್ನ ಬೆಳೆ ಎದೆ ಎತ್ತರಕ್ಕೆ ಬೆಳೆದು ನಿಂತಾಗ, ಹೂ ಬಿಟ್ಟಾಗ ಗಾಳಿಯಿಂದ ನನ್ನ ಬೆಳೆಗಳ ಹೂಗಳ ಪರಾಗ ರೇಣುಗಳು ಪಕ್ಕದ ಬೆಳೆಯ ಹೂಗಳ ಮೇಲೆ ಬೀಳುತ್ತವೆ ಫಲಿತಗೊಳ್ಳುತ್ತವೆ. ಅಂತೆಯೇ ಅವರ ಹೂಗಳ ಪರಾಗ ಕಣ ನನ್ನ ಬೆಳೆಯ ಹೂಗಳ ಮೇಲೆ ಬೀಳುತ್ತವೆ. ಅವರ ಬೆಳೆ ಚೆನ್ನಾಗಿಲ್ಲದಿದ್ದಾಗ, ಪರಾಗ ಸ್ಪರ್ಶದಿಂದ ನನ್ನ ಬೆಳೆಯೂ ಕೆಡುವುದಿಲ್ಲವೇ? ಆದ್ದರಿಂದ ನಾನು ಅವರೆಲ್ಲರಿಗೂ ಒಳ್ಳೆ ಬೀಜಗಳನ್ನು ಕೊಡುತ್ತೇನೆ. ಆಗ ಪರಾಗ ಸ್ಪರ್ಶವಾದರೂ ನನ್ನ ಬೆಳೆ ಕೆಡುವುದಿಲ್ಲ. ಆದ್ದರಿಂದ ನಾನು ಒಳ್ಳೆಯ ಬೆಳೆ ತೆಗೆಯಬೇಕಾದರೆ ನಮ್ಮ ಸುತ್ತಮುತ್ತಲಿನವರೂ ಒಳ್ಳೆ ಬೀಜ ಹಾಕುವುದು ಅನಿವಾರ್ಯ.

ಇದನ್ನು ನಮ್ಮ ಜೀವನಕ್ಕೆ ಅನ್ವಯಿಸಿ ಕೊಳ್ಳಬಹುದು. ನಾವು ಶಾಂತಿಯಿಂದ ಇರಬೇಕಾದರೆ ನಮ್ಮ ಸುತ್ತಮುತ್ತ ಶಾಂತಿ ಇರಬೇಕು. ಸಂತೋಷ ವಾಗಿರಬೇಕಿದ್ದರೆ ನಮ್ಮ ವಾತಾವರಣದ ಎಲ್ಲ ಜನ ಸಂತೋಷವಾಗಿರಬೇಕು. ಅದು ಹಾಗಿರುವಂತೆ ನೋಡಿ ಕೊಳ್ಳುವುದು ನಮ್ಮ ಪ್ರಯತ್ನ ವಾಗಬೇಕು. ಇದು ಸಮಾಜ ಜೀವನದ ಬಹು ಮುಖ್ಯ ಪಾಠ ಅಲ್ಲವೇ ?

Source : Digital Media

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಳಗಾವಿಯಲ್ಲಿ 3 ದಿನಗಳ ಮಾವು, ಜೇನು ಮೇಳ | ರೈತರಿಂದ ಪ್ರದರ್ಶನ, ಗ್ರಾಹಕರಿಗೆ ನೇರ ಮಾರಾಟ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆಯಿಂದ ಬೆಳಗಾವಿಯ ಹೋಮ್ ಪಾರ್ಕ್ ನಲ್ಲಿ…

7 hours ago

ದೇಶಾದ್ಯಂತ 47 ಸ್ಥಳಗಳಲ್ಲಿ ಉದ್ಯೋಗ ಮೇಳ | 51000 ನವ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಣೆ

ದೇಶಾದ್ಯಂತ ಒಂದೇ ದಿನ 47 ಸ್ಥಳಗಳಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು ಬೆಂಗಳೂರಿನ ಎನ್‌ಎಸಿಐಎ…

8 hours ago

ಹವಾಮಾನ ವರದಿ | 26-04-2025 | ಸಂಜೆ ಗುಡುಗು ಸಹಿತ ಮಳೆ ಸಾಧ್ಯತೆ |

ಅಲ್ಲಲ್ಲಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

15 hours ago

ಚಿಕ್ಕಬಳ್ಳಾಪುರ ಜಿಲ್ಲೆ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ 2863 ಎಕರೆ ಭೂಮಿ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ೨…

19 hours ago

ಹೊಸರುಚಿ | ಹಲಸಿನ ಕಾಯಿ ಪೂರಿ

ಹಲಸಿನ ಕಾಯಿ ಪೂರಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಕಾಯಿ 1/2 ಕಪ್, ಗೋಧಿ ಹುಡಿ.1…

21 hours ago

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…

1 day ago