Advertisement
Opinion

ನಮ್ಮ ನಮ್ಮಲ್ಲಿ ಹೊಂದಾಣಿಕೆ ಇರಲಿ | ನಾವು ಶಾಂತಿಯಿಂದ ಇರಬೇಕಾದರೆ ನಮ್ಮ ಸುತ್ತಮುತ್ತ ಶಾಂತಿ ಇರಬೇಕು |

Share

ಒಂದು ಗ್ರಾಮದಲ್ಲಿ ಒಬ್ಬ ರೈತನಿದ್ದ(Farmer). ಅವನೊಬ್ಬ ಪ್ರಗತಿಪರ ರೈತ. ಆತ ಯಾವ ಕೆಲಸ ಮಾಡಿದರೂ ತುಂಬಾ ಅಲೋಚನೆ ಮಾಡಿ, ಹತ್ತಾರು ಜನರನ್ನು ಕೇಳಿ, ಅಭಿಪ್ರಾಯ ಪಡೆದು ಮಾಡುತ್ತಿದ್ದ. ಅವನ ಬೆಳೆ(Crop) ಯಾವಾಗಲೂ ಅತ್ಯುತ್ತಮ ಮಟ್ಟದ್ದಾಗಿರುತ್ತಿತ್ತು. ಪ್ರತಿವರ್ಷ ಅವನಿಗೆ ವಾರ್ಷಿಕ ಪ್ರಶಸ್ತಿ(Award) ಬರುತ್ತಿತ್ತು.

ಒಂದು ಬಾರಿ ಅವನಿಗೆ ಅವನ ಪರಿಶ್ರಮಕ್ಕಾಗಿ ರಾಷ್ಟೀಯ ಪ್ರಶಸ್ತಿ ಬಂದಿತು. ಪ್ರಶಸ್ತಿ ಪ್ರಧಾನವಾದ ಮೇಲೆ ಪತ್ರಿಕಾ ವರದಿಗಾರರು(Journalist) ಅವನ ಸಂದರ್ಶನ(Interview) ನಡೆಸುತ್ತಿದ್ದರು. ಒಬ್ಬ ಪತ್ರಕರ್ತೆ ರೈತನನ್ನು ಕೇಳಿದರು, ಪ್ರತಿವರ್ಷವೂ ನೀವು ವಿಶೇಷವಾದ ಪ್ರಶಸ್ತಿ ಪಡೆದು ಕೊಳ್ಳುತ್ತೀರಿ. ಇದರ ಗುಟ್ಟೇನು ಆತ ಮುಗುಳ್ನಕ್ಕು ಹೇಳಿದ, ಕೃಷಿಯಲ್ಲಿ(Agriculture) ಪ್ರಶಸ್ತಿ ಬರಬೇಕೆಂದರೆ ಒಂದೇ ಕಾರಣ- ಅದು ಸತತ ಪರಿಶ್ರಮ. ಆದರಲ್ಲಿ ನನಗೆ ಸದಾ ನಂಬಿಕೆ ಇದೆ. ಅದೇ ನನ್ನನ್ನು ರಕ್ಷಿಸುತ್ತದೆ. ಆಕೆ ಮತ್ತೆ ಕೇಳಿದಳು. ಪರಿಶ್ರಮವನ್ನೇನೋ ಎಲ್ಲ ರೈತರು ಮಾಡುತ್ತಾರೆ. ಆದರೆ ಅವರಿಗೆ ತಕ್ಕ ಪ್ರತಿಫಲ ದೊರಕುವುದಿಲ್ಲ.ನೀವು ಬೀಜಗಳನ್ನು ಎಲ್ಲಿಂದಲೋ ತರಿಸುತ್ತೀರಂತೆ ಹೌದೇ. ಹೌದು ನಾನು ನಾಲ್ಕಾರು ಕಡೆಗೆ ಹೋಗಿ ವಿಚಾರಮಾಡಿ., ನಮ್ಮ ತರಹದೇ ಭೂಮಿಯಲ್ಲಿ ಅತ್ಯಂತ ಹೆಚ್ಚು ಬೆಳೆ ಯನ್ನು ಬೆಳೆದವರಲ್ಲಿ ಮಾತಾಡಿ ಬೀಜ ತರುತ್ತೇನೆ. ಅಲ್ಲದೇ ನನ್ನ ಹೊಲದ ಸುತ್ತಮುತ್ತ ಇರುವ ಎಲ್ಲ ಹೊಲಗಳ ಯಜಮಾನರಿಗೆ ಈ ಬೀಜಗಳನ್ನು ಪುಕ್ಕಟೆಯಾಗಿ ಕೊಡುತ್ತೇನೆ.

ಆಕೆಗೆ ಭಾರಿ ಆಶ್ಚರ್ಯವಾಯಿತು. ಇದು ವಿಚಿತ್ರ ವಲ್ಲವೇ?ನೀವು ಕಷ್ಟಪಟ್ಟು ಮುತುವರ್ಜಿವಹಿಸಿ ತಂದ ಬೀಜಗಳನ್ನು ಯಾಕೆ ಹಂಚುತ್ತೀರಿ? ಬರಿ ನಿಮ್ಮದೇ ಬೇಳೆ ಮಾತ್ರ ಚೆನ್ನಾಗಿದ್ದರೆ ಅದಕ್ಕೆ ಹೆಚ್ಚಿನ ಬೆಲೆ ಬಂದು ಲಾಭವಾಗುವುದಿಲ್ಲವೇ? ಯಾವ ಪ್ರಯತ್ನವನ್ನೂ ಮಾಡದ ಸುತ್ತಮುತ್ತಲಿನ ರೈತರಿಗೆ, ಅದೂ ಅವರು ಕೆೇಳದೇ, ಯಾಕೆ ಕೊಡುತ್ತೀರಿ? ಆತ ನಿಧಾನವಾಗಿ ಉತ್ತರಿಸಿದರು. ನೋಡಿ ಎರಡು ಕಾರಣಕ್ಕಾಗಿ ನಾನು ಬೀಜಗಳನ್ನು ಹಂಚುತ್ತೇನೆ. ಮೊದಲನೆಯದಾಗಿ ನನ್ನ ಬೆಳೆ ಮಾತ್ರ ಚೆನ್ನಾಗಿದ್ದು ಅವರ ಬೆಳೆ ಚೆನ್ನಾಗಿಲ್ಲದೇ ಹೋದರೆ ಅವರಿಗೆ ಅಸೂಯೆಯಾಗುವುದಿಲ್ಲವೇ? ಅಸೂಯೆ ಹೆಚ್ಚಾದರೆ ಅವರು ನನ್ನ ಹೊಲದಲ್ಲಿ ದನಗಳನ್ನು ನುಗ್ಗಿಸಬಹುದು, ಬೆಂಕಿ ಹಾಕಬಹುದು.

ಎರಡನೆಯ ಕಾರಣ, ಬಹುಮುಖ್ಯವಾದದ್ದು. ನನ್ನ ಬೆಳೆ ಎದೆ ಎತ್ತರಕ್ಕೆ ಬೆಳೆದು ನಿಂತಾಗ, ಹೂ ಬಿಟ್ಟಾಗ ಗಾಳಿಯಿಂದ ನನ್ನ ಬೆಳೆಗಳ ಹೂಗಳ ಪರಾಗ ರೇಣುಗಳು ಪಕ್ಕದ ಬೆಳೆಯ ಹೂಗಳ ಮೇಲೆ ಬೀಳುತ್ತವೆ ಫಲಿತಗೊಳ್ಳುತ್ತವೆ. ಅಂತೆಯೇ ಅವರ ಹೂಗಳ ಪರಾಗ ಕಣ ನನ್ನ ಬೆಳೆಯ ಹೂಗಳ ಮೇಲೆ ಬೀಳುತ್ತವೆ. ಅವರ ಬೆಳೆ ಚೆನ್ನಾಗಿಲ್ಲದಿದ್ದಾಗ, ಪರಾಗ ಸ್ಪರ್ಶದಿಂದ ನನ್ನ ಬೆಳೆಯೂ ಕೆಡುವುದಿಲ್ಲವೇ? ಆದ್ದರಿಂದ ನಾನು ಅವರೆಲ್ಲರಿಗೂ ಒಳ್ಳೆ ಬೀಜಗಳನ್ನು ಕೊಡುತ್ತೇನೆ. ಆಗ ಪರಾಗ ಸ್ಪರ್ಶವಾದರೂ ನನ್ನ ಬೆಳೆ ಕೆಡುವುದಿಲ್ಲ. ಆದ್ದರಿಂದ ನಾನು ಒಳ್ಳೆಯ ಬೆಳೆ ತೆಗೆಯಬೇಕಾದರೆ ನಮ್ಮ ಸುತ್ತಮುತ್ತಲಿನವರೂ ಒಳ್ಳೆ ಬೀಜ ಹಾಕುವುದು ಅನಿವಾರ್ಯ.

ಇದನ್ನು ನಮ್ಮ ಜೀವನಕ್ಕೆ ಅನ್ವಯಿಸಿ ಕೊಳ್ಳಬಹುದು. ನಾವು ಶಾಂತಿಯಿಂದ ಇರಬೇಕಾದರೆ ನಮ್ಮ ಸುತ್ತಮುತ್ತ ಶಾಂತಿ ಇರಬೇಕು. ಸಂತೋಷ ವಾಗಿರಬೇಕಿದ್ದರೆ ನಮ್ಮ ವಾತಾವರಣದ ಎಲ್ಲ ಜನ ಸಂತೋಷವಾಗಿರಬೇಕು. ಅದು ಹಾಗಿರುವಂತೆ ನೋಡಿ ಕೊಳ್ಳುವುದು ನಮ್ಮ ಪ್ರಯತ್ನ ವಾಗಬೇಕು. ಇದು ಸಮಾಜ ಜೀವನದ ಬಹು ಮುಖ್ಯ ಪಾಠ ಅಲ್ಲವೇ ?

Source : Digital Media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

7 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

11 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

17 hours ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

18 hours ago

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

1 day ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

1 day ago