ಇಡೀ ವಿಶ್ವ ಇಂದು ಹವಾಮಾನ ವೈಪರೀತ್ಯಕ್ಕೆ ಒಳಗಾಗಿದೆ. ಜಗತ್ತನ್ನು ಹವಾಮಾನ ವೈಪರೀತ್ಯದಿಂದ ರಕ್ಷಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ವಿಶ್ವ ಹಸಿರು ಜಲಜನಕ ಸಮಾವೇಶ ಉದ್ದೇಶಿಸಿ ವರ್ಚುವಲ್ ಮಾಧ್ಯಮದ ಮೂಲಕ ಪ್ರಧಾನಿ, ಭಾರತ ಹಸಿರು ಇಂಧನಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ರಾಷ್ಟ್ರೀಯ ಹಸಿರು ಇಂಧನ ಮಿಷನ್ ಕಾರ್ಯಕ್ರಮ ಜಾರಿಗೊಳಿಸಿದೆ. ಮುಂದಿನ ಪೀಳಿಗೆಗೆ ಸ್ವಾಸ್ಥ್ಯ ಪರಿಸರ ನೀಡುವುದು ನಮ್ಮೆಲ್ಲರ ಗುರುತರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಸುಸಜ್ಜಿತ, ಸುಭದ್ರ ಹಸಿರು ಜಲಜನಕ ಬಳಕೆ ನಮ್ಮ ಆದ್ಯತೆಯಾಗಬೇಕು. ಈ ನಿಟ್ಟಿನಲ್ಲಿ ಭಾರತ, ಜಿ-20 ಶೃಂಗಸಭೆಯ ಅಧ್ಯಕ್ಷತೆ ವಹಿಸಿಕೊಂಡಿದ್ದ ಸಂದರ್ಭದಲ್ಲಿ ಹಸಿರು ಹೈಡ್ರೋಜನ್ ಪ್ರಾಮುಖ್ಯತೆ ಪ್ರತಿಪಾದಿಸಿತ್ತು. ಹಸಿರು ಇಂಧನ ಬಳಕೆಯಲ್ಲಿ ಜಿ-20 ರಾಷ್ಟ್ರಗಳ ಪಾತ್ರ ಹಿರಿದು ಎಂದರು. ವಿಶ್ವ ಇಂದು ಎದುರಿಸುತ್ತಿರುವ ಹವಾಮಾನ ಬದಲಾವಣೆ ಸವಾಲನ್ನು ಸಮರ್ಥವಾಗಿ ನಿಭಾಯಿಸಬೇಕಾದರೆ, ಜಾಗತಿಕ ಸಮೂಹದ ಒಗ್ಗೂಡುವಿಕೆ ಅಗತ್ಯ. ಹೊಸ ಅಲೋಚನೆಗಳು, ಆವಿಷ್ಕಾರಗಳಿಂದ ಈ ಸಮಸ್ಯೆಯನ್ನು ನಿವಾರಿಸಬಹುದು ಎಂದು ತಿಳಿಸಿದ ನರೇಂದ್ರ ಮೋದಿ ಅವರು, ಇಂದು ನಾವು ತೆಗೆದುಕೊಳ್ಳುವ ನಿರ್ಣಯ, ಮುಂದಿನ ಪೀಳಿಗೆಯ ಮೇಲೆ ಪ್ರಭಾವ ಬೀರಲಿದೆ. ಹಾಗಾಗಿ ಹೊಸ ಕ್ಷೇತ್ರದಲ್ಲಿ ನವ ಚಿಂತನೆಯ ಅಗತ್ಯವಿದೆ ಎಂದು ಹೇಳಿದರು.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…