ಇಡೀ ವಿಶ್ವ ಇಂದು ಹವಾಮಾನ ವೈಪರೀತ್ಯಕ್ಕೆ ಒಳಗಾಗಿದೆ. ಜಗತ್ತನ್ನು ಹವಾಮಾನ ವೈಪರೀತ್ಯದಿಂದ ರಕ್ಷಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ವಿಶ್ವ ಹಸಿರು ಜಲಜನಕ ಸಮಾವೇಶ ಉದ್ದೇಶಿಸಿ ವರ್ಚುವಲ್ ಮಾಧ್ಯಮದ ಮೂಲಕ ಪ್ರಧಾನಿ, ಭಾರತ ಹಸಿರು ಇಂಧನಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ರಾಷ್ಟ್ರೀಯ ಹಸಿರು ಇಂಧನ ಮಿಷನ್ ಕಾರ್ಯಕ್ರಮ ಜಾರಿಗೊಳಿಸಿದೆ. ಮುಂದಿನ ಪೀಳಿಗೆಗೆ ಸ್ವಾಸ್ಥ್ಯ ಪರಿಸರ ನೀಡುವುದು ನಮ್ಮೆಲ್ಲರ ಗುರುತರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಸುಸಜ್ಜಿತ, ಸುಭದ್ರ ಹಸಿರು ಜಲಜನಕ ಬಳಕೆ ನಮ್ಮ ಆದ್ಯತೆಯಾಗಬೇಕು. ಈ ನಿಟ್ಟಿನಲ್ಲಿ ಭಾರತ, ಜಿ-20 ಶೃಂಗಸಭೆಯ ಅಧ್ಯಕ್ಷತೆ ವಹಿಸಿಕೊಂಡಿದ್ದ ಸಂದರ್ಭದಲ್ಲಿ ಹಸಿರು ಹೈಡ್ರೋಜನ್ ಪ್ರಾಮುಖ್ಯತೆ ಪ್ರತಿಪಾದಿಸಿತ್ತು. ಹಸಿರು ಇಂಧನ ಬಳಕೆಯಲ್ಲಿ ಜಿ-20 ರಾಷ್ಟ್ರಗಳ ಪಾತ್ರ ಹಿರಿದು ಎಂದರು. ವಿಶ್ವ ಇಂದು ಎದುರಿಸುತ್ತಿರುವ ಹವಾಮಾನ ಬದಲಾವಣೆ ಸವಾಲನ್ನು ಸಮರ್ಥವಾಗಿ ನಿಭಾಯಿಸಬೇಕಾದರೆ, ಜಾಗತಿಕ ಸಮೂಹದ ಒಗ್ಗೂಡುವಿಕೆ ಅಗತ್ಯ. ಹೊಸ ಅಲೋಚನೆಗಳು, ಆವಿಷ್ಕಾರಗಳಿಂದ ಈ ಸಮಸ್ಯೆಯನ್ನು ನಿವಾರಿಸಬಹುದು ಎಂದು ತಿಳಿಸಿದ ನರೇಂದ್ರ ಮೋದಿ ಅವರು, ಇಂದು ನಾವು ತೆಗೆದುಕೊಳ್ಳುವ ನಿರ್ಣಯ, ಮುಂದಿನ ಪೀಳಿಗೆಯ ಮೇಲೆ ಪ್ರಭಾವ ಬೀರಲಿದೆ. ಹಾಗಾಗಿ ಹೊಸ ಕ್ಷೇತ್ರದಲ್ಲಿ ನವ ಚಿಂತನೆಯ ಅಗತ್ಯವಿದೆ ಎಂದು ಹೇಳಿದರು.
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…