ಇಡೀ ವಿಶ್ವ ಇಂದು ಹವಾಮಾನ ವೈಪರೀತ್ಯಕ್ಕೆ ಒಳಗಾಗಿದೆ. ಜಗತ್ತನ್ನು ಹವಾಮಾನ ವೈಪರೀತ್ಯದಿಂದ ರಕ್ಷಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ವಿಶ್ವ ಹಸಿರು ಜಲಜನಕ ಸಮಾವೇಶ ಉದ್ದೇಶಿಸಿ ವರ್ಚುವಲ್ ಮಾಧ್ಯಮದ ಮೂಲಕ ಪ್ರಧಾನಿ, ಭಾರತ ಹಸಿರು ಇಂಧನಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ರಾಷ್ಟ್ರೀಯ ಹಸಿರು ಇಂಧನ ಮಿಷನ್ ಕಾರ್ಯಕ್ರಮ ಜಾರಿಗೊಳಿಸಿದೆ. ಮುಂದಿನ ಪೀಳಿಗೆಗೆ ಸ್ವಾಸ್ಥ್ಯ ಪರಿಸರ ನೀಡುವುದು ನಮ್ಮೆಲ್ಲರ ಗುರುತರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಸುಸಜ್ಜಿತ, ಸುಭದ್ರ ಹಸಿರು ಜಲಜನಕ ಬಳಕೆ ನಮ್ಮ ಆದ್ಯತೆಯಾಗಬೇಕು. ಈ ನಿಟ್ಟಿನಲ್ಲಿ ಭಾರತ, ಜಿ-20 ಶೃಂಗಸಭೆಯ ಅಧ್ಯಕ್ಷತೆ ವಹಿಸಿಕೊಂಡಿದ್ದ ಸಂದರ್ಭದಲ್ಲಿ ಹಸಿರು ಹೈಡ್ರೋಜನ್ ಪ್ರಾಮುಖ್ಯತೆ ಪ್ರತಿಪಾದಿಸಿತ್ತು. ಹಸಿರು ಇಂಧನ ಬಳಕೆಯಲ್ಲಿ ಜಿ-20 ರಾಷ್ಟ್ರಗಳ ಪಾತ್ರ ಹಿರಿದು ಎಂದರು. ವಿಶ್ವ ಇಂದು ಎದುರಿಸುತ್ತಿರುವ ಹವಾಮಾನ ಬದಲಾವಣೆ ಸವಾಲನ್ನು ಸಮರ್ಥವಾಗಿ ನಿಭಾಯಿಸಬೇಕಾದರೆ, ಜಾಗತಿಕ ಸಮೂಹದ ಒಗ್ಗೂಡುವಿಕೆ ಅಗತ್ಯ. ಹೊಸ ಅಲೋಚನೆಗಳು, ಆವಿಷ್ಕಾರಗಳಿಂದ ಈ ಸಮಸ್ಯೆಯನ್ನು ನಿವಾರಿಸಬಹುದು ಎಂದು ತಿಳಿಸಿದ ನರೇಂದ್ರ ಮೋದಿ ಅವರು, ಇಂದು ನಾವು ತೆಗೆದುಕೊಳ್ಳುವ ನಿರ್ಣಯ, ಮುಂದಿನ ಪೀಳಿಗೆಯ ಮೇಲೆ ಪ್ರಭಾವ ಬೀರಲಿದೆ. ಹಾಗಾಗಿ ಹೊಸ ಕ್ಷೇತ್ರದಲ್ಲಿ ನವ ಚಿಂತನೆಯ ಅಗತ್ಯವಿದೆ ಎಂದು ಹೇಳಿದರು.
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…