ಇಡೀ ವಿಶ್ವ ಇಂದು ಹವಾಮಾನ ವೈಪರೀತ್ಯಕ್ಕೆ ಒಳಗಾಗಿದೆ. ಜಗತ್ತನ್ನು ಹವಾಮಾನ ವೈಪರೀತ್ಯದಿಂದ ರಕ್ಷಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ವಿಶ್ವ ಹಸಿರು ಜಲಜನಕ ಸಮಾವೇಶ ಉದ್ದೇಶಿಸಿ ವರ್ಚುವಲ್ ಮಾಧ್ಯಮದ ಮೂಲಕ ಪ್ರಧಾನಿ, ಭಾರತ ಹಸಿರು ಇಂಧನಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ರಾಷ್ಟ್ರೀಯ ಹಸಿರು ಇಂಧನ ಮಿಷನ್ ಕಾರ್ಯಕ್ರಮ ಜಾರಿಗೊಳಿಸಿದೆ. ಮುಂದಿನ ಪೀಳಿಗೆಗೆ ಸ್ವಾಸ್ಥ್ಯ ಪರಿಸರ ನೀಡುವುದು ನಮ್ಮೆಲ್ಲರ ಗುರುತರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಸುಸಜ್ಜಿತ, ಸುಭದ್ರ ಹಸಿರು ಜಲಜನಕ ಬಳಕೆ ನಮ್ಮ ಆದ್ಯತೆಯಾಗಬೇಕು. ಈ ನಿಟ್ಟಿನಲ್ಲಿ ಭಾರತ, ಜಿ-20 ಶೃಂಗಸಭೆಯ ಅಧ್ಯಕ್ಷತೆ ವಹಿಸಿಕೊಂಡಿದ್ದ ಸಂದರ್ಭದಲ್ಲಿ ಹಸಿರು ಹೈಡ್ರೋಜನ್ ಪ್ರಾಮುಖ್ಯತೆ ಪ್ರತಿಪಾದಿಸಿತ್ತು. ಹಸಿರು ಇಂಧನ ಬಳಕೆಯಲ್ಲಿ ಜಿ-20 ರಾಷ್ಟ್ರಗಳ ಪಾತ್ರ ಹಿರಿದು ಎಂದರು. ವಿಶ್ವ ಇಂದು ಎದುರಿಸುತ್ತಿರುವ ಹವಾಮಾನ ಬದಲಾವಣೆ ಸವಾಲನ್ನು ಸಮರ್ಥವಾಗಿ ನಿಭಾಯಿಸಬೇಕಾದರೆ, ಜಾಗತಿಕ ಸಮೂಹದ ಒಗ್ಗೂಡುವಿಕೆ ಅಗತ್ಯ. ಹೊಸ ಅಲೋಚನೆಗಳು, ಆವಿಷ್ಕಾರಗಳಿಂದ ಈ ಸಮಸ್ಯೆಯನ್ನು ನಿವಾರಿಸಬಹುದು ಎಂದು ತಿಳಿಸಿದ ನರೇಂದ್ರ ಮೋದಿ ಅವರು, ಇಂದು ನಾವು ತೆಗೆದುಕೊಳ್ಳುವ ನಿರ್ಣಯ, ಮುಂದಿನ ಪೀಳಿಗೆಯ ಮೇಲೆ ಪ್ರಭಾವ ಬೀರಲಿದೆ. ಹಾಗಾಗಿ ಹೊಸ ಕ್ಷೇತ್ರದಲ್ಲಿ ನವ ಚಿಂತನೆಯ ಅಗತ್ಯವಿದೆ ಎಂದು ಹೇಳಿದರು.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…