ಹಾವೇರಿ ಜಿಲ್ಲೆಯಲ್ಲಿ ಪತ್ತೆಯಾದ ಕಳಪೆ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಮಾರಾಟಗಾರರ ಲೈಸನ್ಸ್ ರದ್ದು ಮಾಡಿ, ಪ್ರಕರಣ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ರಾಣೇಬೆನ್ನೂರು ಉತ್ತಮ ಬೀಜಗಳಿಗೆ ಹೆಸರಾಗಿತ್ತು. ಈಗ ಕಳಪೆ ಬೀಜ ಮಾರಾಟದಿಂದ ಜಿಲ್ಲೆ ಸುದ್ದಿಯಲ್ಲಿದೆ. ರಾಜ್ಯ ಮಟ್ಟದ ಜಾಗೃತ ತಂಡ ಕರೆಸಿ ಪರಿಶೀಲನೆ ನಡೆಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಶಿಗ್ಗಾಂವಿ ತಾಲೂಕಿನಲ್ಲಿ ನಕಲಿ ಪಹಣಿ ತಯಾರಿಸಿ ರೈತರಲ್ಲದವರು ಬೆಳೆಹಾನಿ ಪರಿಹಾರ ಪಡೆದಿದ್ದಾರೆ. ಇದರಿಂದ ನೈಜ ರೈತರಿಗೆ ಅನ್ಯಾಯವಾದ ಬಗ್ಗೆ ದೂರು ಬಂದಿದೆ. ಈ ಕುರಿತು ತನಿಖೆ ನಡೆಸಿ ಎರಡು ತಿಂಗಳಲ್ಲಿ ವರದಿ ನೀಡುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…
ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…
ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್…
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…