Opinion

ಜೀವಕ್ಕೆ ಕುತ್ತು ತರಬಲ್ಲುದು ಮಧುಮೇಹ | ಸಕ್ಕರೆ ಕಾಯಿಲೆ ನಿಯಂತ್ರಣ ನಿಮ್ಮ ಕೈಯಲ್ಲಿದೆ | ಆಯುರ್ವೇದದಲ್ಲಿದೆ ಪರಿಹಾರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೇಹದಲ್ಲಿ ಗ್ಲುಕೋಸ್ #Glucose ಪದಾರ್ಥದ ನಿಯಂತ್ರಣ ವ್ಯವಸ್ಥೆಯು ಸರಿಯಾಗದೆ ಉಂಟಾಗುವ ಒಂದು ಕಾಯಿಲೆಯ ಸ್ಥಿತಿ ಹಾಗೂ ವಂಶ ಪಾರಂಪರ್ಯದಿಂದ ಬರಬಹುದಾದ ಕಾಯಿಲೆ ಮಧುಮೇಹ #Diabetes. ಗ್ಲುಕೋಸ್ ಒಂದು ರೀತಿಯ ಸಕ್ಕರೆಯಾಗಿದ್ದು ಇದನ್ನು ಪ್ರಮುಖವಾಗಿ ಪ್ಯಾಂಕ್ರಿಯಾಸ್ #Pancreas ಅಂಗವು ಉತ್ಪತ್ತಿ ಮಾಡಿ ಇನ್ಸುಲಿನ್ ಎಂಬ ಹಾರ್ಮೋನ್ ಅನ್ನು ನಿಯಂತ್ರಿಸುತ್ತದೆ.

Advertisement
Advertisement

ವಿಧಗಳು (Types):3
1) ಇನ್ಸುಲಿನ್ ಅವಲಂಬಿತ #InsulinDependent – ಮೇದೋಜೀರಕ ಗ್ರಂಥಿ ಇನ್ಸುಲಿನ ಉತ್ಪಾದಿಸಲು ವಿಫಲವಾದಾಗ ದೇಹದಲ್ಲಿ ಸಕ್ಕರೆ ಅಂಶ ಜಾಸ್ತಿಯಾಗಿ ಬರುವಂತದ್ದು
2) Non insulin Dependent- ಇನ್ಸುಲಿನ್ ಗೆ ಸರಿಯಾಗಿ ಪ್ರತಿಕ್ರಿಯೆ ನೀಡದೆ ಇರುವಾಗ ಸಕ್ಕರೆ ಅಂಶ ಹೆಚ್ಚಾಗಿ ಬರುವಂತಹ ಮಧುಮೇಹ. Type 1 & Type 2 ಮಧುಮೇಹ ವನ್ನು ಸಾಮಾನ್ಯವಾಗಿ ಕೇಳಿರುತ್ತೇವೆ. ಆದರೆ ಟೈಪ್ 3 ಸಿ ಮಧುಮೇಹ ಅತ್ಯಂತ ಮಾರಕ ರೋಗವಾಗಿದೆ.
3) Type 3 c ಇದರಲ್ಲಿ ಇನ್ಸುಲಿನ್ ಪ್ರಮಾಣ ಕಡಿಮೆಯಾಗಲು ಪ್ರಾರಂಭಿಸುತ್ತದೆ ಅಲ್ಲದೆ ದೇಹದಲ್ಲಿ ಹಾರ್ಮೋನ್ ಗಳ ಜೊತೆಗೆ ಜೀರ್ಣವಾಗುವ ಪ್ರೋಟೀನ್ ಗಳ ಪ್ರಮಾಣವೂ ಕಡಿಮೆ ಆಗುತ್ತದೆ. ಸಿಟಿ ಸ್ಕ್ಯಾನ್ ಅಥವಾ ಎಂಆರ್‌ಐ (CT scan orMRI scan ) ಮೂಲಕ ಇದನ್ನು ಪತ್ತೆ ಹಚ್ಚುತ್ತಾರೆ ಇದರಲ್ಲಿ ಅಲ್ಜ್ಯಮರ್ ಅಥವಾ ಮರೆವು ರೋಗ ಲಕ್ಷಣಗಳು ಪ್ರಮುಖವಾಗಿರುತ್ತದೆ ಅಧಿಕ ತೂಕ ಹೊಂದಿದ್ದು ಕುಟುಂಬದಲ್ಲಿ ಮಧುಮೇಹ ಇದ್ದರೆ ಅಥವಾ ಪಿಸಿಒಎಸ್ (pcos )ಒಳಗಾದವರಲ್ಲಿ ಹಾಗೂ ಖಿನ್ನತೆಗೆ ಒಳಗಾದವರಲ್ಲಿ ಹೆಚ್ಚಾಗಿ ಕಾಣಬಹುದು ಟೈಪ್1 ಹಾಗೂ ಟೈಪ್ 2 ಮಧುಮೇಹಕ್ಕೆ ಸರಿಯಾದ ಚಿಕಿತ್ಸೆಯನ್ನು ಪಡೆದೆ ಹೋದಲ್ಲಿ ಟೈಪ್ ತ್ರಿ ಸಿ ಮಧುಮೇಹ ಬರುವ ಸಾಧ್ಯತೆ ಇದೆ.

ದೈಹಿಕ ವ್ಯಾಯಾಮವಿಲ್ಲದೆ ಇರುವುದರಿಂದ ಹಾಗೂ ಅತಿಯಾದ ಕಾರ್ಬೋಹೈಡ್ರೇಟ್ಸ್ ಸೇವನೆಯಿಂದ ದೇಹದಲ್ಲಿ ಕೊಬ್ಬು ಮತ್ತು ಸಕ್ಕರೆ ಅಂಶ ಹೆಚ್ಚಾಗುತ್ತದೆ.

ಸಾಮಾನ್ಯ ಲಕ್ಷಣಗಳು :
* ಪದೇ ಪದೇ ಮೂತ್ರ ವಿಸರ್ಜನೆ
* ಅತಿ ಬಾಯಾರಿಕೆ
* ಹಸಿವು ಹೆಚ್ಚಾಗುವಿಕೆ
*ತೂಕದಲ್ಲಿ ಹೆಚ್ಚಳ ಅಥವಾ ಅಸಾಮಾನ್ಯ ತೂಕ ಇಳಿಕೆ
* ಅತಿಯಾದ ಆಯಾಸ
* ಪುರುಷರಲ್ಲಿ ಲೈಂಗಿಕ ದೌರ್ಬಲ್ಯತೆ
* ದೃಷ್ಟಿ ಮಂಜಾಗುವಿಕೆ
*ಗಾಯ ಬಹು ಸಮಯದವರೆಗೆ ವಾಸಿಯಾಗದೇ ಇರುವುದು… ಮುಂತಾದವುಗಳು

ಮಧುಮೇಹ ನಿಯಂತ್ರಣ:
– ಮಧುಮೇಹ ನಿಯಂತ್ರಣ ಮಾಡಲು ಆಯುರ್ವೇದದಲ್ಲಿ ಹಲವು ಪರಿಹಾರಗಳಿವೆ. ಮಧುಮೇಹ ರೋಗಿಗಳಿಗೆ ಆಯುರ್ವೇದ ಔಷಧಗಳು ಮತ್ತು ಔಷಧೀಯ ಮೌಲ್ಯಗಳಿಂದ ಸಮೃದ್ಧವಾಗಿರುವ ಆಹಾರ ಪದಾರ್ಥಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯಮಾಡುತ್ತದೆ ಹಾಗೂ ಇನ್ಸುಲಿನ್ ಉತ್ಪಾದನೆಯನ್ನು ಉತ್ತೇಜಿಸಿ ಮಧುಮೇಹವನ್ನು ನಿಯಂತ್ರಿಸುತ್ತದೆ
– ಮಧುಮೇಹ ನಿಯಂತ್ರಣದಲ್ಲಿ ಸಹಕಾರಿಯದ ಕೆಲವು ಆಹಾರ ಪದಾರ್ಥಗಳು : ಹಾಗಲಕಾಯಿ, ಮೆಂತ್ಯ ಬೀಜಗಳು, ನೇರಳೆ ಹಣ್ಣು, ನೆಲ್ಲಿಕಾಯಿ, ಅಮೃತಬಳ್ಳಿ, ಬೇವು ಇತ್ಯಾದಿ
– ದಿನನಿತ್ಯ ಅರ್ಧ ಗಂಟೆ ವಾಕಿಂಗ್ ಯೋಗಾಸನ ಪ್ರಾಣಾಯಾಮ ಧ್ಯಾನ ಸರಳ ವ್ಯಾಯಾಮಗಳನ್ನು ಮಾಡುವುದರಿಂದ ನಮ್ಮ ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಿಸಬಹುದು
ಮಧುಮೇಹವನ್ನು ಸರಿಯಾಗಿ ನಿಯಂತ್ರಿಸದಿದ್ದರೆ ಅನೇಕ ಉಪದ್ರವಗಳು ಕಾಣಿಸಿಕೊಳ್ಳುತ್ತವೆ
– Diabetic retinopathy – ಕಣ್ಣಿನ ತೊಂದರೆ
– Diabetic Neuropathy – ನರಗಳ ತೊಂದರೆ
ಹೀಗೆ ಕಿಡ್ನಿ ಸಮಸ್ಯೆ, ಹೃದಯ ತೊಂದರೆ ಅನೇಕ ಸಮಸ್ಯೆಗಳು ಕಾಣಿಸಬಹುದು. ಆದ ಕಾರಣ ಸರಿಯಾದ ಸಮಯದಲ್ಲಿ ಸರಿಯಾದ ಚಿಕಿತ್ಸೆಯನ್ನು ತೆಗೆದು ಕೊಂಡು ಮಧುಮೇಹ ನಿಯಂತ್ರಣದಲ್ಲಿರಿಸುವು ದು ಉತ್ತಮ …

Advertisement
ಬರಹ :
ಡಾ.ಜ್ಯೋತಿ ಕೆ, ಲಕ್ಷ್ಮೀ ಕ್ಲಿನಿಕ್ ಮಂಗಳೂರು. 94481 68053
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

7 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

8 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

11 hours ago

ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…

11 hours ago

ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490

12 hours ago

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

1 day ago