Advertisement
Opinion

ಜೀವಕ್ಕೆ ಕುತ್ತು ತರಬಲ್ಲುದು ಮಧುಮೇಹ | ಸಕ್ಕರೆ ಕಾಯಿಲೆ ನಿಯಂತ್ರಣ ನಿಮ್ಮ ಕೈಯಲ್ಲಿದೆ | ಆಯುರ್ವೇದದಲ್ಲಿದೆ ಪರಿಹಾರ

Share

ದೇಹದಲ್ಲಿ ಗ್ಲುಕೋಸ್ #Glucose ಪದಾರ್ಥದ ನಿಯಂತ್ರಣ ವ್ಯವಸ್ಥೆಯು ಸರಿಯಾಗದೆ ಉಂಟಾಗುವ ಒಂದು ಕಾಯಿಲೆಯ ಸ್ಥಿತಿ ಹಾಗೂ ವಂಶ ಪಾರಂಪರ್ಯದಿಂದ ಬರಬಹುದಾದ ಕಾಯಿಲೆ ಮಧುಮೇಹ #Diabetes. ಗ್ಲುಕೋಸ್ ಒಂದು ರೀತಿಯ ಸಕ್ಕರೆಯಾಗಿದ್ದು ಇದನ್ನು ಪ್ರಮುಖವಾಗಿ ಪ್ಯಾಂಕ್ರಿಯಾಸ್ #Pancreas ಅಂಗವು ಉತ್ಪತ್ತಿ ಮಾಡಿ ಇನ್ಸುಲಿನ್ ಎಂಬ ಹಾರ್ಮೋನ್ ಅನ್ನು ನಿಯಂತ್ರಿಸುತ್ತದೆ.

ವಿಧಗಳು (Types):3
1) ಇನ್ಸುಲಿನ್ ಅವಲಂಬಿತ #InsulinDependent – ಮೇದೋಜೀರಕ ಗ್ರಂಥಿ ಇನ್ಸುಲಿನ ಉತ್ಪಾದಿಸಲು ವಿಫಲವಾದಾಗ ದೇಹದಲ್ಲಿ ಸಕ್ಕರೆ ಅಂಶ ಜಾಸ್ತಿಯಾಗಿ ಬರುವಂತದ್ದು
2) Non insulin Dependent- ಇನ್ಸುಲಿನ್ ಗೆ ಸರಿಯಾಗಿ ಪ್ರತಿಕ್ರಿಯೆ ನೀಡದೆ ಇರುವಾಗ ಸಕ್ಕರೆ ಅಂಶ ಹೆಚ್ಚಾಗಿ ಬರುವಂತಹ ಮಧುಮೇಹ. Type 1 & Type 2 ಮಧುಮೇಹ ವನ್ನು ಸಾಮಾನ್ಯವಾಗಿ ಕೇಳಿರುತ್ತೇವೆ. ಆದರೆ ಟೈಪ್ 3 ಸಿ ಮಧುಮೇಹ ಅತ್ಯಂತ ಮಾರಕ ರೋಗವಾಗಿದೆ.
3) Type 3 c ಇದರಲ್ಲಿ ಇನ್ಸುಲಿನ್ ಪ್ರಮಾಣ ಕಡಿಮೆಯಾಗಲು ಪ್ರಾರಂಭಿಸುತ್ತದೆ ಅಲ್ಲದೆ ದೇಹದಲ್ಲಿ ಹಾರ್ಮೋನ್ ಗಳ ಜೊತೆಗೆ ಜೀರ್ಣವಾಗುವ ಪ್ರೋಟೀನ್ ಗಳ ಪ್ರಮಾಣವೂ ಕಡಿಮೆ ಆಗುತ್ತದೆ. ಸಿಟಿ ಸ್ಕ್ಯಾನ್ ಅಥವಾ ಎಂಆರ್‌ಐ (CT scan orMRI scan ) ಮೂಲಕ ಇದನ್ನು ಪತ್ತೆ ಹಚ್ಚುತ್ತಾರೆ ಇದರಲ್ಲಿ ಅಲ್ಜ್ಯಮರ್ ಅಥವಾ ಮರೆವು ರೋಗ ಲಕ್ಷಣಗಳು ಪ್ರಮುಖವಾಗಿರುತ್ತದೆ ಅಧಿಕ ತೂಕ ಹೊಂದಿದ್ದು ಕುಟುಂಬದಲ್ಲಿ ಮಧುಮೇಹ ಇದ್ದರೆ ಅಥವಾ ಪಿಸಿಒಎಸ್ (pcos )ಒಳಗಾದವರಲ್ಲಿ ಹಾಗೂ ಖಿನ್ನತೆಗೆ ಒಳಗಾದವರಲ್ಲಿ ಹೆಚ್ಚಾಗಿ ಕಾಣಬಹುದು ಟೈಪ್1 ಹಾಗೂ ಟೈಪ್ 2 ಮಧುಮೇಹಕ್ಕೆ ಸರಿಯಾದ ಚಿಕಿತ್ಸೆಯನ್ನು ಪಡೆದೆ ಹೋದಲ್ಲಿ ಟೈಪ್ ತ್ರಿ ಸಿ ಮಧುಮೇಹ ಬರುವ ಸಾಧ್ಯತೆ ಇದೆ.

ದೈಹಿಕ ವ್ಯಾಯಾಮವಿಲ್ಲದೆ ಇರುವುದರಿಂದ ಹಾಗೂ ಅತಿಯಾದ ಕಾರ್ಬೋಹೈಡ್ರೇಟ್ಸ್ ಸೇವನೆಯಿಂದ ದೇಹದಲ್ಲಿ ಕೊಬ್ಬು ಮತ್ತು ಸಕ್ಕರೆ ಅಂಶ ಹೆಚ್ಚಾಗುತ್ತದೆ.

ಸಾಮಾನ್ಯ ಲಕ್ಷಣಗಳು :
* ಪದೇ ಪದೇ ಮೂತ್ರ ವಿಸರ್ಜನೆ
* ಅತಿ ಬಾಯಾರಿಕೆ
* ಹಸಿವು ಹೆಚ್ಚಾಗುವಿಕೆ
*ತೂಕದಲ್ಲಿ ಹೆಚ್ಚಳ ಅಥವಾ ಅಸಾಮಾನ್ಯ ತೂಕ ಇಳಿಕೆ
* ಅತಿಯಾದ ಆಯಾಸ
* ಪುರುಷರಲ್ಲಿ ಲೈಂಗಿಕ ದೌರ್ಬಲ್ಯತೆ
* ದೃಷ್ಟಿ ಮಂಜಾಗುವಿಕೆ
*ಗಾಯ ಬಹು ಸಮಯದವರೆಗೆ ವಾಸಿಯಾಗದೇ ಇರುವುದು… ಮುಂತಾದವುಗಳು

ಮಧುಮೇಹ ನಿಯಂತ್ರಣ:
– ಮಧುಮೇಹ ನಿಯಂತ್ರಣ ಮಾಡಲು ಆಯುರ್ವೇದದಲ್ಲಿ ಹಲವು ಪರಿಹಾರಗಳಿವೆ. ಮಧುಮೇಹ ರೋಗಿಗಳಿಗೆ ಆಯುರ್ವೇದ ಔಷಧಗಳು ಮತ್ತು ಔಷಧೀಯ ಮೌಲ್ಯಗಳಿಂದ ಸಮೃದ್ಧವಾಗಿರುವ ಆಹಾರ ಪದಾರ್ಥಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯಮಾಡುತ್ತದೆ ಹಾಗೂ ಇನ್ಸುಲಿನ್ ಉತ್ಪಾದನೆಯನ್ನು ಉತ್ತೇಜಿಸಿ ಮಧುಮೇಹವನ್ನು ನಿಯಂತ್ರಿಸುತ್ತದೆ
– ಮಧುಮೇಹ ನಿಯಂತ್ರಣದಲ್ಲಿ ಸಹಕಾರಿಯದ ಕೆಲವು ಆಹಾರ ಪದಾರ್ಥಗಳು : ಹಾಗಲಕಾಯಿ, ಮೆಂತ್ಯ ಬೀಜಗಳು, ನೇರಳೆ ಹಣ್ಣು, ನೆಲ್ಲಿಕಾಯಿ, ಅಮೃತಬಳ್ಳಿ, ಬೇವು ಇತ್ಯಾದಿ
– ದಿನನಿತ್ಯ ಅರ್ಧ ಗಂಟೆ ವಾಕಿಂಗ್ ಯೋಗಾಸನ ಪ್ರಾಣಾಯಾಮ ಧ್ಯಾನ ಸರಳ ವ್ಯಾಯಾಮಗಳನ್ನು ಮಾಡುವುದರಿಂದ ನಮ್ಮ ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಿಸಬಹುದು
ಮಧುಮೇಹವನ್ನು ಸರಿಯಾಗಿ ನಿಯಂತ್ರಿಸದಿದ್ದರೆ ಅನೇಕ ಉಪದ್ರವಗಳು ಕಾಣಿಸಿಕೊಳ್ಳುತ್ತವೆ
– Diabetic retinopathy – ಕಣ್ಣಿನ ತೊಂದರೆ
– Diabetic Neuropathy – ನರಗಳ ತೊಂದರೆ
ಹೀಗೆ ಕಿಡ್ನಿ ಸಮಸ್ಯೆ, ಹೃದಯ ತೊಂದರೆ ಅನೇಕ ಸಮಸ್ಯೆಗಳು ಕಾಣಿಸಬಹುದು. ಆದ ಕಾರಣ ಸರಿಯಾದ ಸಮಯದಲ್ಲಿ ಸರಿಯಾದ ಚಿಕಿತ್ಸೆಯನ್ನು ತೆಗೆದು ಕೊಂಡು ಮಧುಮೇಹ ನಿಯಂತ್ರಣದಲ್ಲಿರಿಸುವು ದು ಉತ್ತಮ …

ಬರಹ :
ಡಾ.ಜ್ಯೋತಿ ಕೆ, ಲಕ್ಷ್ಮೀ ಕ್ಲಿನಿಕ್ ಮಂಗಳೂರು. 94481 68053
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

3 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

3 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

12 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

13 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago