ಕೇರಳದ ತ್ರಿಶೂರ್(Trishur) ಮತ್ತು ಪಾಲಕ್ಕಾಡ್(Palakhad) ಜಿಲ್ಲೆಗಳ ವಿವಿಧ ಪ್ರದೇಶಗಳಲ್ಲಿ ಲಘು ಭೂಕಂಪನವಾಗಿದೆ(LIGHT EARTHQUAKE). ಬೆಳಗ್ಗೆ 8.16ಕ್ಕೆ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪ ಮಾನಿಟರಿಂಗ್ ಸೆಂಟರ್ ಪ್ರಕಾರ, ರಿಕ್ಟರ್ ಮಾಪಕದಲ್ಲಿ ಮೂರು ತೀವ್ರತೆಗಳು ದಾಖಲಾಗಿವೆ.
ತ್ರಿಶೂರ್ ಜಿಲ್ಲೆಯ ಕುನ್ನಂಕುಲಂ, ವೆಲ್ಲರಕಾಡ್, ಮುಂಡೂರು, ಎರುಮಪೆಟ್ಟಿ ಕರಿಯನ್ನೂರ್, ವೆಲ್ಲತೇರಿ, ವೆಲ್ಲೂರು ಮತ್ತು ನೆಲ್ಲಿಕುನ್ ಭಾಗಗಳಲ್ಲಿ ಭೂಕಂಪ ಸಂಭವಿಸಿದೆ. ಪಾಲಕ್ಕಾಡ್, ತಿರುಮಿಟಕೋಡ್, ಕುಮಾರನೆಲ್ಲೂರ್ ಮತ್ತು ಆಲತ್ತೂರ್ ಪ್ರದೇಶದಲ್ಲಿ ಈ ಕಂಪನ ಕಂಡು ಬಂದಿದೆ. ಭೂಕಂಪನವು ಮೂರ್ನಾಲ್ಕು ಸೆಕೆಂಡುಗಳ ಕಾಲ ಸಂಭವಿಸಿತು. ಕೆಲ ಮನೆಗಳಲ್ಲಿ ತಟ್ಟೆಗಳು ಅಲುಗಾಡಿದ್ದು, ಗೃಹೋಪಯೋಗಿ ವಸ್ತುಗಳು ಕೆಳಗೆ ಬಿದ್ದಿವೆ. ದೊಡ್ಡ ಶಬ್ದದಿಂದ ಭೂಮಿ ಕಂಪಿಸಿತು. ಜನರು ಗಾಬರಿಗೊಂಡು ಮನೆಯಿಂದ ಹೊರಗೆ ಓಡಿ ಬಂದರು. ಈ ಘಟನೆಯಲ್ಲಿ ಯಾವುದೇ ಹಾನಿ ಅಥವಾ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.
ಇದೇ ವೇಳೆ ಜನತೆ ಭಯಪಡುವ ಅಗತ್ಯವಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ. ಭೂಕಂಪ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಅಧಿಕಾರಿಗಳ ತಂಡಕ್ಕೆ ಜಿಲ್ಲಾಡಳಿತ ಸೂಚನೆ ನೀಡಿದೆ. ಅದರಂತೆ ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ. ಭೂಕಂಪದ ಕೇಂದ್ರ ಬಿಂದು ತ್ರಿಶೂರ್ನಿಂದ 18 ಕಿ.ಮೀ ಉತ್ತರ ಭಾಗದಲ್ಲಿತ್ತು ಎಂಬುದು ದೃಢಪಟ್ಟಿದೆ.
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…