ಬೆಳಗಾವಿ ಜಿಲ್ಲೆಯ ತುಮ್ಮರಗುದ್ದಿ ಗ್ರಾಮದಲ್ಲಿ ಸಿಡಿಲಿಗೆ ಯುವಕ ಬಲಿಯಾಗಿದ್ದು, ಯುವಕನ ತಾಯಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಭೀಮಪ್ಪ (25) ಮೃತ ಯುವಕ. ತಾಯಿ ಹೊಳಡವ್ವ (47) ಗಂಭೀರವಾಗಿ ಗಾಯಗೊಂಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಗುರುವಾರ ಸಂಜೆ ಬಂದ ಗುಡುಗು ಸಿಡಿಲಿನ ಸಂದರ್ಭ ಇವರ ಗುಡಿಸಲಿಗೆ ಸಿಡಿಲು ಬಡಿದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಇವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭೀಮಪ್ಪ ಮೃತಪಟ್ಟಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel