Advertisement
ಸುದ್ದಿಗಳು

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

Share

ರಾಜ್ಯದಲ್ಲಿ ಸಿಡಿಲು ಮತ್ತು ಮಿಂಚಿನ ಆರ್ಭಟ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು, ಕಳೆದ 14 ವರ್ಷಗಳಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಂಡಿರುವುದು ಆತಂಕ ಮೂಡಿಸಿದೆ.

ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಆಯುಕ್ತ ಎಸ್. ಹೊನ್ನಾಂಬ ಅವರು ನೀಡಿದ ಮಾಹಿತಿಯಂತೆ, 2011ರಿಂದ 2025ರ ಜುಲೈವರೆಗೆ ಒಟ್ಟು 1,026 ಮಂದಿ ಸಿಡಿಲು ಬಡಿತಕ್ಕೆ ಬಲಿಯಾಗಿದ್ದಾರೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವತಿಯಿಂದ ಆಯೋಜಿಸಲಾದ ಆನ್‌ಲೈನ್ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಸಿಡಿಲಿನಿಂದ ಸಂಭವಿಸುವ ಮರಣ ಪ್ರಮಾಣವನ್ನು ‘ಶೂನ್ಯ’ಕ್ಕೆ ಇಳಿಸುವುದು ಸರ್ಕಾರದ ಗುರಿಯಾಗಿದೆ. ಆದರೆ ಸಾರ್ವಜನಿಕರ ಅಸಡ್ಡೆ ಮತ್ತು ಮುನ್ನೆಚ್ಚರಿಕೆಯ ಕೊರತೆಯಿಂದ ದುರ್ಘಟನೆಗಳು ನಡೆಯುತ್ತಿವೆ” ಎಂದು ಕಳವಳ ವ್ಯಕ್ತಪಡಿಸಿದರು.

ಜಿಲ್ಲಾವಾರು ಅಂಕಿಅಂಶಗಳನ್ನು ನೀಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ 86, ಕಲಬುರಗಿ 80, ವಿಜಯಪುರ 79, ಬೀದರ್ 75 ಹಾಗೂ ಹಾಸನ ಜಿಲ್ಲೆಯಲ್ಲಿ 56 ಸಾವುಗಳು ದಾಖಲಾಗಿವೆ ಎಂದು ತಿಳಿಸಿದ್ದಾರೆ.

ಸಿಡಿಲು ಬಡಿಯುವ 30 ರಿಂದ 45 ನಿಮಿಷಗಳ ಮುಂಚೆಯೇ ಎಚ್ಚರಿಕೆ ನೀಡುವ Damini App ಅನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಅಲ್ಲದೆ ಮಳೆಯ ಸಂದರ್ಭದಲ್ಲಿ ತೆರೆಯಾದ ಜಾಗಗಳಲ್ಲಿ ನಿಲ್ಲುವುದು, ಮರಗಳ ಕೆಳಗೆ ಆಶ್ರಯ ಪಡೆಯುವುದು, ಲೋಹ ವಸ್ತುಗಳನ್ನು ಹಿಡಿದುಕೊಳ್ಳುವುದು ಮುಂತಾದವುಗಳನ್ನು ತಪ್ಪಿಸುವಂತೆ ಸೂಚಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Lightning strikes in Karnataka have caused 1,026 deaths between 2011 and July 2025, with Belagavi reporting the highest fatalities. Authorities urge people to use the Damini mobile app for early warnings and follow safety measures to reduce deaths to zero.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

8 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

14 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

14 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

1 day ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

1 day ago