ಇಂದು ಸುರಿದ ಗುಡುಗು ಸಹಿತ ಬಾರಿ ಮಳೆಗೆ ಇತಿಹಾಸ ಪ್ರಸಿದ್ದ ಬೇಲೂರು ಶ್ರೀ ಚನ್ನಕೇಶವ ಸ್ವಾಮಿ ದೇವಾಲಯದ ರಾಜಗೋಪುರದ ಬಲಪಾರ್ಶ್ವಕ್ಕೆ ಸಿಡಿಲು ಬಡಿದಿದ್ದು ಸ್ವಲ್ಪ ಮಟ್ಟಿನ ಸಿಮೆಂಟ್ ಕಿತ್ತು ಸಣ್ಣ ಪ್ರಮಾಣದ ಹಾನಿಯಾಗಿದೆ ಎಂದು ಬೇಲೂರು ಶ್ರೀ ಚೆನ್ನಕೇಶವ ಸ್ವಾಮಿ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾಕ್ಟರ್ ನಾರಾಯಣ ಸ್ವಾಮಿ ಹೇಳಿದರು.
ಈ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕಷ್ಟು ವರ್ಷಗಳಿಂದ ಮಳೆ ಸಿಡಿಲು ಬಂದರೂ ಇದುವರೆವಿಗೂ ಏನೂ ಹಾನಿಯಾಗದಂತಿದ್ದ ರಾಜಗೋಪುರ ಸಿಡಿಲಿಗೆ ಸಿಡಿಲು ನಿರೋಧಕ ಅಳವಡಿಸಿದ್ದರೂ ಕೂಡ ಇಂದಿನ ಭಾರೀ ಸಿಡಿಲಿಗೆ ಅಲ್ಪಮಟ್ಟಿನ ಹಾನಿಯಾಗಿದೆ ಈ ವಿಚಾರವಾಗಿ ಈಗಾಗಲೇ ದೇವಾಲಯಕ್ಕೆ ಸಂಬಂಧಿಸಿದ ಪುರಾತತ್ವ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಕರೆ ಮೂಲಕ ತಿಳಿಸಲಾಗಿದೆ, ಮುಂದಿನ ದಿನಗಳಲ್ಲಿ ಸಿಡಿಲು ನಿರೋಧಕ ಕೆಲಸ ಮಾಡುತ್ತಿದೆಯೋ ಇಲ್ಲವೋ ಎಂಬುದನ್ನು ಪರೀಕ್ಷಿಸುತ್ತೇವೆ ಎಂದು ಹೇಳಿದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…