ಪ್ರಾಕೃತಿಕವಾಗಿ ಕಲಬುರಗಿ ಜಿಲ್ಲೆಯ ಬಹುತೇಕ ನೆಲದ ಒಳ ಪದರದಲ್ಲಿ ಸುಣ್ಣದ ಕಲ್ಲು ಒಳಗೊಂಡಿರುವ ಹಿನ್ನಲೆಯಲ್ಲಿ ಇಲ್ಲಿನ ಮಣ್ಣಿಗೆ ಅತಿ ನೀರು ಅಪಾಯಕಾರಿ ಎಂದು ಕೃಷಿ ಜಂಟಿ ನಿರ್ದೇಶಕ ಸಮದ್ ಪಟೇಲ್ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಪ್ರಸ್ತುತ ಅತಿವೃಷ್ಠಿಯಿಂದ ತೊಗರಿ, ಹತ್ತಿ ಹಾಗೂ ಇತರೆ ಬೆಳೆಗೆ ಬರಬಹುದಾದ ಕೀಟ ರೋಗ ಬಾಧೆ ಹಾಗೂ ಅದರ ನಿರ್ವಹಣೆಯ ಕುರಿತು ವಿವರಿಸಲು ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಮ್ಮ ಈ ನೆಲದ ಮಣ್ಣು ಒಂದು ಮಳೆಗೆ 84 ದಿನ ತೇವಾಂಶ ಹಿಡಿದಿಡುವ ಶಕ್ತಿ ಹೊಂದಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ 2025 ನೇ ಸಾಲಿನ ಜನವರಿ ಯಿಂದ ಸೆಪ್ಟೆಂಬರ್ ವರೆಗೆ ಈ 9 ತಿಂಗಳಲ್ಲಿ ವಾಡಿಕೆಯಂತೆ 609 ಮಿ.ಮೀ ಮಳೆಯಾಗಬೇಕಾಗಿದ್ದು, 900 ಮಿ.ಮೀ ಎಂದರೆ ಶೇ 48% ರಷ್ಟು ಹೆಚ್ಚು ಮಳೆಯಾಗಿದೆ. ಜಿಲ್ಲೆಯ ಒಟ್ಟು 11 ತಾಲ್ಲೂಕುಗಳಲ್ಲಿ ಚಿಂಚೋಳಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಕಾಳಗಿ ವಾಡಿಕೆಯಂತಾಗಿದೆ, ಉಳಿದ 9 ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಅದರಲ್ಲೂ ಕಳೆದ ಮೇ ತಿಂಗಳಿನಿಂದ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಹೊಲಗಳಲ್ಲಿ ನೀರು ನಿಲ್ಲುವ ಮೂಲಕ ಬೆಳೆಗಳಿಗೆ ಅನೇಕ ರೋಗಗಳು ಭಾದಿಸುತ್ತಿರುವುದು ರೈತರಿಗೆ ಸಂಕಷ್ಟ ತಂದಿದೆ ಎಂದರು. ಮುಂಬರುವ ಹಿಂಗಾರು ಬೆಳೆಗಳನ್ನು ಗಮನದಲ್ಲಿಟ್ಟುಕೊಂಡು ಕೃಷಿ ಇಲಾಖೆವತಿಯಿಂದ ಮುಂದಿನ ಅಕ್ಟೋಬರ್ ಮಾಹೆಯ 3 ರಿಂದ 18 ರ ವರೆಗೆ “ವಿಕಸಿತ ಕೃಷಿ ಸಂಕಲ್ಪಅಭಿಯಾನವನ್ನು” ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…
ದೇಶದ ವಿವಿದೆಡೆ ಮಾರ್ಚ್ ತಿಂಗಳಲ್ಲಿ ಉತ್ತಮ ಮಳೆಯಾಗಿದೆ. ವಿಶೇಷವಾಗಿ ರಾಜ್ಕೋಟ್ನಲ್ಲಿ ಅಸಾಮಾನ್ಯ ಹವಾಮಾನದಿಂದ…
ಹೋರ್ಮುಜ್ ಜಲಸಂಧಿ ಸಂಕಷ್ಟದಿಂದ ಭಾರತಕ್ಕೆ ಗೊಬ್ಬರ ಮತ್ತು ಇಂಧನ ಪೂರೈಕೆ ಮೇಲೆ ಒತ್ತಡ…