ಕಾನೂನು ಸಾಕಷ್ಟು ಇದೆ. ಆದರೆ ಕಾನೂನಿನ ಇತಿಮಿತಿಯೊಳಗೆ ಜನಪರವಾದ ಕೆಲಸಗಳು ನಡೆಯಬೇಕು. ಕೆಲವೊಮ್ಮೆ ಜನಪರ ಕೆಲಸ ಮಾಡುವ ವೇಳೆ ಕಾನೂನೂ ಕೊಂಚ ಸಡಿಲವಾಗಬೇಕು. ಇಲ್ಲದೇ ಇದ್ದರೆ ಸಂಕಷ್ಟಗಳು ಮುಗಿಯದು. ಇದಕ್ಕೊಂದು ಉದಾಹರಣೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸ್ಥಳದಲ್ಲಿ ದಾಖಲೆ ತೋರಿಸದ್ದಕ್ಕೆ ಪೊಲೀಸರು ಲೈನ್ ಮ್ಯಾನ್ ಗೆ ದಂಡ ಹಾಕಿದರು. ಪೊಲೀಸ್ ಠಾಣೆಯಲ್ಲಿ ಮೀಟರ್ ಅಳವಡಿಸಿದೆ ವಿದ್ಯುತ್ ಬಳಕೆ ಮಾಡುವುದಕ್ಕೆ ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದು ಲೈನ್ ಮ್ಯಾನ್…!. ಎರಡೂ ಕಾನೂನು ಪ್ರಕಾರ ಸರಿಯಾಗಿದೆ…!
ಉತ್ತರಪ್ರದೇಶ ಪೊಲೀಸರ ಮೇಲಿನ ಕೋಪದಿಂದ ಲೈನ್ಮ್ಯಾನ್ ಓರ್ವ ಠಾಣೆಯ ವಿದ್ಯುತ್ ಸಂಪರ್ಕವನ್ನೇ ಕಡಿತಗೊಳಿಸಿರುವ ಘಟನೆ ಉತ್ತರಪ್ರದೇಶದ ಹರ್ದಸ್ಪುರ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಬರೇಲಿಯ ಲೈನ್ಮ್ಯಾನ್ ಭಗವಾನ್ ಸ್ವರೂಪ್ ಈ ಕೆಲಸ ಮಾಡಿದಾತ. ಶನಿವಾರ ತಪಾಸಣೆಯಲ್ಲಿದ್ದ ಪೊಲೀಸರು ಒಬ್ಬರು ಭಗವಾನ್ ದಾಸ್ ಅವರ ಬೈಕ್ ಅಡ್ಡಗಟ್ಟಿದ್ದರು. ಆಗ ದಾಖಲೆ ಕೇಳಿದ್ದಕ್ಕೆ ಕೊಡಲು ವಿಫಲನಾದ ಲೈನ್ಮ್ಯಾನ್ ಮನೆಗೆ ಹೋಗಿ ತರುವುದಾಗಿ ಹೇಳಿದ್ದರೂ ಕೇಳದ ಪೊಲೀಸರು 500 ರೂ. ದಂಡ ವಿಧಿಸಿದ್ದರು. ಇದರಿಂದ ತೀವ್ರ ಬೇಸರಗೊಂಡ ಲೈನ್ಮ್ಯಾನ್, ತನಗೆ ಗೊತ್ತಿರುವ ಸಿಬ್ಬಂದಿಗೆ ಹೇಳಿಸಿ ಠಾಣೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದ. ಈ ಕುರಿತು ಮಾಧ್ಯಮದವರಿಗೆ ಪ್ರತಿಕ್ರಿಯಿಸಿರುವ ಲೈನ್ಮ್ಯಾನ್, ಠಾಣೆ ವಿದ್ಯುತ್ ಸಂಪರ್ಕವಿದ್ದರೂ ಮೀಟರ್ ಇರಲಿಲ್ಲ, ಹೀಗಾಗಿ ಅದು ಕಾನೂನುಬಾಹಿರ ಎಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದೇನೆ ಎಂದು ಹೇಳಿದ್ದಾರೆ.
ಐಎಎನ್ಎಸ್ ವರದಿಯ ಪ್ರಕಾರ, ಬರೇಲಿಯ ಲೈನ್ಮ್ಯಾನ್ ಭಗವಾನ್ ಸ್ವರೂಪ್ ಅವರು ಹರ್ದಾಸ್ಪುರ ಪೊಲೀಸ್ ಠಾಣೆಯ ವಿದ್ಯುತ್ ಸರಬರಾಜನ್ನು ಶನಿವಾರ ಸ್ಥಗಿತಗೊಳಿಸಿದ್ದಾರೆ. ಮೋದಿ ಸಿಂಗ್ ಎಂಬ ಅಧಿಕಾರಿಯೊಬ್ಬರು ಈ ಹಿಂದೆಯೂ ಕೂಡಾ ಚೆಕ್ಪಾಯಿಂಟ್ನಲ್ಲಿ ನಿಲ್ಲಿಸಿ ದಾಖಲೆ ಕೇಳಿದರು. ತಕ್ಷಣಕ್ಕೆ ಇಲ್ಲ, ಮನೆಗೆ ಹೋಗಿ ತಂದುಕೊಡುತ್ತೇನೆ ಎಂದರೂ ಕೇಳದ ಅಧಿಕಾರಿಗಳು ದಂಡ ಹಾಕಿದರು. ಲೈನ್ ಮ್ಯಾನ್ ಆದ ಕಾರಣ ಎಲ್ಲಾ ದಾಖಲೆ ವಾಹನದಲ್ಲಿ ಇಡಲು ಸಾಧ್ಯವಿಲ್ಲ ಎಂದರೂ ಅಧಿಕಾರಿಗಳು ಕೇಳಲಿಲ್ಲ, ಕಾನೂನು ಪಾಲನೆ ಎಂದರು. ಇದರಿಂದ ಬೇಸರಗೊಂಡ ಲೈನ್ ಮ್ಯಾನ್ ತನ್ನ ಸಹೋದ್ಯೋಗಿಗಳೊಂದಿಗೆ ಸೇರಿಕೊಂಡು ಠಾಣೆಯ ವಿದ್ಯುತ್ ಕಡಿತಗೊಳಿಸಿದನು. ಈ ಬಗ್ಗೆ ಪ್ರಶ್ನಿಸಿದಾಗ ಕಾನೂನುಬಾಹಿರವಾಗಿ ವಿದ್ಯುತ್ ಬಳಸಲಾಗುತ್ತಿದೆ ಎಂದು ಹೇಳಿಕೆ ನೀಡಿದ್ದನು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…