ಗುಜರಾತಿನಲ್ಲಿ ಮದ್ಯನಿಷೇಧ ಆದೇಶ ಸಡಿಲ | ಅಡಿಕೆ ಮಾರುಕಟ್ಟೆಯಲ್ಲಿ ನಿಧಾನವಾಗಿ ಪರಿಣಾಮ.. ?

December 27, 2023
2:57 PM
ಗುಜರಾತಿನಲ್ಲಿ ಅಡಿಕೆ ಮಾರುಕಟ್ಟೆ ಹಾಗೂ ಮದ್ಯ ಮಾರಾಟ ಮುಕ್ತವಾಗಿರುವ ಬಗ್ಗೆ ನಡೆಯುವ ಚರ್ಚೆ.

ಗುಜರಾತ್ ಇಂಟರ್ನ್ಯಾಷನಲ್ ಫೈನಾನ್ಸ್ ಟೆಕ್-ಸಿಟಿ ಯಲ್ಲಿ “ಜಾಗತಿಕ ವ್ಯಾಪಾರ ಪರಿಸರ ವ್ಯವಸ್ಥೆ”ಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಗುಜರಾತ್ ಸರ್ಕಾರ, ಈ ಪ್ರದೇಶದಲ್ಲಿ ಮದ್ಯ ನಿಷೇಧ ಆದೇಶವನ್ನು ಹಿಂಪಡೆದಿದೆ. ಈ ಆದೇಶ ಅಡಿಕೆ ಮೇಲೆ ಪರಿಣಾಮ ಬೀರೀತೇ ಎಂಬುದು ಈಗ ಚರ್ಚೆಯಾಗುತ್ತಿರುವ ವಿಷಯ. ಅಂದ ಹಾಗೆ ಅಡಿಕೆಗೂ ಮದ್ಯಕ್ಕೂ ಏನು ಸಂಬಂಧ…?.

ಗುಜರಾತ್ ರಚನೆಯಾದಾಗಿನಿಂದ ರಾಜ್ಯದಲ್ಲಿ ಮದ್ಯದ ಪಾನೀಯಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಲಾಗಿದೆ. ಈ ಹಿಂದೆ ರಾಜ್ಯದ ಯಾವುದೇ ಪ್ರದೇಶದಲ್ಲಿ ಇಂತಹ ವಿನಾಯಿತಿ ನೀಡಿರಲಿಲ್ಲ. ಆದರೆ ಗಿಫ್ಟ್ ಸಿಟಿ ಜಾಗತಿಕ ಆರ್ಥಿಕ ಮತ್ತು ತಾಂತ್ರಿಕ ಕೇಂದ್ರವಾಗಿ ಹೊರಹೊಮ್ಮಿದೆ. ಇದು ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿದೆ. ಜಾಗತಿಕ ವ್ಯಾಪಾರ ಪರಿಸರ ವ್ಯವಸ್ಥೆಯನ್ನು ಕಲ್ಪಿಸಲು ಗಿಫ್ಟ್ ಸಿಟಿ ಪ್ರದೇಶದಲ್ಲಿ `ವೈನ್ ಮತ್ತು ಡೈನ್’ ಸೌಲಭ್ಯಕ್ಕೆ ಅನುಮತಿ ನೀಡುವ ಮಹತ್ವದ ನಿರ್ಧಾರವನ್ನುಗುಜರಾತ್‌ ಸರ್ಕಾರ ಕೈಗೊಂಡಿದೆ.

ಆದರೆ, ಮದ್ಯಕ್ಕೂ ಅಡಿಕೆಗೂ ಏನು ಸಂಬಂಧ…? ಇದು ಪ್ರಶ್ನೆ. ಆ ಬಳಿಕ ಉಳಿದ ಚರ್ಚೆ. ಅಡಿಕೆ ಬಹುಪಾಲು ಬಳಕೆಯಾಗುವುದು ಚಟದ ಕಾರಣದಿಂದ. ಅಂದರೆ ಜಗಿದು ಉಗಿಯಲು. ಉತ್ತರ ಭಾರತದಲ್ಲಿ ಚಳಿಯ ಕಾರಣದಿಂದ ಕೆಲವರು ಅಡಿಕೆ ಜಗಿದರೆ, ಇನ್ನೂ ಕೆಲವರು ಚಟದ ಕಾರಣದಿಂದ ಅಡಿಕೆ ಜಗಿಯುತ್ತಾರೆ.  ಕೆಲವು ಕಡೆಗಳಲ್ಲಿ ಮದ್ಯಪಾನದ ನಂತರ ಅಡಿಕೆ ಜಗಿಯುವವರೂ ಇದ್ದಾರೆ, ಮದ್ಯದ ನಂತರ ಇದೂ ಒಂದಿರಲಿ ಎನ್ನುವ ಚಟವೂ ಇದೆ.

ಈಗ ಗುಜರಾತ್‌ನ ಕೆಲವು ಭಾಗದಲ್ಲಿ ಅಡಿಕೆ ಜಗಿಯುವವರ ಪ್ರಮಾಣ ಹೆಚ್ಚಾಗಿದೆ. ಮದ್ಯ ನಿಷೇಧದ ಹಿನ್ನೆಲೆಯಲ್ಲಿ ಅಡಿಕೆಯೇ ಪ್ರಮುಖವಾದ ಚಟವಾಗಿತ್ತು. ಈಗ ಮದ್ಯ ಪಾನಕ್ಕೆ ಅವಕಾಶ ಆದಂತೆಲ್ಲಾ ನಿಧಾನವಾಗಿ ಅಡಿಕೆ ಜಗಿಯವ ಚಟದ ಬದಲಾಗಿ ಮದ್ಯದ ಚಟ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಗುಟ್ಕಾ ಸೇರಿದಂತೆ ಅಡಿಕೆ ಹುಡಿ ಜಗಿಯುವ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯ ಬಗ್ಗೆ ಅಡಿಕೆ ಮಾರುಕಟ್ಟೆ ವಲಯ ಚರ್ಚೆ ಮಾಡುತ್ತದೆ. ಉತ್ತರ ಭಾರತದ ಕಡೆಗಳಲ್ಲಿ ಮದ್ಯದ ನಂತರ ಅಡಿಕೆ ಹುಡಿ ಜಗಿಯುವ ಪ್ರಮಾಣ ಕಡಿಮೆಯಾಗಿದೆ. ಇದಕ್ಕಾಗಿ ಗುಟ್ಕಾ ಹಾಗೂ ಅಡಿಕೆ ಹುಡಿ ಬಳಕೆಯಾಗುವ ಪ್ರಮಾಣ ಕಡಿಮೆಯಾಗುತ್ತದೆ. ಹೀಗಾಗಿ ಗುಜರಾತ್‌ ಕಡೆಗಳಲ್ಲಿ ಗುಣಮಟ್ಟದ ಅಡಿಕೆಯೇ ಹೆಚ್ಚು ಬೇಡಿಕೆ ಇರುವ ಪ್ರದೇಶ. ಈಗ ಮದ್ಯ ನಿಷೇಧ ವಾಪಾಸಾತಿ ಬಳಿಕ ಅಡಿಕೆ ಮಾರುಕಟ್ಟೆ ಮೇಲೆ ನಿಧಾನವಾಗಿ ಪರಿಣಾಮ ಬೀರಬಹುದೇ , ಅಥವಾ  ಇನ್ನಷ್ಟು ಬೇಡಿಕೆ ವ್ಯಕ್ತವಾಗಬಹುದೇ ಎಂಬುದು ಸದ್ಯ ಮಾರುಕಟ್ಟೆಯಲ್ಲಿ ನಡೆಯುವ ಚರ್ಚೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror