Advertisement
ಸುದ್ದಿಗಳು

ಗುಜರಾತಿನಲ್ಲಿ ಮದ್ಯನಿಷೇಧ ಆದೇಶ ಸಡಿಲ | ಅಡಿಕೆ ಮಾರುಕಟ್ಟೆಯಲ್ಲಿ ನಿಧಾನವಾಗಿ ಪರಿಣಾಮ.. ?

Share

ಗುಜರಾತ್ ಇಂಟರ್ನ್ಯಾಷನಲ್ ಫೈನಾನ್ಸ್ ಟೆಕ್-ಸಿಟಿ ಯಲ್ಲಿ “ಜಾಗತಿಕ ವ್ಯಾಪಾರ ಪರಿಸರ ವ್ಯವಸ್ಥೆ”ಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಗುಜರಾತ್ ಸರ್ಕಾರ, ಈ ಪ್ರದೇಶದಲ್ಲಿ ಮದ್ಯ ನಿಷೇಧ ಆದೇಶವನ್ನು ಹಿಂಪಡೆದಿದೆ. ಈ ಆದೇಶ ಅಡಿಕೆ ಮೇಲೆ ಪರಿಣಾಮ ಬೀರೀತೇ ಎಂಬುದು ಈಗ ಚರ್ಚೆಯಾಗುತ್ತಿರುವ ವಿಷಯ. ಅಂದ ಹಾಗೆ ಅಡಿಕೆಗೂ ಮದ್ಯಕ್ಕೂ ಏನು ಸಂಬಂಧ…?.

Advertisement

ಗುಜರಾತ್ ರಚನೆಯಾದಾಗಿನಿಂದ ರಾಜ್ಯದಲ್ಲಿ ಮದ್ಯದ ಪಾನೀಯಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಲಾಗಿದೆ. ಈ ಹಿಂದೆ ರಾಜ್ಯದ ಯಾವುದೇ ಪ್ರದೇಶದಲ್ಲಿ ಇಂತಹ ವಿನಾಯಿತಿ ನೀಡಿರಲಿಲ್ಲ. ಆದರೆ ಗಿಫ್ಟ್ ಸಿಟಿ ಜಾಗತಿಕ ಆರ್ಥಿಕ ಮತ್ತು ತಾಂತ್ರಿಕ ಕೇಂದ್ರವಾಗಿ ಹೊರಹೊಮ್ಮಿದೆ. ಇದು ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿದೆ. ಜಾಗತಿಕ ವ್ಯಾಪಾರ ಪರಿಸರ ವ್ಯವಸ್ಥೆಯನ್ನು ಕಲ್ಪಿಸಲು ಗಿಫ್ಟ್ ಸಿಟಿ ಪ್ರದೇಶದಲ್ಲಿ `ವೈನ್ ಮತ್ತು ಡೈನ್’ ಸೌಲಭ್ಯಕ್ಕೆ ಅನುಮತಿ ನೀಡುವ ಮಹತ್ವದ ನಿರ್ಧಾರವನ್ನುಗುಜರಾತ್‌ ಸರ್ಕಾರ ಕೈಗೊಂಡಿದೆ.

ಆದರೆ, ಮದ್ಯಕ್ಕೂ ಅಡಿಕೆಗೂ ಏನು ಸಂಬಂಧ…? ಇದು ಪ್ರಶ್ನೆ. ಆ ಬಳಿಕ ಉಳಿದ ಚರ್ಚೆ. ಅಡಿಕೆ ಬಹುಪಾಲು ಬಳಕೆಯಾಗುವುದು ಚಟದ ಕಾರಣದಿಂದ. ಅಂದರೆ ಜಗಿದು ಉಗಿಯಲು. ಉತ್ತರ ಭಾರತದಲ್ಲಿ ಚಳಿಯ ಕಾರಣದಿಂದ ಕೆಲವರು ಅಡಿಕೆ ಜಗಿದರೆ, ಇನ್ನೂ ಕೆಲವರು ಚಟದ ಕಾರಣದಿಂದ ಅಡಿಕೆ ಜಗಿಯುತ್ತಾರೆ.  ಕೆಲವು ಕಡೆಗಳಲ್ಲಿ ಮದ್ಯಪಾನದ ನಂತರ ಅಡಿಕೆ ಜಗಿಯುವವರೂ ಇದ್ದಾರೆ, ಮದ್ಯದ ನಂತರ ಇದೂ ಒಂದಿರಲಿ ಎನ್ನುವ ಚಟವೂ ಇದೆ.

ಈಗ ಗುಜರಾತ್‌ನ ಕೆಲವು ಭಾಗದಲ್ಲಿ ಅಡಿಕೆ ಜಗಿಯುವವರ ಪ್ರಮಾಣ ಹೆಚ್ಚಾಗಿದೆ. ಮದ್ಯ ನಿಷೇಧದ ಹಿನ್ನೆಲೆಯಲ್ಲಿ ಅಡಿಕೆಯೇ ಪ್ರಮುಖವಾದ ಚಟವಾಗಿತ್ತು. ಈಗ ಮದ್ಯ ಪಾನಕ್ಕೆ ಅವಕಾಶ ಆದಂತೆಲ್ಲಾ ನಿಧಾನವಾಗಿ ಅಡಿಕೆ ಜಗಿಯವ ಚಟದ ಬದಲಾಗಿ ಮದ್ಯದ ಚಟ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಗುಟ್ಕಾ ಸೇರಿದಂತೆ ಅಡಿಕೆ ಹುಡಿ ಜಗಿಯುವ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯ ಬಗ್ಗೆ ಅಡಿಕೆ ಮಾರುಕಟ್ಟೆ ವಲಯ ಚರ್ಚೆ ಮಾಡುತ್ತದೆ. ಉತ್ತರ ಭಾರತದ ಕಡೆಗಳಲ್ಲಿ ಮದ್ಯದ ನಂತರ ಅಡಿಕೆ ಹುಡಿ ಜಗಿಯುವ ಪ್ರಮಾಣ ಕಡಿಮೆಯಾಗಿದೆ. ಇದಕ್ಕಾಗಿ ಗುಟ್ಕಾ ಹಾಗೂ ಅಡಿಕೆ ಹುಡಿ ಬಳಕೆಯಾಗುವ ಪ್ರಮಾಣ ಕಡಿಮೆಯಾಗುತ್ತದೆ. ಹೀಗಾಗಿ ಗುಜರಾತ್‌ ಕಡೆಗಳಲ್ಲಿ ಗುಣಮಟ್ಟದ ಅಡಿಕೆಯೇ ಹೆಚ್ಚು ಬೇಡಿಕೆ ಇರುವ ಪ್ರದೇಶ. ಈಗ ಮದ್ಯ ನಿಷೇಧ ವಾಪಾಸಾತಿ ಬಳಿಕ ಅಡಿಕೆ ಮಾರುಕಟ್ಟೆ ಮೇಲೆ ನಿಧಾನವಾಗಿ ಪರಿಣಾಮ ಬೀರಬಹುದೇ , ಅಥವಾ  ಇನ್ನಷ್ಟು ಬೇಡಿಕೆ ವ್ಯಕ್ತವಾಗಬಹುದೇ ಎಂಬುದು ಸದ್ಯ ಮಾರುಕಟ್ಟೆಯಲ್ಲಿ ನಡೆಯುವ ಚರ್ಚೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

9 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

1 day ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

1 day ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

1 day ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

1 day ago