Advertisement
ಸುದ್ದಿಗಳು

ಗುಜರಾತಿನಲ್ಲಿ ಮದ್ಯನಿಷೇಧ ಆದೇಶ ಸಡಿಲ | ಅಡಿಕೆ ಮಾರುಕಟ್ಟೆಯಲ್ಲಿ ನಿಧಾನವಾಗಿ ಪರಿಣಾಮ.. ?

Share

ಗುಜರಾತ್ ಇಂಟರ್ನ್ಯಾಷನಲ್ ಫೈನಾನ್ಸ್ ಟೆಕ್-ಸಿಟಿ ಯಲ್ಲಿ “ಜಾಗತಿಕ ವ್ಯಾಪಾರ ಪರಿಸರ ವ್ಯವಸ್ಥೆ”ಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಗುಜರಾತ್ ಸರ್ಕಾರ, ಈ ಪ್ರದೇಶದಲ್ಲಿ ಮದ್ಯ ನಿಷೇಧ ಆದೇಶವನ್ನು ಹಿಂಪಡೆದಿದೆ. ಈ ಆದೇಶ ಅಡಿಕೆ ಮೇಲೆ ಪರಿಣಾಮ ಬೀರೀತೇ ಎಂಬುದು ಈಗ ಚರ್ಚೆಯಾಗುತ್ತಿರುವ ವಿಷಯ. ಅಂದ ಹಾಗೆ ಅಡಿಕೆಗೂ ಮದ್ಯಕ್ಕೂ ಏನು ಸಂಬಂಧ…?.

ಗುಜರಾತ್ ರಚನೆಯಾದಾಗಿನಿಂದ ರಾಜ್ಯದಲ್ಲಿ ಮದ್ಯದ ಪಾನೀಯಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಲಾಗಿದೆ. ಈ ಹಿಂದೆ ರಾಜ್ಯದ ಯಾವುದೇ ಪ್ರದೇಶದಲ್ಲಿ ಇಂತಹ ವಿನಾಯಿತಿ ನೀಡಿರಲಿಲ್ಲ. ಆದರೆ ಗಿಫ್ಟ್ ಸಿಟಿ ಜಾಗತಿಕ ಆರ್ಥಿಕ ಮತ್ತು ತಾಂತ್ರಿಕ ಕೇಂದ್ರವಾಗಿ ಹೊರಹೊಮ್ಮಿದೆ. ಇದು ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿದೆ. ಜಾಗತಿಕ ವ್ಯಾಪಾರ ಪರಿಸರ ವ್ಯವಸ್ಥೆಯನ್ನು ಕಲ್ಪಿಸಲು ಗಿಫ್ಟ್ ಸಿಟಿ ಪ್ರದೇಶದಲ್ಲಿ `ವೈನ್ ಮತ್ತು ಡೈನ್’ ಸೌಲಭ್ಯಕ್ಕೆ ಅನುಮತಿ ನೀಡುವ ಮಹತ್ವದ ನಿರ್ಧಾರವನ್ನುಗುಜರಾತ್‌ ಸರ್ಕಾರ ಕೈಗೊಂಡಿದೆ.

ಆದರೆ, ಮದ್ಯಕ್ಕೂ ಅಡಿಕೆಗೂ ಏನು ಸಂಬಂಧ…? ಇದು ಪ್ರಶ್ನೆ. ಆ ಬಳಿಕ ಉಳಿದ ಚರ್ಚೆ. ಅಡಿಕೆ ಬಹುಪಾಲು ಬಳಕೆಯಾಗುವುದು ಚಟದ ಕಾರಣದಿಂದ. ಅಂದರೆ ಜಗಿದು ಉಗಿಯಲು. ಉತ್ತರ ಭಾರತದಲ್ಲಿ ಚಳಿಯ ಕಾರಣದಿಂದ ಕೆಲವರು ಅಡಿಕೆ ಜಗಿದರೆ, ಇನ್ನೂ ಕೆಲವರು ಚಟದ ಕಾರಣದಿಂದ ಅಡಿಕೆ ಜಗಿಯುತ್ತಾರೆ.  ಕೆಲವು ಕಡೆಗಳಲ್ಲಿ ಮದ್ಯಪಾನದ ನಂತರ ಅಡಿಕೆ ಜಗಿಯುವವರೂ ಇದ್ದಾರೆ, ಮದ್ಯದ ನಂತರ ಇದೂ ಒಂದಿರಲಿ ಎನ್ನುವ ಚಟವೂ ಇದೆ.

ಈಗ ಗುಜರಾತ್‌ನ ಕೆಲವು ಭಾಗದಲ್ಲಿ ಅಡಿಕೆ ಜಗಿಯುವವರ ಪ್ರಮಾಣ ಹೆಚ್ಚಾಗಿದೆ. ಮದ್ಯ ನಿಷೇಧದ ಹಿನ್ನೆಲೆಯಲ್ಲಿ ಅಡಿಕೆಯೇ ಪ್ರಮುಖವಾದ ಚಟವಾಗಿತ್ತು. ಈಗ ಮದ್ಯ ಪಾನಕ್ಕೆ ಅವಕಾಶ ಆದಂತೆಲ್ಲಾ ನಿಧಾನವಾಗಿ ಅಡಿಕೆ ಜಗಿಯವ ಚಟದ ಬದಲಾಗಿ ಮದ್ಯದ ಚಟ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಗುಟ್ಕಾ ಸೇರಿದಂತೆ ಅಡಿಕೆ ಹುಡಿ ಜಗಿಯುವ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯ ಬಗ್ಗೆ ಅಡಿಕೆ ಮಾರುಕಟ್ಟೆ ವಲಯ ಚರ್ಚೆ ಮಾಡುತ್ತದೆ. ಉತ್ತರ ಭಾರತದ ಕಡೆಗಳಲ್ಲಿ ಮದ್ಯದ ನಂತರ ಅಡಿಕೆ ಹುಡಿ ಜಗಿಯುವ ಪ್ರಮಾಣ ಕಡಿಮೆಯಾಗಿದೆ. ಇದಕ್ಕಾಗಿ ಗುಟ್ಕಾ ಹಾಗೂ ಅಡಿಕೆ ಹುಡಿ ಬಳಕೆಯಾಗುವ ಪ್ರಮಾಣ ಕಡಿಮೆಯಾಗುತ್ತದೆ. ಹೀಗಾಗಿ ಗುಜರಾತ್‌ ಕಡೆಗಳಲ್ಲಿ ಗುಣಮಟ್ಟದ ಅಡಿಕೆಯೇ ಹೆಚ್ಚು ಬೇಡಿಕೆ ಇರುವ ಪ್ರದೇಶ. ಈಗ ಮದ್ಯ ನಿಷೇಧ ವಾಪಾಸಾತಿ ಬಳಿಕ ಅಡಿಕೆ ಮಾರುಕಟ್ಟೆ ಮೇಲೆ ನಿಧಾನವಾಗಿ ಪರಿಣಾಮ ಬೀರಬಹುದೇ , ಅಥವಾ  ಇನ್ನಷ್ಟು ಬೇಡಿಕೆ ವ್ಯಕ್ತವಾಗಬಹುದೇ ಎಂಬುದು ಸದ್ಯ ಮಾರುಕಟ್ಟೆಯಲ್ಲಿ ನಡೆಯುವ ಚರ್ಚೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಸಿಂಗಾರ ಒಣಗುತ್ತಿದೆಯೇ..? ನಿಮ್ಮ ತೋಟದ ಶತ್ರು ನೀವು ಬಳಸುವ ಬೇವಿನ ಎಣ್ಣೆಯೇ ಇರಬಹುದು…!

ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…

1 hour ago

ಕಳಪೆ ಅಡಿಕೆ ಪತ್ತೆ | 15.5 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…

2 hours ago

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ

ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್‌ Z ಗಾಗಿ…

10 hours ago

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

11 hours ago

ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?

ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…

11 hours ago

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

11 hours ago