Advertisement
ಸುದ್ದಿಗಳು

ಗುಜರಾತಿನಲ್ಲಿ ಮದ್ಯನಿಷೇಧ ಆದೇಶ ಸಡಿಲ | ಅಡಿಕೆ ಮಾರುಕಟ್ಟೆಯಲ್ಲಿ ನಿಧಾನವಾಗಿ ಪರಿಣಾಮ.. ?

Share

ಗುಜರಾತ್ ಇಂಟರ್ನ್ಯಾಷನಲ್ ಫೈನಾನ್ಸ್ ಟೆಕ್-ಸಿಟಿ ಯಲ್ಲಿ “ಜಾಗತಿಕ ವ್ಯಾಪಾರ ಪರಿಸರ ವ್ಯವಸ್ಥೆ”ಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಗುಜರಾತ್ ಸರ್ಕಾರ, ಈ ಪ್ರದೇಶದಲ್ಲಿ ಮದ್ಯ ನಿಷೇಧ ಆದೇಶವನ್ನು ಹಿಂಪಡೆದಿದೆ. ಈ ಆದೇಶ ಅಡಿಕೆ ಮೇಲೆ ಪರಿಣಾಮ ಬೀರೀತೇ ಎಂಬುದು ಈಗ ಚರ್ಚೆಯಾಗುತ್ತಿರುವ ವಿಷಯ. ಅಂದ ಹಾಗೆ ಅಡಿಕೆಗೂ ಮದ್ಯಕ್ಕೂ ಏನು ಸಂಬಂಧ…?.

ಗುಜರಾತ್ ರಚನೆಯಾದಾಗಿನಿಂದ ರಾಜ್ಯದಲ್ಲಿ ಮದ್ಯದ ಪಾನೀಯಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಲಾಗಿದೆ. ಈ ಹಿಂದೆ ರಾಜ್ಯದ ಯಾವುದೇ ಪ್ರದೇಶದಲ್ಲಿ ಇಂತಹ ವಿನಾಯಿತಿ ನೀಡಿರಲಿಲ್ಲ. ಆದರೆ ಗಿಫ್ಟ್ ಸಿಟಿ ಜಾಗತಿಕ ಆರ್ಥಿಕ ಮತ್ತು ತಾಂತ್ರಿಕ ಕೇಂದ್ರವಾಗಿ ಹೊರಹೊಮ್ಮಿದೆ. ಇದು ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿದೆ. ಜಾಗತಿಕ ವ್ಯಾಪಾರ ಪರಿಸರ ವ್ಯವಸ್ಥೆಯನ್ನು ಕಲ್ಪಿಸಲು ಗಿಫ್ಟ್ ಸಿಟಿ ಪ್ರದೇಶದಲ್ಲಿ `ವೈನ್ ಮತ್ತು ಡೈನ್’ ಸೌಲಭ್ಯಕ್ಕೆ ಅನುಮತಿ ನೀಡುವ ಮಹತ್ವದ ನಿರ್ಧಾರವನ್ನುಗುಜರಾತ್‌ ಸರ್ಕಾರ ಕೈಗೊಂಡಿದೆ.

Advertisement

ಆದರೆ, ಮದ್ಯಕ್ಕೂ ಅಡಿಕೆಗೂ ಏನು ಸಂಬಂಧ…? ಇದು ಪ್ರಶ್ನೆ. ಆ ಬಳಿಕ ಉಳಿದ ಚರ್ಚೆ. ಅಡಿಕೆ ಬಹುಪಾಲು ಬಳಕೆಯಾಗುವುದು ಚಟದ ಕಾರಣದಿಂದ. ಅಂದರೆ ಜಗಿದು ಉಗಿಯಲು. ಉತ್ತರ ಭಾರತದಲ್ಲಿ ಚಳಿಯ ಕಾರಣದಿಂದ ಕೆಲವರು ಅಡಿಕೆ ಜಗಿದರೆ, ಇನ್ನೂ ಕೆಲವರು ಚಟದ ಕಾರಣದಿಂದ ಅಡಿಕೆ ಜಗಿಯುತ್ತಾರೆ.  ಕೆಲವು ಕಡೆಗಳಲ್ಲಿ ಮದ್ಯಪಾನದ ನಂತರ ಅಡಿಕೆ ಜಗಿಯುವವರೂ ಇದ್ದಾರೆ, ಮದ್ಯದ ನಂತರ ಇದೂ ಒಂದಿರಲಿ ಎನ್ನುವ ಚಟವೂ ಇದೆ.

ಈಗ ಗುಜರಾತ್‌ನ ಕೆಲವು ಭಾಗದಲ್ಲಿ ಅಡಿಕೆ ಜಗಿಯುವವರ ಪ್ರಮಾಣ ಹೆಚ್ಚಾಗಿದೆ. ಮದ್ಯ ನಿಷೇಧದ ಹಿನ್ನೆಲೆಯಲ್ಲಿ ಅಡಿಕೆಯೇ ಪ್ರಮುಖವಾದ ಚಟವಾಗಿತ್ತು. ಈಗ ಮದ್ಯ ಪಾನಕ್ಕೆ ಅವಕಾಶ ಆದಂತೆಲ್ಲಾ ನಿಧಾನವಾಗಿ ಅಡಿಕೆ ಜಗಿಯವ ಚಟದ ಬದಲಾಗಿ ಮದ್ಯದ ಚಟ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಗುಟ್ಕಾ ಸೇರಿದಂತೆ ಅಡಿಕೆ ಹುಡಿ ಜಗಿಯುವ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯ ಬಗ್ಗೆ ಅಡಿಕೆ ಮಾರುಕಟ್ಟೆ ವಲಯ ಚರ್ಚೆ ಮಾಡುತ್ತದೆ. ಉತ್ತರ ಭಾರತದ ಕಡೆಗಳಲ್ಲಿ ಮದ್ಯದ ನಂತರ ಅಡಿಕೆ ಹುಡಿ ಜಗಿಯುವ ಪ್ರಮಾಣ ಕಡಿಮೆಯಾಗಿದೆ. ಇದಕ್ಕಾಗಿ ಗುಟ್ಕಾ ಹಾಗೂ ಅಡಿಕೆ ಹುಡಿ ಬಳಕೆಯಾಗುವ ಪ್ರಮಾಣ ಕಡಿಮೆಯಾಗುತ್ತದೆ. ಹೀಗಾಗಿ ಗುಜರಾತ್‌ ಕಡೆಗಳಲ್ಲಿ ಗುಣಮಟ್ಟದ ಅಡಿಕೆಯೇ ಹೆಚ್ಚು ಬೇಡಿಕೆ ಇರುವ ಪ್ರದೇಶ. ಈಗ ಮದ್ಯ ನಿಷೇಧ ವಾಪಾಸಾತಿ ಬಳಿಕ ಅಡಿಕೆ ಮಾರುಕಟ್ಟೆ ಮೇಲೆ ನಿಧಾನವಾಗಿ ಪರಿಣಾಮ ಬೀರಬಹುದೇ , ಅಥವಾ  ಇನ್ನಷ್ಟು ಬೇಡಿಕೆ ವ್ಯಕ್ತವಾಗಬಹುದೇ ಎಂಬುದು ಸದ್ಯ ಮಾರುಕಟ್ಟೆಯಲ್ಲಿ ನಡೆಯುವ ಚರ್ಚೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ – ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರ್ತಕರ ಮನವಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…

45 minutes ago

ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!

ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…

4 hours ago

ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ

ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ವಿಶೇಷ ಸಂಚಾರ ನಿರ್ವಹಣಾ…

8 hours ago

ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ

ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…

9 hours ago

ಕಾಪುವಿನಲ್ಲಿ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ – 24 ಪ್ರತಿಭೆಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 390 ಆಟಗಾರರು…

17 hours ago

ಭಾರೀ ಮಳೆ ಮುನ್ಸೂಚನೆ – ಕಾಸರಗೋಡು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…

17 hours ago