Opinion

ಪುಟ್ಟ ಚಿಟ್ಟೆ | ಭಾವ ತಟ್ಟಿದ ದಿಟ್ಟೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪ್ರಕೃತಿಯೊಡಲು ವಿಸ್ಮಯದ ಕಡಲು..! ಇಲ್ಲಿ ದೃಷ್ಟಾದೃಷ್ಟ ಸಂಗತಿಗಳು ಅದೆಷ್ಟೋ..!ಮುಕ್ತತೆಯನ್ನೂ ನಿಗೂಢತೆಯನ್ನೂ ಒಟ್ಟಾಗಿ ಬೆಸೆದುಕೊಂಡಿರುವ ಪ್ರಕೃತಿಯು ಆಗಾಗ್ಗೆ ನಮ್ಮ ಗಮನ/ಕಣ್ಮನ ಸೆಳೆಯುವಂಥ ಸಂಗತಿಗಳನ್ನು ಯಾವುದೋ ಒಂದು ರೂಪದಿಂದ ಪ್ರಕಟಿಸುತ್ತಲೇ ಇರುತ್ತದೆ. ಅದಕ್ಕೊಂದು ಪುಟ್ಟ ನಿದರ್ಶನ  ಈಚೆಗೆ ಮನೆಯಲ್ಲಿ ಕಂಡುಬಂದ ಪುಟ್ಟಚಿಟ್ಟೆ.

Advertisement
Advertisement

ದೂರದಿಂದ ಗಮನಿಸಿದಾಗ ಸಾಮಾನ್ಯ ಹಾತೆಯಂತೆ ಗೋಚರಿಸಿದ ಆ ಪಾತರಗಿತ್ತಿಯನ್ನು ಸಮೀಪದಿಂದ ಕಂಡ ನಾನು ಮಡದಿಮಕ್ಕಳ ಸಹಿತ ಬೆರಗಾದೆ. ಅದರ ರೆಕ್ಕೆಯ ಮೇಲೆ ಕಣ್ಣು , ಮೂಗು , ಮೀಸೆ, ಬಾಯಿ , ಸಪೂರವಾದ ದಂತಪಂಕ್ತಿಯಂಥ ರಚನೆಯ ಜೊತೆಗೆ ರೇಖಾವಿನ್ಯಾಸವೂ ಇದೆ. ಒಟ್ಟು ರಚನೆಯು ಕಲಾವಿದನೋರ್ವನ ಕುಂಚದಲ್ಲಿ ಮೂಡಿಬಂದ ಚಿತ್ರದಂತಿದೆ. (ನನಗೂ ನಮ್ಮ ಮನೆಯವರಿಗೂ ಯಕ್ಷಗಾನದ ಬಣ್ಣದ ವೇಷದ ಬಣ್ಣಗಾರಿಕೆಯಂತೆಯೂ ರಕ್ಕಸದೂತನ ಬಣ್ಣಗಾರಿಕೆಯಂತೆಯೂ ಕಂಡಿತು.) ಆದರೆ ಅದು ಚಿತ್ರವಾಗಿರಲಿಲ್ಲವೆಂಬುದೇ ವಿಸ್ಮಯ! ಚಿಟ್ಟೆಯದು ಜೀವಂತ! ಅದರ ರೆಕ್ಕೆಯ ಮೇಲಣ‌ ಕಲೆಯೂ ಸಜೀವ! ಕಲೆಯು ಕಟ್ಟೋಣವಲ್ವೇ? ಕಟ್ಟೋಣಕ್ಕೆ ಕೌಶಲ ಬೇಕು ತಾನೇ? ಕಲಾವಿದನು ಕುಶಲಿಯು, ಸೃಜನಶೀಲನು! ಆದರೆ, ಎಂತೆಂಥ ಬಣ್ಣ ಬಣ್ಣದ ಜೀವಿಗಳನ್ನು ಸೃಷ್ಟಿಸಿರುವ ಜಡವನ್ನೂ ಜೀವವನ್ನಾಗಿ ಪರಿವರ್ತಿಸಬಲ್ಲ ತಾಕತ್ತುಳ್ಳ ಪರಮಾತ್ಮನೇ ಅಲ್ವೇ ಪರಮಕಲಾವಿದ? ‘ಮಾನವಕಲಾವಿದ’ನಿಗೆ ‘ಪರಮಕಲಾವಿದ’ನ ಪ್ರಸಾದವಷ್ಟೇ! ಭಗವಂತನಂಥ ಸೃಜನಶೀಲತೆ ಯಕಃಶ್ಚಿತ್ ಮಾನವನಿಗೆಲ್ಲಿಂದ ಬರಬೇಕು?

ಬೆಳೆಯುತ್ತಿರುವ ಮಕ್ಕಳು ಶೈಶವಾಸ್ಥೆಯಿಂದಲೇ ತಮ್ಮ ಸುತ್ತುಮುತ್ತಲಿನ ಪ್ರಕೃತಿ-ಪರಿಸರಗಳನ್ನು ಬೆರಗುಗಣ್ಣಿನಿಂದ ನೋಡುತ್ತಾ ಅಚ್ಚರಿಪಡುವುದು ಮತ್ತು ಇಲ್ಲಿನ ಆಗುಹೋಗುಗಳನ್ನರ್ಥೈಸಿಕೊಳ್ಳಲು ಪ್ರಯತ್ನಿಸುವುದು ಸಹಜವಷ್ಟೇ! ವಯಸ್ಕರನ್ನು ಕೂಡಾ ಅಚ್ಚರಿಗೊಳಪಡಿಸುವ ಸಂಗತಿಗಳು ಅಗಾಗ್ಗೆ ಕಾಣಸಿಗುತ್ತವೆಯೆಂಬುದು ಹೊಸವಿಚಾರವೇನಲ್ಲ. ಆದರೊಂದು, ವಯಸ್ಕರ ಮಟ್ಟಿಗೆ – ಬಾಹ್ಯದೃಷ್ಟಿಯ ಜೊತೆಗೇ ಅಂತರ್ದೃಷ್ಟಿಯೂ ಜಾಗೃತವಾಗಿದ್ದು ಚಕ್ಷುನಾಲ್ಕನ್ನೂ (ಚರ್ಮಚಕ್ಷು2  + ಅಂತಃಚಕ್ಷು/ಜ್ಞಾನಚಕ್ಷು 2) ತೆರೆದು ನೋಡಿದರೆ ಮಾತ್ರ ವಿಸ್ಮಯಾನಂದಕ್ಕೊಳಗಾಗಬಹುದು ಅಥವಾ ಮುಗ್ಧಭಾವದಿಂದ , ಶಿಶುಕೌತುಕ ದೃಷ್ಟಿಯಿಂದ ನೋಡಿದರೂ ಆದೀತು ; ಅದು ಆಗಬೇಕು.

ಹಲ್ಲಿಯ ಆಕ್ರಮಣಕ್ಕೊಳಗಾಗಲಿದ್ದ ಆ ಪಾತರಗಿತ್ತಿಯನ್ನು ನನ್ನಾಕೆ ಬಹಳ ಜಾಗ್ರತೆಯಿಂದ ರಕ್ಷಿಸಿ ಹೊರಕ್ಕೆ (ಪ್ರಕೃತಿಯೊಳಕ್ಕೆ ?)ಬಿಟ್ಟಾಗ ಅದೇನೋ ಸಮಾಧಾನ ನಮಗೆಲ್ಲ! ಜೀವವಾಗಲೀ ಜಡವಾಗಲೀ ಎಲ್ಲವೂಪ್ರಕೃತಿಯೇ ಹೌದಲ್ಲ!ನಾವೂ ಅಷ್ಟೇ ತಾನೇ?

Advertisement
ಬರಹ :
ಜಯಪ್ರಕಾಶ್ ಎ ನಾಕೂರು
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

1 day ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

1 day ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

1 day ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

1 day ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

1 day ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

1 day ago