Advertisement
Opinion

ಪುಟ್ಟ ಚಿಟ್ಟೆ | ಭಾವ ತಟ್ಟಿದ ದಿಟ್ಟೆ

Share

ಪ್ರಕೃತಿಯೊಡಲು ವಿಸ್ಮಯದ ಕಡಲು..! ಇಲ್ಲಿ ದೃಷ್ಟಾದೃಷ್ಟ ಸಂಗತಿಗಳು ಅದೆಷ್ಟೋ..!ಮುಕ್ತತೆಯನ್ನೂ ನಿಗೂಢತೆಯನ್ನೂ ಒಟ್ಟಾಗಿ ಬೆಸೆದುಕೊಂಡಿರುವ ಪ್ರಕೃತಿಯು ಆಗಾಗ್ಗೆ ನಮ್ಮ ಗಮನ/ಕಣ್ಮನ ಸೆಳೆಯುವಂಥ ಸಂಗತಿಗಳನ್ನು ಯಾವುದೋ ಒಂದು ರೂಪದಿಂದ ಪ್ರಕಟಿಸುತ್ತಲೇ ಇರುತ್ತದೆ. ಅದಕ್ಕೊಂದು ಪುಟ್ಟ ನಿದರ್ಶನ  ಈಚೆಗೆ ಮನೆಯಲ್ಲಿ ಕಂಡುಬಂದ ಪುಟ್ಟಚಿಟ್ಟೆ.

ದೂರದಿಂದ ಗಮನಿಸಿದಾಗ ಸಾಮಾನ್ಯ ಹಾತೆಯಂತೆ ಗೋಚರಿಸಿದ ಆ ಪಾತರಗಿತ್ತಿಯನ್ನು ಸಮೀಪದಿಂದ ಕಂಡ ನಾನು ಮಡದಿಮಕ್ಕಳ ಸಹಿತ ಬೆರಗಾದೆ. ಅದರ ರೆಕ್ಕೆಯ ಮೇಲೆ ಕಣ್ಣು , ಮೂಗು , ಮೀಸೆ, ಬಾಯಿ , ಸಪೂರವಾದ ದಂತಪಂಕ್ತಿಯಂಥ ರಚನೆಯ ಜೊತೆಗೆ ರೇಖಾವಿನ್ಯಾಸವೂ ಇದೆ. ಒಟ್ಟು ರಚನೆಯು ಕಲಾವಿದನೋರ್ವನ ಕುಂಚದಲ್ಲಿ ಮೂಡಿಬಂದ ಚಿತ್ರದಂತಿದೆ. (ನನಗೂ ನಮ್ಮ ಮನೆಯವರಿಗೂ ಯಕ್ಷಗಾನದ ಬಣ್ಣದ ವೇಷದ ಬಣ್ಣಗಾರಿಕೆಯಂತೆಯೂ ರಕ್ಕಸದೂತನ ಬಣ್ಣಗಾರಿಕೆಯಂತೆಯೂ ಕಂಡಿತು.) ಆದರೆ ಅದು ಚಿತ್ರವಾಗಿರಲಿಲ್ಲವೆಂಬುದೇ ವಿಸ್ಮಯ! ಚಿಟ್ಟೆಯದು ಜೀವಂತ! ಅದರ ರೆಕ್ಕೆಯ ಮೇಲಣ‌ ಕಲೆಯೂ ಸಜೀವ! ಕಲೆಯು ಕಟ್ಟೋಣವಲ್ವೇ? ಕಟ್ಟೋಣಕ್ಕೆ ಕೌಶಲ ಬೇಕು ತಾನೇ? ಕಲಾವಿದನು ಕುಶಲಿಯು, ಸೃಜನಶೀಲನು! ಆದರೆ, ಎಂತೆಂಥ ಬಣ್ಣ ಬಣ್ಣದ ಜೀವಿಗಳನ್ನು ಸೃಷ್ಟಿಸಿರುವ ಜಡವನ್ನೂ ಜೀವವನ್ನಾಗಿ ಪರಿವರ್ತಿಸಬಲ್ಲ ತಾಕತ್ತುಳ್ಳ ಪರಮಾತ್ಮನೇ ಅಲ್ವೇ ಪರಮಕಲಾವಿದ? ‘ಮಾನವಕಲಾವಿದ’ನಿಗೆ ‘ಪರಮಕಲಾವಿದ’ನ ಪ್ರಸಾದವಷ್ಟೇ! ಭಗವಂತನಂಥ ಸೃಜನಶೀಲತೆ ಯಕಃಶ್ಚಿತ್ ಮಾನವನಿಗೆಲ್ಲಿಂದ ಬರಬೇಕು?

ಬೆಳೆಯುತ್ತಿರುವ ಮಕ್ಕಳು ಶೈಶವಾಸ್ಥೆಯಿಂದಲೇ ತಮ್ಮ ಸುತ್ತುಮುತ್ತಲಿನ ಪ್ರಕೃತಿ-ಪರಿಸರಗಳನ್ನು ಬೆರಗುಗಣ್ಣಿನಿಂದ ನೋಡುತ್ತಾ ಅಚ್ಚರಿಪಡುವುದು ಮತ್ತು ಇಲ್ಲಿನ ಆಗುಹೋಗುಗಳನ್ನರ್ಥೈಸಿಕೊಳ್ಳಲು ಪ್ರಯತ್ನಿಸುವುದು ಸಹಜವಷ್ಟೇ! ವಯಸ್ಕರನ್ನು ಕೂಡಾ ಅಚ್ಚರಿಗೊಳಪಡಿಸುವ ಸಂಗತಿಗಳು ಅಗಾಗ್ಗೆ ಕಾಣಸಿಗುತ್ತವೆಯೆಂಬುದು ಹೊಸವಿಚಾರವೇನಲ್ಲ. ಆದರೊಂದು, ವಯಸ್ಕರ ಮಟ್ಟಿಗೆ – ಬಾಹ್ಯದೃಷ್ಟಿಯ ಜೊತೆಗೇ ಅಂತರ್ದೃಷ್ಟಿಯೂ ಜಾಗೃತವಾಗಿದ್ದು ಚಕ್ಷುನಾಲ್ಕನ್ನೂ (ಚರ್ಮಚಕ್ಷು2  + ಅಂತಃಚಕ್ಷು/ಜ್ಞಾನಚಕ್ಷು 2) ತೆರೆದು ನೋಡಿದರೆ ಮಾತ್ರ ವಿಸ್ಮಯಾನಂದಕ್ಕೊಳಗಾಗಬಹುದು ಅಥವಾ ಮುಗ್ಧಭಾವದಿಂದ , ಶಿಶುಕೌತುಕ ದೃಷ್ಟಿಯಿಂದ ನೋಡಿದರೂ ಆದೀತು ; ಅದು ಆಗಬೇಕು.

ಹಲ್ಲಿಯ ಆಕ್ರಮಣಕ್ಕೊಳಗಾಗಲಿದ್ದ ಆ ಪಾತರಗಿತ್ತಿಯನ್ನು ನನ್ನಾಕೆ ಬಹಳ ಜಾಗ್ರತೆಯಿಂದ ರಕ್ಷಿಸಿ ಹೊರಕ್ಕೆ (ಪ್ರಕೃತಿಯೊಳಕ್ಕೆ ?)ಬಿಟ್ಟಾಗ ಅದೇನೋ ಸಮಾಧಾನ ನಮಗೆಲ್ಲ! ಜೀವವಾಗಲೀ ಜಡವಾಗಲೀ ಎಲ್ಲವೂಪ್ರಕೃತಿಯೇ ಹೌದಲ್ಲ!ನಾವೂ ಅಷ್ಟೇ ತಾನೇ?

ಬರಹ :
ಜಯಪ್ರಕಾಶ್ ಎ ನಾಕೂರು
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

5 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

6 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

13 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

21 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

22 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago