Advertisement
Opinion

ಪುಟ್ಟ ಚಿಟ್ಟೆ | ಭಾವ ತಟ್ಟಿದ ದಿಟ್ಟೆ

Share

ಪ್ರಕೃತಿಯೊಡಲು ವಿಸ್ಮಯದ ಕಡಲು..! ಇಲ್ಲಿ ದೃಷ್ಟಾದೃಷ್ಟ ಸಂಗತಿಗಳು ಅದೆಷ್ಟೋ..!ಮುಕ್ತತೆಯನ್ನೂ ನಿಗೂಢತೆಯನ್ನೂ ಒಟ್ಟಾಗಿ ಬೆಸೆದುಕೊಂಡಿರುವ ಪ್ರಕೃತಿಯು ಆಗಾಗ್ಗೆ ನಮ್ಮ ಗಮನ/ಕಣ್ಮನ ಸೆಳೆಯುವಂಥ ಸಂಗತಿಗಳನ್ನು ಯಾವುದೋ ಒಂದು ರೂಪದಿಂದ ಪ್ರಕಟಿಸುತ್ತಲೇ ಇರುತ್ತದೆ. ಅದಕ್ಕೊಂದು ಪುಟ್ಟ ನಿದರ್ಶನ  ಈಚೆಗೆ ಮನೆಯಲ್ಲಿ ಕಂಡುಬಂದ ಪುಟ್ಟಚಿಟ್ಟೆ.

ದೂರದಿಂದ ಗಮನಿಸಿದಾಗ ಸಾಮಾನ್ಯ ಹಾತೆಯಂತೆ ಗೋಚರಿಸಿದ ಆ ಪಾತರಗಿತ್ತಿಯನ್ನು ಸಮೀಪದಿಂದ ಕಂಡ ನಾನು ಮಡದಿಮಕ್ಕಳ ಸಹಿತ ಬೆರಗಾದೆ. ಅದರ ರೆಕ್ಕೆಯ ಮೇಲೆ ಕಣ್ಣು , ಮೂಗು , ಮೀಸೆ, ಬಾಯಿ , ಸಪೂರವಾದ ದಂತಪಂಕ್ತಿಯಂಥ ರಚನೆಯ ಜೊತೆಗೆ ರೇಖಾವಿನ್ಯಾಸವೂ ಇದೆ. ಒಟ್ಟು ರಚನೆಯು ಕಲಾವಿದನೋರ್ವನ ಕುಂಚದಲ್ಲಿ ಮೂಡಿಬಂದ ಚಿತ್ರದಂತಿದೆ. (ನನಗೂ ನಮ್ಮ ಮನೆಯವರಿಗೂ ಯಕ್ಷಗಾನದ ಬಣ್ಣದ ವೇಷದ ಬಣ್ಣಗಾರಿಕೆಯಂತೆಯೂ ರಕ್ಕಸದೂತನ ಬಣ್ಣಗಾರಿಕೆಯಂತೆಯೂ ಕಂಡಿತು.) ಆದರೆ ಅದು ಚಿತ್ರವಾಗಿರಲಿಲ್ಲವೆಂಬುದೇ ವಿಸ್ಮಯ! ಚಿಟ್ಟೆಯದು ಜೀವಂತ! ಅದರ ರೆಕ್ಕೆಯ ಮೇಲಣ‌ ಕಲೆಯೂ ಸಜೀವ! ಕಲೆಯು ಕಟ್ಟೋಣವಲ್ವೇ? ಕಟ್ಟೋಣಕ್ಕೆ ಕೌಶಲ ಬೇಕು ತಾನೇ? ಕಲಾವಿದನು ಕುಶಲಿಯು, ಸೃಜನಶೀಲನು! ಆದರೆ, ಎಂತೆಂಥ ಬಣ್ಣ ಬಣ್ಣದ ಜೀವಿಗಳನ್ನು ಸೃಷ್ಟಿಸಿರುವ ಜಡವನ್ನೂ ಜೀವವನ್ನಾಗಿ ಪರಿವರ್ತಿಸಬಲ್ಲ ತಾಕತ್ತುಳ್ಳ ಪರಮಾತ್ಮನೇ ಅಲ್ವೇ ಪರಮಕಲಾವಿದ? ‘ಮಾನವಕಲಾವಿದ’ನಿಗೆ ‘ಪರಮಕಲಾವಿದ’ನ ಪ್ರಸಾದವಷ್ಟೇ! ಭಗವಂತನಂಥ ಸೃಜನಶೀಲತೆ ಯಕಃಶ್ಚಿತ್ ಮಾನವನಿಗೆಲ್ಲಿಂದ ಬರಬೇಕು?

ಬೆಳೆಯುತ್ತಿರುವ ಮಕ್ಕಳು ಶೈಶವಾಸ್ಥೆಯಿಂದಲೇ ತಮ್ಮ ಸುತ್ತುಮುತ್ತಲಿನ ಪ್ರಕೃತಿ-ಪರಿಸರಗಳನ್ನು ಬೆರಗುಗಣ್ಣಿನಿಂದ ನೋಡುತ್ತಾ ಅಚ್ಚರಿಪಡುವುದು ಮತ್ತು ಇಲ್ಲಿನ ಆಗುಹೋಗುಗಳನ್ನರ್ಥೈಸಿಕೊಳ್ಳಲು ಪ್ರಯತ್ನಿಸುವುದು ಸಹಜವಷ್ಟೇ! ವಯಸ್ಕರನ್ನು ಕೂಡಾ ಅಚ್ಚರಿಗೊಳಪಡಿಸುವ ಸಂಗತಿಗಳು ಅಗಾಗ್ಗೆ ಕಾಣಸಿಗುತ್ತವೆಯೆಂಬುದು ಹೊಸವಿಚಾರವೇನಲ್ಲ. ಆದರೊಂದು, ವಯಸ್ಕರ ಮಟ್ಟಿಗೆ – ಬಾಹ್ಯದೃಷ್ಟಿಯ ಜೊತೆಗೇ ಅಂತರ್ದೃಷ್ಟಿಯೂ ಜಾಗೃತವಾಗಿದ್ದು ಚಕ್ಷುನಾಲ್ಕನ್ನೂ (ಚರ್ಮಚಕ್ಷು2  + ಅಂತಃಚಕ್ಷು/ಜ್ಞಾನಚಕ್ಷು 2) ತೆರೆದು ನೋಡಿದರೆ ಮಾತ್ರ ವಿಸ್ಮಯಾನಂದಕ್ಕೊಳಗಾಗಬಹುದು ಅಥವಾ ಮುಗ್ಧಭಾವದಿಂದ , ಶಿಶುಕೌತುಕ ದೃಷ್ಟಿಯಿಂದ ನೋಡಿದರೂ ಆದೀತು ; ಅದು ಆಗಬೇಕು.

ಹಲ್ಲಿಯ ಆಕ್ರಮಣಕ್ಕೊಳಗಾಗಲಿದ್ದ ಆ ಪಾತರಗಿತ್ತಿಯನ್ನು ನನ್ನಾಕೆ ಬಹಳ ಜಾಗ್ರತೆಯಿಂದ ರಕ್ಷಿಸಿ ಹೊರಕ್ಕೆ (ಪ್ರಕೃತಿಯೊಳಕ್ಕೆ ?)ಬಿಟ್ಟಾಗ ಅದೇನೋ ಸಮಾಧಾನ ನಮಗೆಲ್ಲ! ಜೀವವಾಗಲೀ ಜಡವಾಗಲೀ ಎಲ್ಲವೂಪ್ರಕೃತಿಯೇ ಹೌದಲ್ಲ!ನಾವೂ ಅಷ್ಟೇ ತಾನೇ?

ಬರಹ :
ಜಯಪ್ರಕಾಶ್ ಎ ನಾಕೂರು
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

5 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

8 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

17 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

19 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

20 hours ago