ಸುದ್ದಿಗಳು

Live food fest ನಲ್ಲಿ ಭಾಗವಹಿಸುತ್ತಿರುವ ಸುಳ್ಯದ ಗುತ್ತಿಗಾರಿನ ಮಹಿಳೆಯರು | ದಕ್ಷಿಣ ಕನ್ನಡ ಜಿಲ್ಲೆಯಿಂದ ಏಕೈಕ ತಂಡ ಭಾಗಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳಗಾವಿಯಲ್ಲಿ ನಡೆಯುತ್ತಿರುವ “ಅಸ್ಮಿತೆ” ಸರಸ್ ಮೇಳದ Live food fest ನಲ್ಲಿ  ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ದೀಪ ಸಂಜೀವಿನಿ ತಂಡದ ಸದಸ್ಯೆಯರು ಭಾಗವಹಿಸುತ್ತಿದ್ದಾರೆ.ಈ ತಂಡದಲ್ಲಿ  ಶಾರದ ನಡುಗಲ್ಲು, ಇಂದಿರಾ ಬಾಳುಗೋಡು,ಸೆಲಿನ ಸೆಬಾಸ್ಟಿನ್,ರಮ್ಯ ಉಜಿರಡ್ಕ,ಚೈತನ್ಯ ಇವರ ತಂಡ ಇದ್ದು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನಿಂದ ಪ್ರತಿನಿಧಿಸುತ್ತಿರುವ ಏಕೈಕ ತಂಡ ಇದಾಗಿದೆ.ಡಿ.22 ರಿಂದ 30 ರವರೆಗೆ ಈ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯುತ್ತದೆ.

Advertisement

Live food fest ಬೆಳಗಾವಿಯಲ್ಲಿನಡೆಯುತ್ತಿದೆ.  ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನಿಂದ ಪ್ರತಿನಿಧಿಸುತ್ತಿರುವ ಏಕೈಕ ತಂಡ ಇದಾಗಿದ್ದು, ಕಳೆದ  ಬಾರಿ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ  ಅಮರ ಸಂಜೀವಿನಿ ಒಕ್ಕೂಟದ ಸಿದ್ದಿದಾತ್ರಿ ತಂಡದ ಸ್ಪೂರ್ತಿ ಈ ಬಾರಿ ರಾಜ್ಯ ಮಟ್ಟದಲ್ಲಿ ನಡೆಯುವ ಸರಸ್ ಮೇಳದಲ್ಲಿ ದೀಪ ಸಂಜೀವಿನಿ ಭಾಗವಹಿಸುವಂತೆ ಮಾಡಿದೆ. ಮಹಿಳೆಯರನ್ನು ಸ್ವಾವಲಂಬಿ ಜೀವನದತ್ತ ಕೊಂಡೊಯ್ಯುವಲ್ಲಿ ಸಂಜೀವಿನಿಯು ಪ್ರೇರಣೆಯಾಗಿದೆ. ಈ ನಿಟ್ಟಿನಲ್ಲಿ  ಒಕ್ಕೂಟದ ಪ್ರಯತ್ನವು ಸಾಗಿದೆ.

ಅನುಭವದಿಂದ ಕಲಿಯುವ ಪಾಠ ಹಾಗು ಸೃಜನಶೀಲ ಚಟುವಟಿಕೆಗಳ ವೀಕ್ಷಣೆ  ಪ್ರತೀ ಊರಿನ ಮಹಿಳೆಯರಿಗೆ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಇಂತಹ ಸರಸ್ ಮೇಳದಲ್ಲಿ ಭಾಗವಹಿಸುವ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ. ಅವಕಾಶ ಸಿಕ್ಕಾಗ ಬಳಸಿಕೊಳ್ಳುವುದು ಅನುಭವದ ಮಾತು ಈ ನಿಟ್ಟಿನಲ್ಲಿ ಇಂದು ದೀಪ ಸಂಜೀವಿನಿ ಸದಸ್ಯೆಯರು ಇಂತಹ ಕಾರ್ಯಕ್ರಮದಲ್ಲಿ ಭಾಗಿಗಳಾಗಲಿದ್ದಾರೆ.

ಈ ತಂಡವನ್ನು ಗುತ್ತಿಗಾರಿನಿಂದ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇವತಿ ಆಚಳ್ಳಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಪತಿ, ತಾಲೂಕು ಕಾರ್ಯಕ್ರಮ ಸಂಯೋಜಕಿ  ಶ್ವೇತ, ಒಕ್ಕೂಟದ ಅಧ್ಯಕ್ಷರಾದ ದಿವ್ಯ ಸುಜನ್ ಗುಡ್ಡೆಮನೆ, ಪಂಚಾಯತ್ ಸದಸ್ಯೆ  ಲತಾ ಕುಮಾರಿ ಆಜಡ್ಕ,  ಮಿತ್ರಕುಮಾರಿ ಚಿಕ್ಮುಳಿ,  ದಿವ್ಯ ಚತ್ರಪ್ಪಾಡಿ, ಸವಿತ ಕುಳ್ಳಂಪಾಡಿ,ಗೀತ ವಳಲಂಬೆ, ಗ್ರಂಥಪಾಲಕಿ ಅಭಿಲಾಷ ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೂಡಿಟ್ಟ ಆಸ್ತಿ ಮನೆಯಲ್ಲೇ ನಡೀತು ಕುಸ್ತಿ

ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…

4 hours ago

ಹವಾಮಾನ ವರದಿ | 23-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ | ರಾಜ್ಯದಲ್ಲಿ ಎ.27 ರ ನಂತರ ಮಳೆ ಹೆಚ್ಚಾಗುವ ಲಕ್ಷಣ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…

10 hours ago

ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಯಶಸ್ಸು | ಕೋಟ್ಯಾಧಿಪತಿ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

17 hours ago

ಹೊಸರುಚಿ | ಗುಜ್ಜೆ ಮೊಸರು ಗೊಜ್ಜು

ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು :  ಗುಜ್ಜೆ 1 ಕಪ್ ಬೇಯಿಸಿ…

17 hours ago

ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ

ಜಮ್ಮು- ಕಾಶ್ಮೀರದ  ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ  ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…

1 day ago