Advertisement
ಸುದ್ದಿಗಳು

Live food fest ನಲ್ಲಿ ಭಾಗವಹಿಸುತ್ತಿರುವ ಸುಳ್ಯದ ಗುತ್ತಿಗಾರಿನ ಮಹಿಳೆಯರು | ದಕ್ಷಿಣ ಕನ್ನಡ ಜಿಲ್ಲೆಯಿಂದ ಏಕೈಕ ತಂಡ ಭಾಗಿ |

Share

ಬೆಳಗಾವಿಯಲ್ಲಿ ನಡೆಯುತ್ತಿರುವ “ಅಸ್ಮಿತೆ” ಸರಸ್ ಮೇಳದ Live food fest ನಲ್ಲಿ  ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ದೀಪ ಸಂಜೀವಿನಿ ತಂಡದ ಸದಸ್ಯೆಯರು ಭಾಗವಹಿಸುತ್ತಿದ್ದಾರೆ.ಈ ತಂಡದಲ್ಲಿ  ಶಾರದ ನಡುಗಲ್ಲು, ಇಂದಿರಾ ಬಾಳುಗೋಡು,ಸೆಲಿನ ಸೆಬಾಸ್ಟಿನ್,ರಮ್ಯ ಉಜಿರಡ್ಕ,ಚೈತನ್ಯ ಇವರ ತಂಡ ಇದ್ದು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನಿಂದ ಪ್ರತಿನಿಧಿಸುತ್ತಿರುವ ಏಕೈಕ ತಂಡ ಇದಾಗಿದೆ.ಡಿ.22 ರಿಂದ 30 ರವರೆಗೆ ಈ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯುತ್ತದೆ.

Live food fest ಬೆಳಗಾವಿಯಲ್ಲಿನಡೆಯುತ್ತಿದೆ.  ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನಿಂದ ಪ್ರತಿನಿಧಿಸುತ್ತಿರುವ ಏಕೈಕ ತಂಡ ಇದಾಗಿದ್ದು, ಕಳೆದ  ಬಾರಿ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ  ಅಮರ ಸಂಜೀವಿನಿ ಒಕ್ಕೂಟದ ಸಿದ್ದಿದಾತ್ರಿ ತಂಡದ ಸ್ಪೂರ್ತಿ ಈ ಬಾರಿ ರಾಜ್ಯ ಮಟ್ಟದಲ್ಲಿ ನಡೆಯುವ ಸರಸ್ ಮೇಳದಲ್ಲಿ ದೀಪ ಸಂಜೀವಿನಿ ಭಾಗವಹಿಸುವಂತೆ ಮಾಡಿದೆ. ಮಹಿಳೆಯರನ್ನು ಸ್ವಾವಲಂಬಿ ಜೀವನದತ್ತ ಕೊಂಡೊಯ್ಯುವಲ್ಲಿ ಸಂಜೀವಿನಿಯು ಪ್ರೇರಣೆಯಾಗಿದೆ. ಈ ನಿಟ್ಟಿನಲ್ಲಿ  ಒಕ್ಕೂಟದ ಪ್ರಯತ್ನವು ಸಾಗಿದೆ.

ಅನುಭವದಿಂದ ಕಲಿಯುವ ಪಾಠ ಹಾಗು ಸೃಜನಶೀಲ ಚಟುವಟಿಕೆಗಳ ವೀಕ್ಷಣೆ  ಪ್ರತೀ ಊರಿನ ಮಹಿಳೆಯರಿಗೆ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಇಂತಹ ಸರಸ್ ಮೇಳದಲ್ಲಿ ಭಾಗವಹಿಸುವ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ. ಅವಕಾಶ ಸಿಕ್ಕಾಗ ಬಳಸಿಕೊಳ್ಳುವುದು ಅನುಭವದ ಮಾತು ಈ ನಿಟ್ಟಿನಲ್ಲಿ ಇಂದು ದೀಪ ಸಂಜೀವಿನಿ ಸದಸ್ಯೆಯರು ಇಂತಹ ಕಾರ್ಯಕ್ರಮದಲ್ಲಿ ಭಾಗಿಗಳಾಗಲಿದ್ದಾರೆ.

ಈ ತಂಡವನ್ನು ಗುತ್ತಿಗಾರಿನಿಂದ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇವತಿ ಆಚಳ್ಳಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಪತಿ, ತಾಲೂಕು ಕಾರ್ಯಕ್ರಮ ಸಂಯೋಜಕಿ  ಶ್ವೇತ, ಒಕ್ಕೂಟದ ಅಧ್ಯಕ್ಷರಾದ ದಿವ್ಯ ಸುಜನ್ ಗುಡ್ಡೆಮನೆ, ಪಂಚಾಯತ್ ಸದಸ್ಯೆ  ಲತಾ ಕುಮಾರಿ ಆಜಡ್ಕ,  ಮಿತ್ರಕುಮಾರಿ ಚಿಕ್ಮುಳಿ,  ದಿವ್ಯ ಚತ್ರಪ್ಪಾಡಿ, ಸವಿತ ಕುಳ್ಳಂಪಾಡಿ,ಗೀತ ವಳಲಂಬೆ, ಗ್ರಂಥಪಾಲಕಿ ಅಭಿಲಾಷ ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

5 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

17 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

18 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

1 day ago