21ನೇ ಜಾನುವಾರು ಗಣತಿ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಪ್ರಥಮ ಸ್ಥಾನ ಪಡೆದಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸುಮಾರು 2,90,551 ರೈತರು ಪಶುಸಂಗೋಪನೆಯಲ್ಲಿ ತೊಡಗಿಕೊಂಡಿದ್ದಾರೆ. ಪಶು ಇಲಾಖೆಯಲ್ಲಿ ಒಟ್ಟು 105 ಪಶು ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದೆ. ಜಾನುವಾರು ಗಣತಿ ಪ್ರಕಾರ 1,70,720 ದನಗಳು, 14,924 ಎಮ್ಮೆಗಳು, 1,17,715 ಕುರಿಗಳು, 95,000 ಮೇಕೆಗಳು ಜಿಲ್ಲೆಯಲ್ಲಿದೆ ಎಂದು ಪಶು ಸಂಗೋಪನೆ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಜಗದೀಶ್ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 5.5 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಜಾನುವಾರು ವಿಮೆ ಸೌಲಭ್ಯವನ್ನು ಎ.ಪಿ.ಎಲ್ ಪಡಿತರ ಚೀಟಿಗೆ ಶೇಖಡ 50 ರಷ್ಟು, ಬಿ.ಪಿ.ಎಲ್ ಪಡಿತರ ಚೀಟಿಗೆ ಶೇಖಡ 75 ರಷ್ಟು ನೀಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಪ್ರತಿ ಐದು ವರ್ಷಕ್ಕೊಮ್ಮೆ ಜಾನುವಾರು ಸಮೀಕ್ಷೆ ನಡೆಸಲಾಗುತ್ತದೆ. 2019 ರಲ್ಲಿ ನಡೆದ ಸಮೀಕ್ಷೆಯ ಪ್ರಕಾರ 3.03 ಕೋಟಿ ಜಾನುವಾರುಗಳು ಇದ್ದವು.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…