Advertisement

ಜಾನುವಾರು ಗಣತಿ | ಬೆಂಗಳೂರು ಗ್ರಾಮಾಂತರ ಜಿಲ್ಲೆ ಪ್ರಥಮ | 2.90 ಲಕ್ಷ ರೈತರು ಪಶುಸಂಗೋಪನೆಯಲ್ಲಿ |

Share

21ನೇ ಜಾನುವಾರು ಗಣತಿ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಪ್ರಥಮ ಸ್ಥಾನ ಪಡೆದಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸುಮಾರು  2,90,551 ರೈತರು ಪಶುಸಂಗೋಪನೆಯಲ್ಲಿ ತೊಡಗಿಕೊಂಡಿದ್ದಾರೆ. ಪಶು ಇಲಾಖೆಯಲ್ಲಿ ಒಟ್ಟು 105 ಪಶು ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದೆ. ಜಾನುವಾರು ಗಣತಿ ಪ್ರಕಾರ 1,70,720 ದನಗಳು, 14,924 ಎಮ್ಮೆಗಳು, 1,17,715 ಕುರಿಗಳು, 95,000 ಮೇಕೆಗಳು ಜಿಲ್ಲೆಯಲ್ಲಿದೆ  ಎಂದು ಪಶು ಸಂಗೋಪನೆ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಜಗದೀಶ್ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 5.5 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಜಾನುವಾರು ವಿಮೆ ಸೌಲಭ್ಯವನ್ನು ಎ.ಪಿ.ಎಲ್ ಪಡಿತರ ಚೀಟಿಗೆ ಶೇಖಡ 50 ರಷ್ಟು, ಬಿ.ಪಿ.ಎಲ್ ಪಡಿತರ ಚೀಟಿಗೆ ಶೇಖಡ 75 ರಷ್ಟು ನೀಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಪ್ರತಿ ಐದು ವರ್ಷಕ್ಕೊಮ್ಮೆ ಜಾನುವಾರು ಸಮೀಕ್ಷೆ ನಡೆಸಲಾಗುತ್ತದೆ. 2019 ರಲ್ಲಿ ನಡೆದ ಸಮೀಕ್ಷೆಯ ಪ್ರಕಾರ 3.03 ಕೋಟಿ ಜಾನುವಾರುಗಳು ಇದ್ದವು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 hour ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

3 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

10 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

17 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago