21ನೇ ಜಾನುವಾರು ಗಣತಿ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಪ್ರಥಮ ಸ್ಥಾನ ಪಡೆದಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸುಮಾರು 2,90,551 ರೈತರು ಪಶುಸಂಗೋಪನೆಯಲ್ಲಿ ತೊಡಗಿಕೊಂಡಿದ್ದಾರೆ. ಪಶು ಇಲಾಖೆಯಲ್ಲಿ ಒಟ್ಟು 105 ಪಶು ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದೆ. ಜಾನುವಾರು ಗಣತಿ ಪ್ರಕಾರ 1,70,720 ದನಗಳು, 14,924 ಎಮ್ಮೆಗಳು, 1,17,715 ಕುರಿಗಳು, 95,000 ಮೇಕೆಗಳು ಜಿಲ್ಲೆಯಲ್ಲಿದೆ ಎಂದು ಪಶು ಸಂಗೋಪನೆ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಜಗದೀಶ್ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 5.5 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಜಾನುವಾರು ವಿಮೆ ಸೌಲಭ್ಯವನ್ನು ಎ.ಪಿ.ಎಲ್ ಪಡಿತರ ಚೀಟಿಗೆ ಶೇಖಡ 50 ರಷ್ಟು, ಬಿ.ಪಿ.ಎಲ್ ಪಡಿತರ ಚೀಟಿಗೆ ಶೇಖಡ 75 ರಷ್ಟು ನೀಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಪ್ರತಿ ಐದು ವರ್ಷಕ್ಕೊಮ್ಮೆ ಜಾನುವಾರು ಸಮೀಕ್ಷೆ ನಡೆಸಲಾಗುತ್ತದೆ. 2019 ರಲ್ಲಿ ನಡೆದ ಸಮೀಕ್ಷೆಯ ಪ್ರಕಾರ 3.03 ಕೋಟಿ ಜಾನುವಾರುಗಳು ಇದ್ದವು.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…