ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳನ್ನು ಭರ್ಜರಿಯಾಗಿ ಮಾಡಲಾಗುತ್ತಿದೆ. ದಸರಾ ಮಹೋತ್ಸವದ ಮುಖ್ಯ ಆಕರ್ಷಣೆ ಜಂಬೂ ಸವಾರಿ. ಹಾಗಾಗಿ ಆನೆಗಳು ಇಲ್ಲಿ ಬಹಳ ಪ್ರಾಮುಖ್ತೆಯನ್ನು ಪಡೆಯುತ್ತವೆ. ಅದಕ್ಕೆ ರಾಜ ಮರ್ಯಾದಿಯಿಂದ ಬರಮಾಡಿಕೊಳ್ಳಲಾಗುತ್ತದೆ. ಹಾಗಾಗಿ ಸೆ.1ಕ್ಕೆ ಗಜಪಯಣಕ್ಕೆ ಚಾಲನೆ ದೊರಕಲಿದೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಕಲ ತಯಾರಿ ನಡೆಯುತ್ತಿದ್ದು, ಸೆ.1ಕ್ಕೆ ಗಜಪಯಣಕ್ಕೆ ಚಾಲನೆ ದೊರಕಲಿದೆ.ಸೆ.4ಕ್ಕೆ ಅರಮನೆಗೆ ಆನೆಗಳ ಪ್ರವೇಶವಾಗಲಿದೆ. ಜಂಬೂಸವಾರಿ ಮೆರವಣಿಗೆಗೆ ಆನೆಗಳ ಆಯ್ಕೆ ಬಹುತೇಕ ಪೂರ್ಣವಾಗಿದೆ. ಈಗಾಗಲೇ ಆನೆಗಳ ಆಯ್ಕೆ ಅರಣ್ಯಾಧಿಕಾರಿಗಳು ಮಾಡಿದ್ದಾರೆ.ಜಂಬೂಸವಾರಿ ಮೆರವಣಿಗೆಗೆ ಆಯ್ಕೆ ಮಾಡಿರುವ ಆನೆಗಳಿಗೆ ವಿವಿಧ ರೀತಿ ಪರೀಕ್ಷೆಗಳನ್ನು ಮಾಡಿದ್ದಾರೆ. ಆನೆಗಳನ್ನು ತಯಾರು ಮಾಡ್ತಿದ್ದಾರೆ.
ಸೆಪ್ಟೆಂಬರ್ 1ರಂದು ವೀರನಹೊಸಳ್ಳಿಯಲ್ಲಿ ಗಜಪಯಣಕ್ಕೆ ಮುಹೂರ್ತ ನಿಗದಿಯಾಗಿದ್ದು, ಸಾಂಪ್ರದಾಯಿಕವಾಗಿ ಗಜಪಡೆಗೆ ಜಿಲ್ಲಾಡಳಿತ ಸ್ವಾಗತ ಕೋರಲಿದೆ. ಸೆಪ್ಟೆಂಬರ್ 4ರಂದು ಗಜಪಡೆ ಅರಮನೆ ಪ್ರವೇಶ ಮಾಡಲಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ಜಂಬೂಸವಾರಿ ಮೆರವಣಿಗೆಗೆ ಕ್ಯಾಪ್ಟನ್ ಅಭಿಮನ್ಯು ರೆಡಿಯಾಗುತ್ತಿದ್ದು, 750 ಕೆಜಿಯ ಚಿನ್ನದ ಅಂಬಾರಿ ಹೊತ್ತು ಹೆಜ್ಜೆ ಹಾಕಲಿದೆ ಅಭಿಮನ್ಯು.ಅಕ್ಟೋಬರ್ 15ರಂದು ದಸರಾ ಮಹೋತ್ಸವ ಉದ್ಘಾಟನೆ ಆಗಲಿದೆ. ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ದಸರಾ ಉದ್ಘಾಟನೆ ಆಗುತ್ತೆ. ವಸ್ತು ಪ್ರದರ್ಶನ ಕೂಡ ಅಂದೇ ಆರಂಭವಾಗಲಿದೆ.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…