ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳನ್ನು ಭರ್ಜರಿಯಾಗಿ ಮಾಡಲಾಗುತ್ತಿದೆ. ದಸರಾ ಮಹೋತ್ಸವದ ಮುಖ್ಯ ಆಕರ್ಷಣೆ ಜಂಬೂ ಸವಾರಿ. ಹಾಗಾಗಿ ಆನೆಗಳು ಇಲ್ಲಿ ಬಹಳ ಪ್ರಾಮುಖ್ತೆಯನ್ನು ಪಡೆಯುತ್ತವೆ. ಅದಕ್ಕೆ ರಾಜ ಮರ್ಯಾದಿಯಿಂದ ಬರಮಾಡಿಕೊಳ್ಳಲಾಗುತ್ತದೆ. ಹಾಗಾಗಿ ಸೆ.1ಕ್ಕೆ ಗಜಪಯಣಕ್ಕೆ ಚಾಲನೆ ದೊರಕಲಿದೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಕಲ ತಯಾರಿ ನಡೆಯುತ್ತಿದ್ದು, ಸೆ.1ಕ್ಕೆ ಗಜಪಯಣಕ್ಕೆ ಚಾಲನೆ ದೊರಕಲಿದೆ.ಸೆ.4ಕ್ಕೆ ಅರಮನೆಗೆ ಆನೆಗಳ ಪ್ರವೇಶವಾಗಲಿದೆ. ಜಂಬೂಸವಾರಿ ಮೆರವಣಿಗೆಗೆ ಆನೆಗಳ ಆಯ್ಕೆ ಬಹುತೇಕ ಪೂರ್ಣವಾಗಿದೆ. ಈಗಾಗಲೇ ಆನೆಗಳ ಆಯ್ಕೆ ಅರಣ್ಯಾಧಿಕಾರಿಗಳು ಮಾಡಿದ್ದಾರೆ.ಜಂಬೂಸವಾರಿ ಮೆರವಣಿಗೆಗೆ ಆಯ್ಕೆ ಮಾಡಿರುವ ಆನೆಗಳಿಗೆ ವಿವಿಧ ರೀತಿ ಪರೀಕ್ಷೆಗಳನ್ನು ಮಾಡಿದ್ದಾರೆ. ಆನೆಗಳನ್ನು ತಯಾರು ಮಾಡ್ತಿದ್ದಾರೆ.
ಸೆಪ್ಟೆಂಬರ್ 1ರಂದು ವೀರನಹೊಸಳ್ಳಿಯಲ್ಲಿ ಗಜಪಯಣಕ್ಕೆ ಮುಹೂರ್ತ ನಿಗದಿಯಾಗಿದ್ದು, ಸಾಂಪ್ರದಾಯಿಕವಾಗಿ ಗಜಪಡೆಗೆ ಜಿಲ್ಲಾಡಳಿತ ಸ್ವಾಗತ ಕೋರಲಿದೆ. ಸೆಪ್ಟೆಂಬರ್ 4ರಂದು ಗಜಪಡೆ ಅರಮನೆ ಪ್ರವೇಶ ಮಾಡಲಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ಜಂಬೂಸವಾರಿ ಮೆರವಣಿಗೆಗೆ ಕ್ಯಾಪ್ಟನ್ ಅಭಿಮನ್ಯು ರೆಡಿಯಾಗುತ್ತಿದ್ದು, 750 ಕೆಜಿಯ ಚಿನ್ನದ ಅಂಬಾರಿ ಹೊತ್ತು ಹೆಜ್ಜೆ ಹಾಕಲಿದೆ ಅಭಿಮನ್ಯು.ಅಕ್ಟೋಬರ್ 15ರಂದು ದಸರಾ ಮಹೋತ್ಸವ ಉದ್ಘಾಟನೆ ಆಗಲಿದೆ. ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ದಸರಾ ಉದ್ಘಾಟನೆ ಆಗುತ್ತೆ. ವಸ್ತು ಪ್ರದರ್ಶನ ಕೂಡ ಅಂದೇ ಆರಂಭವಾಗಲಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…