MIRROR FOCUS

ಊರಿಡೀ ಲಾಕ್ಡೌನ್ | ಸಾಮಾಜಿಕ ಕಾರ್ಯಗಳು ಅನ್‌ ಲಾಕ್‌ | ಗುತ್ತಿಗಾರು ಪಂಚಾಯತ್‌ ವ್ಯಾಪ್ತಿಯಲ್ಲಿ ಮಾದರಿ ಕಾರ್ಯಗಳು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೊರೋನಾ ಮಹಾಮಾರಿ ಗ್ರಾಮೀಣ ಪ್ರದೇಶಗಳಲ್ಲೂ ವ್ಯಾಪಿಸಿಕೊಂಡಿದೆ. ಹೀಗಾಗಿ ಗ್ರಾಮಗಳಲ್ಲಿ  ಕೊರೋನಾ ಪಾಸಿಟಿವ್‌ ಪ್ರಕರಣ ಹೆಚ್ಚಾಗುತ್ತಿದ್ದಂತೆಯೇ ಸೀಲ್‌ ಡೌನ್‌ , ಲಾಕ್ಡೌನ್‌ ಮಾಡಲೇಬೇಕಾದ ಅನಿವಾರ್ಯತೆ ಉಂಟಾಗಿತ್ತು. ಆದರೆ ಈ ಸಮಯವನ್ನು ಸಾಮಾಜಿಕ ಕೆಲಸ ಕಾರ್ಯ ಮಾಡುವ ಮನಸ್ಸುಳ್ಳ ಮಂದಿ ಉತ್ತಮವಾಗಿ ಬಳಕೆ ಮಾಡಿಕೊಂಡರು. ಅದಕ್ಕೆ ಉದಾಹರಣೆ ಗುತ್ತಿಗಾರು ಗ್ರಾಮ ಪಂಚಾಯತ್‌ ವ್ಯಾಪ್ತಿ.

Advertisement
Advertisement

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ  ಕೊರೋನಾ ಪಾಸಿಟಿವ್‌ ಪ್ರಕರಣ ಹೆಚ್ಚಾಗಿತ್ತು ಹಾಗೂ ಪಾಸಿಟಿವಿಟಿ ರೇಟ್‌ ಕೂಡಾ ಹೆಚ್ಚಿದ್ದ ಕಾರಣ ಇಡೀ ಗ್ರಾಮ ಸೀಲ್‌ ಡೌನ್‌ ಮಾಡಲೇ ಬೇಕಾದ ಅನಿವಾರ್ಯತೆ ಉಂಟಾಗಿತ್ತು. ಹೀಗಾಗಿ ಕಳೆದ ಸೋಮವಾರದಿಂದ ಗುತ್ತಿಗಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸೀಲ್‌ ಡೌನ್‌ ಜಾರಿಯಲ್ಲಿದೆ. ಈ ಸಂದರ್ಭ ಗುತ್ತಿಗಾರು ಗ್ರಾ ಪಂ ಅಧ್ಯಕ್ಷೆ  , ಕೆಲವು ಸದಸ್ಯರು , ಪಿಡಿಒ ಅವರೂ ಕೂಡಾ ಸಾಮಾಜಿಕವಾಗಿ ತೊಡಗಿಸಿಕೊಂಡರು. ಗ್ರಾಮದ ಜನರ ಸುರಕ್ಷತೆಯಲ್ಲಿ  ತೊಡಗಿಸಿಕೊಂಡರು.

 

Advertisement

ಗುತ್ತಿಗಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮೊದಲನೇ ವಾರ್ಡ್‌ ನ ಸದಸ್ಯೆ ಲತಾ ಕುಮಾರಿ ಹಾಗೂ ಭರತ್‌ ಕೆವಿ ಅವರು ಬೆಳಗ್ಗೆ 6 ಗಂಟೆಗೇ ಸೀಲ್‌ ಡೌನ್‌ ಮಾಡಿರುವ ಗೇಟ್‌ ಬಳಿಗೆ ಬಂದು ಕೆಲಸ ನಿರ್ವಹಿಸಿ ಗ್ರಾಮದ ಜನರ ಸುರಕ್ಷತೆಯಲ್ಲಿ  ತೊಡಗಿಸಿಕೊಂಡರೆ ಹಿರಿಯ ಸದಸ್ಯೆ ಶಾರದಾ ಎಂ ಕೆ ಅವರು ವಾರ್ಡ್‌ ಒಳಗಿನ ಜನರ ಆರೋಗ್ಯದ ಕಾಳಜಿ ಹಾಗೂ ಅಗತ್ಯ ವಸ್ತುಗಳ ಬಗ್ಗೆ ಗಮನಹರಿಸಿದರು. ಗ್ರಾ ಪಂ ಸದಸ್ಯ ವಸಂತ ಅವರು ವಾರ್ಡ್‌ ನ ವಿವಿದೆಡೆ ನಡೆಸಲಾದ ಗೇಟ್‌ ಗಳ ಅಳವಡಿಕೆ ಹಾಗೂ ಇತರ ಕಾರ್ಯಗಳ ಬಗ್ಗೆ ನೋಡಿಕೊಂಡರು. ಅದರ ಜೊತೆಗೆ ಸಾಮಾಜಿಕ ಕೆಲಸಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರು. ಲತಾ ಕುಮಾರಿ ಅವರು ಮನೆಯ ಎಲ್ಲಾ ಕೆಲಸ ಕಾರ್ಯಗಳನ್ನು  ನಡೆಸಿ ಬೆಳಗ್ಗೆಯೇ ಬಂದು ಊರಿನ ಹಿತಕ್ಕಾಗಿ ಸರಕಾರದ ನಿಯಮದಂತೆ ಕಟ್ಟುನಿಟ್ಟಾಗಿ ಕೆಲಸ ಮಾಡಿರುವುದು  ಗಮನ ಸೆಳೆದಿತ್ತು. ‌

ಸಾರ್ವಜನಿಕರು ಕೂಡಾ ಸಾಮಾಜಿಕವಾಗಿ ಕೆಲಸ ಮಾಡಿದರು. ಚತ್ರಪ್ಪಾಡಿ ಬಳಿ ನೂತನವಾಗಿ ನಿರ್ಮಾಣಗೊಂಡ ಕಾಂಕ್ರೀಟ್‌ ರಸ್ತೆಯಲ್ಲಿ  ನೀರು ನಿಂತು ವಾಹನ ಓಡಾಟ ಕಷ್ಟವಾಗುತ್ತಿತ್ತು. ಹೀಗಾಗಿ ಇಲ್ಲಿ ಚರಂಡಿ ದುರಸ್ತಿ ಕಾರ್ಯವನ್ನು  ರವೀಂದ್ರ ಆಜಡ್ಕ ಹಾಗೂ ಯುವಕರಾದ ನಿಶ್ಚಿತ್‌ ರಾಂ ತುಪ್ಪದಮನೆ, ಅಜಯ್‌ ಸಂಪ್ಯಾಡಿ, ಶ್ರವಣ್‌ ಸಂಪ್ಯಾಡಿ, ಶ್ರೇಯಸ್‌ ಸಂಪ್ಯಾಡಿ ತೊಡಗಿಸಿಕೊಂಡರು. ಈ ಸಮಯದಲ್ಲಿ  ಯುವಕರನ್ನು ಕೂಡಾ ಸಾಮಾಜಿಕ ಕೆಲಸ ಕಾರ್ಯಗಳಿಗೆ ಹಾಗೂ ಧನಾತ್ಮಕ ವಿಚಾರಗಳ ಕಡೆಗೆ ಸೆಳೆಯುವಂತೆ ಮಾಡಿತು.

ಗುತ್ತಿಗಾರು ಗ್ರಾ ಪಂ ಅಧ್ಯಕ್ಷೆ ರೇವತಿ ಅವರು ಗುತ್ತಿಗಾರು ಬಸ್‌ ನಿಲ್ದಾಣ ಸ್ವಚ್ಛತೆ ಸೇರಿದಂತೆ  ವಿವಿಧ ಸಾಮಾಜಿಕ ಕೆಲಸಗಳಲ್ಲಿ  ತೊಡಗಿಸಿಕೊಂಡರು. ಮಾಜಿ ಅಧ್ಯಕ್ಷ ಅಚ್ಚುತ ಗುತ್ತಿಗಾರು ಅವರು  ಕೂಡಾ ಪೇಟೆ ಸ್ವಚ್ಛತಾ ಕಾರ್ಯ, ನೀರಿನ ಟ್ಯಾಂಕ್‌ ಸ್ವಚ್ಚತಾ ಕಾರ್ಯದಲ್ಲಿ  ತೊಡಗಿಸಿಕೊಂಡರು. ಉಳಿದಂತೆ ಕೊರೋನಾ ಕಾರ್ಯಪಡೆ ಸದಸ್ಯರು ಸಹಕರಿಸಿದರು. ನಡುಗಲ್ಲಿನಲ್ಲಿ ವಿಜಯ ಕುಮಾರ್ ಚಾರ್ಮತ ಅವರ ನೇತೃತ್ವದಲ್ಲಿ  ಕೂಡಾ ಸಾಮಾಜಿಕ ಕೆಲಸಗಳು ನಡೆದವು.

Advertisement

 

 

ಗ್ರಾ ಪಂ ಪಿಡಿಒ ಶ್ಯಾಮ ಪ್ರಸಾದ್‌ ಅವರು ಕೂಡಾ ಗ್ರಾಮದ ಗಡಿಗಳಲ್ಲಿ  ನಿಂತು ಸರಕಾರದ ನಿಯಮಗಳನ್ನು  ಕಟ್ಟುನಿಟ್ಟಾಗಿ ಜಾರಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದರು.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಶ್ವಪರಿಸರ ದಿನ | ತಾಯಿಯ ಹೆಸರಲ್ಲಿ ಒಂದು ಮರ -2.0 ಅಭಿಯಾನ

"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…

12 hours ago

ಮದುವೆಯ ವಿಳಂಬಕ್ಕೆ ಈ ಕಾರಣವೂ ಇರಬಹುದು..! ಪರಿಹಾರ ಕ್ರಮಗಳು ಇಲ್ಲಿದೆ ನೋಡಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

1 day ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

2 days ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

2 days ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 days ago