ಕೊರೋನಾ ಲಾಕ್ಡೌನ್‌ ಜಾರಿಗಾಗಿ ಪೊಲೀಸರು ಅನಗತ್ಯವಾಗಿ ಬಲ ಪ್ರಯೋಗಿಸಬಾರದು – ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ

May 11, 2021
8:20 PM

ಕೊರೋನಾ ಲಾಕ್ಡೌನ್‌ ಜಾರಿಗಾಗಿ ಹಾಗೂ ಕೊರೋನಾ ಮಾರ್ಗಸೂಚಿಗಳ ಅನುಷ್ಟಾನಕ್ಕಾಗಿ ಪೊಲೀಸರು ಅನಗತ್ಯವಾಗಿ ಬಲ ಪ್ರಯೋಗ ಮಾಡಬಾರದು ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚಿಸಿದೆ.

ಬಲಪ್ರಯೋಗ ಸೇರಿದಂತೆ ಕೊರೋನ ಸಂಬಂಧದ  ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಹಾಗೂ ಹಿರಿಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ನ್ಯಾಯಪೀಠ, ಲಾಕ್ಡೌನ್ ಜಾರಿಗಾಗಿ ಪೊಲೀಸರು ಅನಗತ್ಯವಾಗಿ ಸಾರ್ವಜನಿಕರ ಮೇಲೆ ಬಲ ಪ್ರಯೋಗಿಸಬಾರದು ಎಂದು ಸೂಚಿಸಿದೆ.

Advertisement

ಈ ನಡುವೆ ಲಾಕ್ಡೌನ್‌ ಸಂದರ್ಭದಲ್ಲಿ  ಯಾವುದೇ ವಾಹನಗಳು ಓಡಾಟ ನಡೆಸಬಾರದು ಎಂಬ ನಿಯಮವನ್ನು ಮೀರಿ ರಸ್ತೆಗೆ ಇಳಿದ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 19,949 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಮೇ 10 ರಿಂದ ಪ್ರಾರಂಭವಾದ ಲಾಕ್ಡೌನ್‌ ಮೇ.  24  ರವರೆಗೆ ಇರಲಿದೆ. ನಿಯಮದ ಪ್ರಕಾರ ಅಲ್ಲಿಯವರೆಗೂ ವಾಹನಗಳು ರಸ್ತೆಗೆ ಇಳಿದರೆ ಪೊಲೀಸ್‌ ವಶವಾಗಲಿದೆ.

ದ ಕ ಜಿಲ್ಲೆಯಲ್ಲಿ  ಮಂಗಳವಾರ ಕೋವಿಡ್‌ ನಿಯಮ ಉಲ್ಲಂಘನೆಯ ಒಂದು ಪ್ರಕರಣ ದಾಖಲಾಗಿದ್ದರೆ ಮಾಸ್ಕ್‌ ಧರಿಸದ 291 ಪ್ರಕರಣಗಳಲ್ಲಿ  ದಂಡ ವಿಧಿಸಲಾಗಿದ್ದು ಒಟ್ಟು 63  ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ದ ಕ ಜಿಲ್ಲಾ ಪೊಲೀಸ್‌ ಪ್ರಕಟಣೆ ತಿಳಿಸಿದೆ.    

Advertisement

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ
ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ
June 27, 2026
9:36 PM
by: ದ ರೂರಲ್ ಮಿರರ್.ಕಾಂ
34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!
June 27, 2026
9:07 PM
by: ಮಿರರ್‌ ಡೆಸ್ಕ್
ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
June 27, 2026
9:00 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror