ಕೊರೋನಾ ಲಾಕ್ಡೌನ್‌ ಜಾರಿಗಾಗಿ ಪೊಲೀಸರು ಅನಗತ್ಯವಾಗಿ ಬಲ ಪ್ರಯೋಗಿಸಬಾರದು – ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ

May 11, 2021
8:20 PM

ಕೊರೋನಾ ಲಾಕ್ಡೌನ್‌ ಜಾರಿಗಾಗಿ ಹಾಗೂ ಕೊರೋನಾ ಮಾರ್ಗಸೂಚಿಗಳ ಅನುಷ್ಟಾನಕ್ಕಾಗಿ ಪೊಲೀಸರು ಅನಗತ್ಯವಾಗಿ ಬಲ ಪ್ರಯೋಗ ಮಾಡಬಾರದು ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚಿಸಿದೆ.

Advertisement

ಬಲಪ್ರಯೋಗ ಸೇರಿದಂತೆ ಕೊರೋನ ಸಂಬಂಧದ  ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಹಾಗೂ ಹಿರಿಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ನ್ಯಾಯಪೀಠ, ಲಾಕ್ಡೌನ್ ಜಾರಿಗಾಗಿ ಪೊಲೀಸರು ಅನಗತ್ಯವಾಗಿ ಸಾರ್ವಜನಿಕರ ಮೇಲೆ ಬಲ ಪ್ರಯೋಗಿಸಬಾರದು ಎಂದು ಸೂಚಿಸಿದೆ.

ಈ ನಡುವೆ ಲಾಕ್ಡೌನ್‌ ಸಂದರ್ಭದಲ್ಲಿ  ಯಾವುದೇ ವಾಹನಗಳು ಓಡಾಟ ನಡೆಸಬಾರದು ಎಂಬ ನಿಯಮವನ್ನು ಮೀರಿ ರಸ್ತೆಗೆ ಇಳಿದ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 19,949 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಮೇ 10 ರಿಂದ ಪ್ರಾರಂಭವಾದ ಲಾಕ್ಡೌನ್‌ ಮೇ.  24  ರವರೆಗೆ ಇರಲಿದೆ. ನಿಯಮದ ಪ್ರಕಾರ ಅಲ್ಲಿಯವರೆಗೂ ವಾಹನಗಳು ರಸ್ತೆಗೆ ಇಳಿದರೆ ಪೊಲೀಸ್‌ ವಶವಾಗಲಿದೆ.

ದ ಕ ಜಿಲ್ಲೆಯಲ್ಲಿ  ಮಂಗಳವಾರ ಕೋವಿಡ್‌ ನಿಯಮ ಉಲ್ಲಂಘನೆಯ ಒಂದು ಪ್ರಕರಣ ದಾಖಲಾಗಿದ್ದರೆ ಮಾಸ್ಕ್‌ ಧರಿಸದ 291 ಪ್ರಕರಣಗಳಲ್ಲಿ  ದಂಡ ವಿಧಿಸಲಾಗಿದ್ದು ಒಟ್ಟು 63  ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ದ ಕ ಜಿಲ್ಲಾ ಪೊಲೀಸ್‌ ಪ್ರಕಟಣೆ ತಿಳಿಸಿದೆ.    

 

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ
April 23, 2026
3:10 PM
by: ಮಿರರ್‌ ಡೆಸ್ಕ್
ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ
April 23, 2026
2:48 PM
by: ಮಿರರ್‌ ಡೆಸ್ಕ್
ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ
April 23, 2026
2:41 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು
April 23, 2026
2:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror