Advertisement
ಸುದ್ದಿಗಳು

ಕೊರೋನಾ ಲಾಕ್ಡೌನ್‌ ಜಾರಿಗಾಗಿ ಪೊಲೀಸರು ಅನಗತ್ಯವಾಗಿ ಬಲ ಪ್ರಯೋಗಿಸಬಾರದು – ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ

Share

ಕೊರೋನಾ ಲಾಕ್ಡೌನ್‌ ಜಾರಿಗಾಗಿ ಹಾಗೂ ಕೊರೋನಾ ಮಾರ್ಗಸೂಚಿಗಳ ಅನುಷ್ಟಾನಕ್ಕಾಗಿ ಪೊಲೀಸರು ಅನಗತ್ಯವಾಗಿ ಬಲ ಪ್ರಯೋಗ ಮಾಡಬಾರದು ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚಿಸಿದೆ.

ಬಲಪ್ರಯೋಗ ಸೇರಿದಂತೆ ಕೊರೋನ ಸಂಬಂಧದ  ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಹಾಗೂ ಹಿರಿಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ನ್ಯಾಯಪೀಠ, ಲಾಕ್ಡೌನ್ ಜಾರಿಗಾಗಿ ಪೊಲೀಸರು ಅನಗತ್ಯವಾಗಿ ಸಾರ್ವಜನಿಕರ ಮೇಲೆ ಬಲ ಪ್ರಯೋಗಿಸಬಾರದು ಎಂದು ಸೂಚಿಸಿದೆ.

ಈ ನಡುವೆ ಲಾಕ್ಡೌನ್‌ ಸಂದರ್ಭದಲ್ಲಿ  ಯಾವುದೇ ವಾಹನಗಳು ಓಡಾಟ ನಡೆಸಬಾರದು ಎಂಬ ನಿಯಮವನ್ನು ಮೀರಿ ರಸ್ತೆಗೆ ಇಳಿದ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 19,949 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಮೇ 10 ರಿಂದ ಪ್ರಾರಂಭವಾದ ಲಾಕ್ಡೌನ್‌ ಮೇ.  24  ರವರೆಗೆ ಇರಲಿದೆ. ನಿಯಮದ ಪ್ರಕಾರ ಅಲ್ಲಿಯವರೆಗೂ ವಾಹನಗಳು ರಸ್ತೆಗೆ ಇಳಿದರೆ ಪೊಲೀಸ್‌ ವಶವಾಗಲಿದೆ.

ದ ಕ ಜಿಲ್ಲೆಯಲ್ಲಿ  ಮಂಗಳವಾರ ಕೋವಿಡ್‌ ನಿಯಮ ಉಲ್ಲಂಘನೆಯ ಒಂದು ಪ್ರಕರಣ ದಾಖಲಾಗಿದ್ದರೆ ಮಾಸ್ಕ್‌ ಧರಿಸದ 291 ಪ್ರಕರಣಗಳಲ್ಲಿ  ದಂಡ ವಿಧಿಸಲಾಗಿದ್ದು ಒಟ್ಟು 63  ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ದ ಕ ಜಿಲ್ಲಾ ಪೊಲೀಸ್‌ ಪ್ರಕಟಣೆ ತಿಳಿಸಿದೆ.    

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

9 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

13 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

2 days ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

2 days ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

2 days ago