Advertisement
ಪ್ರಮುಖ

ಚುನಾವಣಾ ಕಣ | ಇಂದು 5 ನೇ ಹಂತದ ಮತದಾನ | 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ

Share

ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ ಕಾಯುತ್ತಿದ್ದ ಚುನಾವಣೆಯ ಇಂದು ಐದನೇ ಹಂತದಲ್ಲಿ (Loksabha Elections 2024) ಮತದಾನ ನಡೆಯುತ್ತಿದೆ. 6 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ ಒಟ್ಟು 49 ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಲಿದೆ. ಬಿಹಾರದ 5, ಜಮ್ಮು ಮತ್ತು ಕಾಶ್ಮೀರದ 1, ಜಾರ್ಖಂಡ್‌ನ 3, ಲಡಾಖ್‍ನ 1, ಮಹಾರಾಷ್ಟ್ರದ 13, ಒಡಿಶಾದ 5, ಉತ್ತರ ಪ್ರದೇಶದ 14 ಮತ್ತು ಪಶ್ಚಿಮ ಬಂಗಾಳದ 7 ಸ್ಥಾನಗಳಿಗೆ ಮತದಾನ ನಡೆಯಲಿದೆ. ಅಮೇಥಿ, ರಾಯ್ ಬರೇಲಿ, ಲಕ್ನೋ, ಕೈಸರ್ ಗಂಜ್, ಸರನ್ ಮತ್ತು ಮುಂಬೈನ ಎಲ್ಲಾ ಕ್ಷೇತ್ರಗಳು ಹೈವೊಲ್ಟೇಜ್ ಕ್ಷೇತ್ರಗಳಾಗಿವೆ.

ಉತ್ತರ ಪ್ರದೇಶದ ಅಮೇಥಿಯಿಂದ ಸ್ಮೃತಿ ಇರಾನಿ ಮತ್ತು ಕೆಎಲ್ ಶರ್ಮಾ, ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಮತ್ತು ದಿನೇಶ್ ಪ್ರತಾಪ್ ಸಿಂಗ್, ಲಕ್ನೋದಿಂದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಹಾರದ ಸರಣ್‍ನಿಂದ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ, ಮಹಾರಾಷ್ಟ್ರ ಕಲ್ಯಾಣದಿಂದ ಸಿಎಂ ಏಕನಾಥ್ ಶಿಂಧೆ ಅವರ ಪುತ್ರ ಡಾ.ಶ್ರೀಕಾಂತ್ ಶಿಂಧೆ, ಮುಂಬೈ ಉತ್ತರದಿಂದ ಕೇಂದ್ರ ಸಚಿವ ಪಿಯೂಷ್ ಗೋಯಲ್, ಹಿರಿಯ ವಕೀಲ ಉಜ್ವಲ್ ನಿಕಮ್, ಮಧ್ಯ ಮುಂಬೈ ವರ್ಷಾ ಗಾಯಕ್ವಾಡ್ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.

ಪ್ರಮುಖ ನಾಯಕರು, ನಟರಿಂದ ಮತದಾನ: ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ದಿನೇಶ್ ಪ್ರತಾಪ್ ಸಿಂಗ್, ರಾಯ್ ಬರೇಲಿ ಬಿಜೆಪಿ ಅಭ್ಯರ್ಥಿ ದಿನೇಶ್ ಪ್ರತಾಪ್ ಸಿಂಗ್, ಮುಂಬೈ ಉತ್ತರ ಬಿಜೆಪಿ ಅಭ್ಯರ್ಥಿ ಪಿಯೂಷ್ ಗೊಯೇಲ್, ಅಮಿರ್ ಪುರ್ ನಲ್ಲಿ ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಹಾಗೂ ಕೈಸರಗಂಜ್ ನಲ್ಲಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಈಗಾಗಲೇ ಮತದಾನ ಮಾಡಿದ್ದಾರೆ. ಇನ್ನು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರು ಕುಟುಂಬ ಸಮೇತರಾಗಿ ಮುಂಬೈನಲ್ಲಿ ತಮ್ಮ ಹಕ್ಕು ಚಲಾಯಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

7 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

7 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

23 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

24 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

1 day ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

2 days ago