Advertisement
ಸುದ್ದಿಗಳು

ರಾಜ್ಯದಲ್ಲಿ ಎನ್‌ಡಿಎ “ಕೈ” ಹಿಡಿದ ಮತದಾರರು | ದೇಶದಲ್ಲಿ “ಕೂಡಿ” ಆಳುವ ಆಡಳಿತ..! |

Share

ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ ಬಿಜೆಪಿ 17 ಸ್ಥಾನಗಳಲ್ಲಿ, ಜೆಡಿಎಸ್ 2 ಸ್ಥಾನಗಳಲ್ಲಿ ಹಾಗೂ ಕಾಂಗ್ರೆಸ್ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ದೇಶದಲ್ಲಿ ಇದುವರೆಗಿನ ಮಾಹಿತಿ ಪ್ರಕಾರ ಒಟ್ಟು 543 ಸ್ಥಾನಗಳ ಪೈಕಿ NDA ಮೈತ್ರಿಕೂಟ 294 , INDIA 231 ಹಾಗೂ  ಇತರರು 18 ಸ್ಥಾನಗಳಲ್ಲಿ ಗೆಲುವು ಕಂಡಿದ್ದಾರೆ. 2019 ರಲ್ಲಿ NDA ಮೈತ್ರಿಕೂಟ 362 ಸ್ಥಾನ ಹಾಗೂ ಕಾಂಗ್ರೆಸ್‌ ಒಕ್ಕೂಟ 120  ಸ್ಥಾನಗಳನ್ನು ಪಡೆದಿತ್ತು.ಇದೀಗ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಬಹುಮತ ಪಡೆದಿದೆ , ಸರ್ಕಾರ ರಚನೆಗೆ ಸಿದ್ಧತೆ ನಡೆಸುತ್ತಿದೆ.

ಎನ್‌ಡಿಎ ಸತತ ಮೂರನೇ ಬಾರಿಗೆ ಸರ್ಕಾರ ರಚಿಸಲು ಮುಂದಾಗಿದ್ದು,ಕನಿಷ್ಠ 294 ಸ್ಥಾನಗಳನ್ನು ಗಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು, ಎಕ್ಸ್‌ ಮೂಲಕ ಸಂದೇಶ ನೀಡಿ, ” ಜನರು ಸತತ ಮೂರನೇ ಬಾರಿಗೆ ಎನ್‌ಡಿಎ ಮೇಲೆ ನಂಬಿಕೆ ಇಟ್ಟಿದ್ದಾರೆ. ಇದು ಭಾರತದ ಇತಿಹಾಸದಲ್ಲಿ ಒಂದು ಐತಿಹಾಸಿಕ ಸಾಧನೆಯಾಗಿದೆ. ಈ ಪ್ರೀತಿಗಾಗಿ ನಾನು ಜನತಾ ಜನಾರ್ದನರಿಗೆ  ನಮಸ್ಕರಿಸುತ್ತೇನೆ ಮತ್ತು ಜನರ ಆಶೋತ್ತರಗಳನ್ನು ಈಡೇರಿಸಲು ಕಳೆದ ದಶಕದಲ್ಲಿ ಮಾಡಿದ ಉತ್ತಮ ಕೆಲಸವನ್ನು ನಾವು ಮುಂದುವರಿಸುತ್ತೇವೆ ಎಂದು ಭರವಸೆ ನೀಡುತ್ತೇನೆ” ಎಂದು ಅವರು ಹೇಳಿದ್ದಾರೆ.

ಚುನಾವಣಾ ಫಲಿತಾಂಶದ ಬಳಿಕ ಮಾತನಾಡಿದ ಕಾಂಗ್ರೆಸ್‌ ನಾಯಕ  ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು, ಇಂದಿನ ಜನಾದೇಶವು, ದೇಶದ ಜನರು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರನ್ನು ಬಯಸುವುದಿಲ್ಲ ಎಂಬುದಕ್ಕೆ ಸ್ಪಷ್ಟ ಸೂಚನೆಯಾಗಿದೆ ಎಂದು ಹೇಳಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

9 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

13 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

14 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

16 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

17 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

1 day ago