Advertisement
ಸುದ್ದಿಗಳು

ರಾಜ್ಯದಲ್ಲಿ ಎನ್‌ಡಿಎ “ಕೈ” ಹಿಡಿದ ಮತದಾರರು | ದೇಶದಲ್ಲಿ “ಕೂಡಿ” ಆಳುವ ಆಡಳಿತ..! |

Share

ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ ಬಿಜೆಪಿ 17 ಸ್ಥಾನಗಳಲ್ಲಿ, ಜೆಡಿಎಸ್ 2 ಸ್ಥಾನಗಳಲ್ಲಿ ಹಾಗೂ ಕಾಂಗ್ರೆಸ್ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ದೇಶದಲ್ಲಿ ಇದುವರೆಗಿನ ಮಾಹಿತಿ ಪ್ರಕಾರ ಒಟ್ಟು 543 ಸ್ಥಾನಗಳ ಪೈಕಿ NDA ಮೈತ್ರಿಕೂಟ 294 , INDIA 231 ಹಾಗೂ  ಇತರರು 18 ಸ್ಥಾನಗಳಲ್ಲಿ ಗೆಲುವು ಕಂಡಿದ್ದಾರೆ. 2019 ರಲ್ಲಿ NDA ಮೈತ್ರಿಕೂಟ 362 ಸ್ಥಾನ ಹಾಗೂ ಕಾಂಗ್ರೆಸ್‌ ಒಕ್ಕೂಟ 120  ಸ್ಥಾನಗಳನ್ನು ಪಡೆದಿತ್ತು.ಇದೀಗ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಬಹುಮತ ಪಡೆದಿದೆ , ಸರ್ಕಾರ ರಚನೆಗೆ ಸಿದ್ಧತೆ ನಡೆಸುತ್ತಿದೆ.

ಎನ್‌ಡಿಎ ಸತತ ಮೂರನೇ ಬಾರಿಗೆ ಸರ್ಕಾರ ರಚಿಸಲು ಮುಂದಾಗಿದ್ದು,ಕನಿಷ್ಠ 294 ಸ್ಥಾನಗಳನ್ನು ಗಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು, ಎಕ್ಸ್‌ ಮೂಲಕ ಸಂದೇಶ ನೀಡಿ, ” ಜನರು ಸತತ ಮೂರನೇ ಬಾರಿಗೆ ಎನ್‌ಡಿಎ ಮೇಲೆ ನಂಬಿಕೆ ಇಟ್ಟಿದ್ದಾರೆ. ಇದು ಭಾರತದ ಇತಿಹಾಸದಲ್ಲಿ ಒಂದು ಐತಿಹಾಸಿಕ ಸಾಧನೆಯಾಗಿದೆ. ಈ ಪ್ರೀತಿಗಾಗಿ ನಾನು ಜನತಾ ಜನಾರ್ದನರಿಗೆ  ನಮಸ್ಕರಿಸುತ್ತೇನೆ ಮತ್ತು ಜನರ ಆಶೋತ್ತರಗಳನ್ನು ಈಡೇರಿಸಲು ಕಳೆದ ದಶಕದಲ್ಲಿ ಮಾಡಿದ ಉತ್ತಮ ಕೆಲಸವನ್ನು ನಾವು ಮುಂದುವರಿಸುತ್ತೇವೆ ಎಂದು ಭರವಸೆ ನೀಡುತ್ತೇನೆ” ಎಂದು ಅವರು ಹೇಳಿದ್ದಾರೆ.

ಚುನಾವಣಾ ಫಲಿತಾಂಶದ ಬಳಿಕ ಮಾತನಾಡಿದ ಕಾಂಗ್ರೆಸ್‌ ನಾಯಕ  ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು, ಇಂದಿನ ಜನಾದೇಶವು, ದೇಶದ ಜನರು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರನ್ನು ಬಯಸುವುದಿಲ್ಲ ಎಂಬುದಕ್ಕೆ ಸ್ಪಷ್ಟ ಸೂಚನೆಯಾಗಿದೆ ಎಂದು ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ

ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…

7 hours ago

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?

ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…

14 hours ago

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

1 day ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

1 day ago

ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ

ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್‌ನ ಪ್ರಬಲ ಚಂಡಮಾರುತ…

1 day ago

ಮತ್ತೆ ಹೆಚ್ಚಿದ ದೇಶದ ಮಳೆ ಕೊರತೆ – ಜುಲೈ ಆರಂಭದ ಚೇತರಿಕೆ ಕುಂಠಿತ, ಮುಂಗಾರು ಮತ್ತೆ ದುರ್ಬಲ

ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…

1 day ago