2024ರ ಲೋಕಸಭಾ ಚುನಾವಣೆ | ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ | ಜೂನ್ 4ಕ್ಕೆ ಮತಎಣಿಕೆ

March 16, 2024
4:26 PM

ಇಡೀ ದೇಶವೇ ಕುತೂಹಲದಿಂದ ಕಾಯುತ್ತಿದ್ದ 2024ರ ಲೋಕಸಭಾ ಚುನಾವಣೆಗೆ (Lok Sabha election 2024) ಇದೀಗ ಮುಹೂರ್ತ (Election Date) ಘೋಷಣೆಯಾಗಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ (Rajiv Kumar) ಸುದ್ದಿಗೋಷ್ಠಿ ನಡೆಸಿ, ಲೋಕಸಭಾ ಚುನಾವಣೆಯ ದಿನಾಂಕ ಘೋಷಿಸಿದ್ದಾರೆ.  ಲೋಕಸಭಾ ಚುನಾವಣೆಗೆ (Lok Sabha Election 2024) ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕರ್ನಾಟಕದಲ್ಲಿ ಮತದಾನ ನಡೆಯಲಿದೆ.

Advertisement
Advertisement

ಏಪ್ರಿಲ್ 19 ರಿಂದ ಒಟ್ಟು 7 ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಜೂನ್ 4ಕ್ಕೆ ಮತಎಣಿಕೆ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ. ಇನ್ನು ಕರ್ನಾಟಕದಲ್ಲಿ ಎಲೆಕ್ಷನ್ (Karnataka Lok Sabha Election) ಯಾವಾಗ? ಎಷ್ಟು ಹಂತಗಳಲ್ಲಿ ಚುನಾವಣೆ ನಡೆಯುತ್ತೆ? ಈ ಪ್ರಶ್ನೆಗಳಿಗೂ ಚುನಾವಣಾ ಆಯೋಗ ಉತ್ತರ ನೀಡಿದೆ. ಏ.26 ಕ್ಕೆ ಮೊದಲ ಹಾಗೂ ಮೇ 7 ಕ್ಕೆ ಎರಡನೇ ಹಂತದ ಮತದಾನ ನಡೆಯಲಿದೆ. ಜೂನ್ 4ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ತಿಳಿಸಿದರು.

ಕಳೆದ ಬಾರಿ ಯಾವಾಗ ಮತದಾನ ನಡೆದಿತ್ತು? : ಕಳೆದ ಬಾರಿ ಕರ್ನಾಟಕದಲ್ಲಿ (Karnataka Lok Sabha Election 2024) ಎರಡು ಹಂತದಲ್ಲಿ ಮತದಾನ ನಡೆದಿತ್ತು. ಏ.18 ರಂದು 14 ಕ್ಷೇತ್ರಗಳಿಗೆ ಹಾಗೂ ಏ.23 ರಂದು 14 ಕ್ಷೇತ್ರಗಳಿಗೆ ಮತದಾನ ನಡೆದಿತ್ತು.

  • ಅಂತರ್ಜಾಲ ಮಾಹಿತಿ

Lok Sabha Election 2024 Date 19 April 2024: The Election Commission of India announced on Saturday that Lok Sabha elections will be held in 7 phases. Counting for all elections, including by-elections, assembly elections, and general elections, is slated for June 4. The current government’s term is ending on June 16.

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಫಸಲ್ ಭೀಮಾ ಯೋಜನೆ ಹಣ ಬಿಡುಗಡೆ | ಕಲಬುರಗಿ ಜಿಲ್ಲೆಗೆ ಹೆಚ್ಚಿನ ಬೆಳೆ ವಿಮೆ
July 26, 2025
3:56 PM
by: The Rural Mirror ಸುದ್ದಿಜಾಲ
ಲಡಾಖ್‌ನ ದ್ರಾಸುದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ| ವೀರಯೋಧರಿಗೆ ಪಾದಯಾತ್ರೆ ಮೂಲಕ ಗೌರವ
July 26, 2025
3:16 PM
by: The Rural Mirror ಸುದ್ದಿಜಾಲ
ಬದುಕಿಗೆ ಧರ್ಮದ ತಳಹದಿ ಅಗತ್ಯ : ರಾಘವೇಶ್ವರ ಶ್ರೀ
July 26, 2025
2:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2025 | ಜುಲೈ ಅಂತ್ಯದವರೆಗೂ ಸಾಮಾನ್ಯ ಮಳೆ | ಕಾರಣ ಏನು ?
July 26, 2025
11:18 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group