ಜು. 19 ರಿಂದ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

July 15, 2022
10:19 AM

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಸಾರ್ವಜನಿಕರಿಂದ ದೂರು ಪಡೆಯಲು ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಜು.19‌ ರಿಂದ ಜಿಲ್ಲೆಯ ವಿವಿಧ ತಾಲೂಕುಗಳ ಪ್ರವಾಸ ಕೈಗೊಂಡಿದ್ದಾರೆ.

Advertisement
Advertisement
ಜು.19ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಡಬ ತಾಲೂಕಿನ ಕಡಬ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ, ಜು.20ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೂಡಬಿದ್ರೆ ತಾಲೂಕು ಕಚೇರಿಯಲ್ಲಿ ಹಾಗೂ ಜು.21ರ ಗುರುವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಳ್ಳಾಲ ತಾಲೂಕಿನ ನಗರಸಭಾ ಸಭಾಂಗಣದಲ್ಲಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲಿದ್ದಾರೆ. ಉಳಿದಂತೆ ಇತರೆ ದಿನಗಳಲ್ಲಿಯೂ ಕಚೇರಿ ವೇಳೆಯಲ್ಲಿ ಸಾರ್ವಜನಿಕರು ಅಹವಾಲು, ದೂರುಗಳನ್ನು ನೀಡಬಹುದು.

ಅರ್ಜಿದಾರರು ನಗರದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಕಚೇರಿಗೆ ಅಥವಾ ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ವೀಧಿಯಲ್ಲಿರುವ ಬಹು ಮಹಡಿ ಕಟ್ಟಡದ ಲೋಕಾಯುಕ್ತ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಚೇರಿ ದೂ.ಸಂಖ್ಯೆ:0824-2950997, 9243456629, ಪೊಲೀಸ್ ಉಪಾಧೀಕ್ಷಕರ-1 ಕಚೇರಿ ದೂ.ಸಂಖ್ಯೆ:0824-2453420, 9448635348, ಪೊಲೀಸ್ ಉಪಾಧೀಕ್ಷಕರ-2 ಕಚೇರಿ ದೂ.ಸಂಖ್ಯೆ:0824-2453420, 7019967061, ಪೊಲೀಸ್ ನಿರೀಕ್ಷಕರ ಕಚೇರಿ ದೂ.ಸಂಖ್ಯೆ:0824-2427237, 9448461816 ಮೂಲಕ ಸಂಪರ್ಕಿಸುವಂತೆ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ
ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ
February 12, 2026
6:47 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror